HomeUncategorizedಗಾಜಾದ 'ವಿಶಾಲ ಪ್ರದೇಶಗಳ' ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

- Advertisement -
- Advertisement -

ಗಾಜಾದ ‘ವಿಶಾಲ ಪ್ರದೇಶಗಳ’ನ್ನು ವಶಪಡಿಸಿಕೊಳ್ಳಲು ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ವಿಸ್ತರಣೆಗೊಳಿಸುತ್ತೇವೆ. ಇದಕ್ಕಾಗಿ ಗಾಜಾ ನಿವಾಸಿಗಳು ಹೊರಹೋಗುವಂತೆ ಆದೇಶಿಸುತ್ತೇವೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಘೋಷಿಸಿದ್ದಾರೆ.

ಈ ಕುರಿತು ವಿವರಗಳನ್ನು ನಿರ್ದಿಷ್ಟಪಡಿಸದೆ, ಕಾರ್ಯಾಚರಣೆಯು “ಯುದ್ಧ ವಲಯಗಳಿಂದ ಗಾಜಾದ ಜನಸಂಖ್ಯೆಯನ್ನು ದೊಡ್ಡ ಪ್ರಮಾಣದಲ್ಲಿ ಸ್ಥಳಾಂತರಿಸುವುದು” ಒಳಗೊಂಡಿರುತ್ತದೆ ಎಂದು ಕ್ಯಾಟ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲ್ ನ ವೈಮಾನಿಕ ದಾಳಿಗಳಿಂದ ಕಳೆದ 24 ಗಂಟೆಗಳಲ್ಲಿ ಇದುವರೆಗೆ ಡಜನ್ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ವಿಶ್ವಸಂಸ್ಥೆಯ ಆಶ್ರಯ ತಾಣಕ್ಕೆ ದಾಳಿಯಾದಾಗ ಕನಿಷ್ಠ ಒಂಬತ್ತು ಮಕ್ಕಳು ಸೇರಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಿಲಿಟರಿ ಕಾರ್ಯಾಚರಣೆಯು “ಭಯೋತ್ಪಾದಕರು ಮತ್ತು ಭಯೋತ್ಪಾದಕ ಮೂಲಸೌಕರ್ಯಗಳ ಪ್ರದೇಶವನ್ನು ಪುಡಿಮಾಡಿ ತೆರವುಗೊಳಿಸಲಾಗುತ್ತದೆ. ಮಂಗಳವಾರ ತಡರಾತ್ರಿ ನಮ್ಮ ಇಸ್ರೇಲಿ ಮಿಲಿಟರಿಯ ಅರೇಬಿಕ್ ಮಾಧ್ಯಮದ ವಕ್ತಾರರು ಗಾಜಾದ ದಕ್ಷಿಣ ರಫಾ ಪ್ರದೇಶದ ನಿವಾಸಿಗಳಿಗೆ ತಮ್ಮ ಮನೆಗಳನ್ನು ತೊರೆದು ಉತ್ತರಕ್ಕೆ ತೆರಳುವಂತೆ ಆದೇಶಿಸಿದ್ದಾರೆ ಎಂದು ರಕ್ಷಣಾ ಸಚಿವರ ಹೇಳಿಕೆ ತಿಳಿಸಿದೆ.

ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ವೀಡಿಯೊ ಭಾಷಣದಲ್ಲಿ ಗಾಜಾದಲ್ಲಿ ಮಿಲಿಟರಿ ವಿಸ್ತರಣೆಯನ್ನು ಘೋಷಿಸಿದರು ಮತ್ತು ಅಲ್ಲಿ ಬಂಧಿಸಲ್ಪಟ್ಟ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಗಾಜಾ ಪಟ್ಟಿಯ ಮೇಲೆ ಒತ್ತಡವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದರು.

“ನಾವು ಮೊರಾಗ್ ಕಾರಿಡಾರ್ ಅನ್ನು ವಶಪಡಿಸಿಕೊಳ್ಳುತ್ತಿದ್ದೇವೆ. ಇದು ಎರಡನೇ ಫಿಲಡೆಲ್ಫಿ, ಹೆಚ್ಚುವರಿ ಫಿಲಡೆಲ್ಫಿ ಕಾರಿಡಾರ್ ಆಗಿರುತ್ತದೆ” ಎಂದು ಅವರು ಹೇಳಿದರು.

ಮೊರಾಗ್ ಕಾರಿಡಾರ್ ದಕ್ಷಿಣ ಗಾಜಾದಲ್ಲಿ ಖಾನ್ ಯೂನಿಸ್ ಮತ್ತು ರಫಾ ನಡುವೆ ಒಮ್ಮೆ ಇದ್ದ ಮೊರಾಗ್ ವಸಾಹತುವನ್ನು ಸೂಚಿಸುತ್ತದೆ. ಫಿಲಡೆಲ್ಫಿ ಕಾರಿಡಾರ್ ಈಜಿಪ್ಟ್‌ನ ಗಡಿಯಲ್ಲಿ ದಕ್ಷಿಣ ಗಾಜಾದಲ್ಲಿ 14-ಕಿಲೋಮೀಟರ್ (8.7-ಮೈಲಿ) ಭೂಪ್ರದೇಶವಾಗಿದೆ. ನಾವು ಈಗ ಗಾಜಾ ಪಟ್ಟಿಯನ್ನು ವಿಭಜಿಸುತ್ತಿದ್ದೇವೆ ಮತ್ತು ಒತ್ತಡವನ್ನು ಹಂತ ಹಂತವಾಗಿ ಹೆಚ್ಚಿಸುತ್ತಿದ್ದೇವೆ. ಇದರಿಂದ ಅವರು ನಮಗೆ ನಮ್ಮ ಒತ್ತೆಯಾಳುಗಳನ್ನು ನೀಡುತ್ತಾರೆ ಮತ್ತು ಅವರು ಅರನ್ನು ನಮಗೆ ನೀಡದಿದ್ದರೆ, ಅವರು ನೀಡುವವರೆಗೆ ಒತ್ತಡ ಹೆಚ್ಚಾಗುತ್ತದೆ” ಎಂದು ನೆತನ್ಯಾಹು ಹೇಳಿದರು.

ಗಾಜಾದಲ್ಲಿ 59 ಇಸ್ರೇಲಿ ಒತ್ತೆಯಾಳುಗಳನ್ನು ಬಂಧಿಸಲಾಗಿದ್ದು, 24 ಜನರು ಜೀವಂತವಾಗಿದ್ದಾರೆಂದು ನಂಬಲಾಗಿದೆ, 35 ಜನರು ಸತ್ತಿದ್ದಾರೆಂದು ನಂಬಲಾಗಿದೆ.

ಗಾಜಾದಲ್ಲಿ ಸಂಭಾವ್ಯ ಪ್ರಮುಖ ನೆಲದ ದಾಳಿಗೆ ಯೋಜನೆಗಳನ್ನು ರೂಪಿಸುತ್ತಿದೆ. ಇದರಲ್ಲಿ ಹತ್ತಾರು ಸಾವಿರ ಸೈನಿಕರನ್ನು ಯುದ್ಧಕ್ಕೆ ಕಳುಹಿಸಲಾಗುವುದು, ಇದರಲ್ಲಿ ಹೆಚ್ಚಿನ ಪ್ರದೇಶವನ್ನು ತೆರವುಗೊಳಿಸಲಾಗುವುದು ಎಂದು ಕಾಟ್ಜ್ ಬುಧವಾರ ಹೇಳಿಕೆಯಲ್ಲಿ ಹೇಳಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ಮೇಲೆ ತನ್ನ ವೈಮಾನಿಕ ಬಾಂಬ್ ದಾಳಿಯನ್ನು ಮುಂದುವರಿಸುತ್ತಿರುವ ನಡುವೆ ಈ ಘೋಷಣೆ ಬಂದಿದೆ. ದಕ್ಷಿಣ ಗಾಜಾದಲ್ಲಿ ರಾತ್ರಿಯಿಡೀ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಗಳು ತಿಳಿಸಿವೆ.

ಸಾವಿಗೀಡಾದವರಲ್ಲಿ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 13 ಜನರು  ರಫಾ ಪ್ರದೇಶದಿಂದ ಸ್ಥಳಾಂತರಗೊಂಡ ನಂತರ ವಸತಿ ಮನೆಯಲ್ಲಿ ಆಶ್ರಯ ಪಡೆದಿದ್ದರು ಎಂದು ನಾಸರ್ ಆಸ್ಪತ್ರೆ ತಿಳಿಸಿದೆ. ಮಧ್ಯ ಗಾಜಾದಲ್ಲಿ ನಡೆದ ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರ ಶವಗಳನ್ನು ಸ್ವೀಕರಿಸಿದ ಅಲ್ ಅವ್ಡಾ ಆಸ್ಪತ್ರೆ ತಿಳಿಸಿದೆ.

ಬುಧವಾರದಂದು ಉತ್ತರ ಗಾಜಾದ ಜಬಲ್ಯ ನಿರಾಶ್ರಿತರ ಶಿಬಿರದಲ್ಲಿ ಸ್ಥಳಾಂತರಗೊಂಡ ಜನರಿಗೆ ಆಶ್ರಯವಾಗಿ ಕಾರ್ಯನಿರ್ವಹಿಸುತ್ತಿದ್ದ ಯುಎನ್‌ಆರ್‌ಡಬ್ಲ್ಯೂಎ ಚಿಕಿತ್ಸಾಲಯದ ಮೇಲೆ ಇಸ್ರೇಲಿ ವೈಮಾನಿಕ ದಾಳಿಯ ನಂತರ ಒಂಬತ್ತು ಮಕ್ಕಳ ಶವಗಳು ಸೇರಿದಂತೆ 19 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಾಜಾದ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.

ಕಳೆದ ವಾರ ಸಾವಿರಾರು ಪ್ಯಾಲೆಸ್ಟೀನಿಯನ್ನರು ಗಾಜಾದಲ್ಲಿ ಹಮಾಸ್ ಮತ್ತು ಇಸ್ರೇಲ್‌ನ ಯುದ್ಧದ ವಿರುದ್ಧ ಪ್ರತಿಭಟಿಸಿದ ನಂತರ ಕ್ಯಾಟ್ಜ್ ಅವರ ಘೋಷಣೆಯೂ ಬಂದಿದೆ. ಪ್ರತಿಭಟನೆಗಳಿಂದ ಉತ್ತೇಜಿತರಾದ ರಕ್ಷಣಾ ಸಚಿವರು, ಹಮಾಸ್ ಎನ್‌ಕ್ಲೇವ್‌ನಲ್ಲಿರುವ ಪ್ಯಾಲೆಸ್ಟೀನಿಯನ್ನರ ಜೀವಕ್ಕೆ “ಅಪಾಯವನ್ನುಂಟುಮಾಡುತ್ತಿದೆ” ಎಂದು ಹೇಳುವ ಮೂಲಕ ಗಾಜಾದ ಜನರು ಬೀದಿಗಿಳಿಯುವಂತೆ ಕರೆ ನೀಡಿದ್ದಾರೆ.

ಇಸ್ರೇಲಿ ಮಿಲಿಟರಿ ಶೀಘ್ರದಲ್ಲೇ “ಗಾಜಾದ ಹೆಚ್ಚುವರಿ ಪ್ರದೇಶಗಳಲ್ಲಿ ಬಲವಂತವಾಗಿ” ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು ಮತ್ತು ಹಮಾಸ್ ಅನ್ನು ಅಧಿಕಾರದಿಂದ ತೆಗೆದುಹಾಕಲು ಮತ್ತು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಪ್ಯಾಲೆಸ್ಟೀನಿಯನ್ನರನ್ನು ಒತ್ತಾಯಿಸಿದ್ದಾರೆ. ಇದು ಯುದ್ಧವನ್ನು ನಿಲ್ಲಿಸಲು ಇದು ಏಕೈಕ ಮಾರ್ಗವಾಗಿದೆ” ಎಂದು ಅವರು ಹೇಳಿದ್ದಾರೆ.

ಇಸ್ರೇಲ್ ಎರಡು ವಾರಗಳ ಹಿಂದೆ ಗಾಜಾದ ಮೇಲೆ ತನ್ನ ದಾಳಿಯನ್ನು ಪುನರಾರಂಭಿಸಿದೆ. ಎನ್‌ಕ್ಲೇವ್‌ಗೆ ಪ್ರವೇಶಿಸುವ ಮಾನವೀಯ ನೆರವಿನ ಸಂಪೂರ್ಣ ದಿಗ್ಬಂಧನವನ್ನು ವಿಧಿಸಿದ ವಾರಗಳ ನಂತರ, ಹಮಾಸ್‌ನೊಂದಿಗಿನ ಎರಡು ತಿಂಗಳ ಹಳೆಯ ಕದನ ವಿರಾಮವನ್ನು ಮುರಿದುಹಾಕಿದೆ. ಉಳಿದ 24 ಒತ್ತೆಯಾಳುಗಳನ್ನು ಇನ್ನೂ ಜೀವಂತವಾಗಿ ಇರಿಸಲಾಗಿದೆ ಎಂದು ನಂಬಲಾದವರನ್ನು ಬಿಡುಗಡೆ ಮಾಡುವವರೆಗೆ ತನ್ನ ಪಡೆಗಳು ಗಾಜಾದ ಕೆಲವು ಭಾಗಗಳಲ್ಲಿ ಶಾಶ್ವತ ಉಪಸ್ಥಿತಿಯನ್ನು ಕಾಯ್ದುಕೊಳ್ಳುತ್ತದೆ ಎಂದು ಅದು ಎಚ್ಚರಿಸಿದೆ.

ಅಂದಿನಿಂದ ನೂರಾರು ಪ್ಯಾಲೆಸ್ಟೀನಿಯನ್ನರು ಈ ಪ್ರದೇಶದಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಆಹಾರ ಸರಬರಾಜು ಖಾಲಿಯಾಗುತ್ತಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.

ಇಂಧನ ಮತ್ತು ಹಿಟ್ಟಿನ ತೀವ್ರ ಕೊರತೆಯಿಂದಾಗಿ ಗಾಜಾದಲ್ಲಿನ ಎಲ್ಲಾ ಬೇಕರಿಗಳು ಮುಚ್ಚಲ್ಪಟ್ಟಿವೆ ಎಂದು ಸ್ಥಳೀಯ ಅಧಿಕಾರಿಗಳು ಮತ್ತು ವಿಶ್ವಸಂಸ್ಥೆ ತಿಳಿಸಿವೆ.

ಒತ್ತೆಯಾಳು ಕುಟುಂಬಗಳು ‘ಭಯಭೀತರಾಗಿದ್ದಾರೆ’

ಲೆಫ್ಟಿನೆಂಟ್ ಜನರಲ್ ಇಯಾಲ್ ಜಮೀರ್ ನೇತೃತ್ವದ ಇಸ್ರೇಲಿ ಮಿಲಿಟರಿ, ವಾರಗಳಿಂದ ಗಾಜಾದಲ್ಲಿ ದೊಡ್ಡ ಪ್ರಮಾಣದ ಕಾರ್ಯಾಚರಣೆಗೆ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಗಾಜಾದಲ್ಲಿ ದೀರ್ಘಾವಧಿಯ ಆಕ್ರಮಣವು ಇಸ್ರೇಲಿ ಸಾರ್ವಜನಿಕರಿಂದ ತೀವ್ರ ಪ್ರತಿರೋಧವನ್ನು ಉಂಟುಮಾಡಬಹುದು, ಅವರಲ್ಲಿ ಹೆಚ್ಚಿನವರು ಯುದ್ಧಕ್ಕೆ ಮರಳುವ ಬದಲು ಒತ್ತೆಯಾಳು ಬಿಡುಗಡೆ ಒಪ್ಪಂದಕ್ಕಾಗಿ ಕರೆ ನೀಡುತ್ತಿದ್ದಾರೆ.

ಒಪ್ಪಂದದ ಮೂಲಕ ಒತ್ತೆಯಾಳುಗಳ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಯುದ್ಧವನ್ನು ಕೊನೆಗೊಳಿಸುವ ಬದಲು, ಇಸ್ರೇಲಿ ಸರ್ಕಾರವು ಗಾಜಾಕ್ಕೆ ಹೆಚ್ಚಿನ ಸೈನಿಕರನ್ನು ಕಳುಹಿಸುತ್ತಿದೆ” ಎಂದು ಇಸ್ರೇಲಿ ಒತ್ತೆಯಾಳುಗಳ ಕುಟುಂಬಗಳ ವೇದಿಕೆಯು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ಪುನರುಜ್ಜೀವನಗೊಳಿಸಲು ಈಜಿಪ್ಟ್ ಮತ್ತು ಕತಾರ್ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಹಮಾಸ್ ಭಾನುವಾರ ಹೊಸ ಈಜಿಪ್ಟ್ ಪ್ರಸ್ತಾವನೆಗೆ ಒಪ್ಪಿಕೊಂಡಿದೆ ಮತ್ತು ಇಸ್ರೇಲ್ ಸೋಮವಾರ ಪ್ರತಿ-ಪ್ರಸ್ತಾಪದೊಂದಿಗೆ ಪ್ರತಿಕ್ರಿಯಿಸಿದೆ.

ಈಜಿಪ್ಟ್‌ನ ಪ್ರಸ್ತಾವನೆಯು ಹಮಾಸ್ ಐದು ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ, ಇದರಲ್ಲಿ ಅಮೆರಿಕನ್-ಇಸ್ರೇಲಿ ಎಡಾನ್ ಅಲೆಕ್ಸಾಂಡರ್ ಸೇರಿದ್ದಾರೆ. ಇದು ನವೀಕರಿಸಿದ ಕದನ ವಿರಾಮಕ್ಕೆ ಬದಲಾಗಿ ಎಂದು ಹಮಾಸ್ ಮೂಲವೊಂದು ತಿಳಿಸಿದೆ. ಇದು ಹಲವಾರು ವಾರಗಳ ಹಿಂದೆ ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮಂಡಿಸಿದ ಪ್ರಸ್ತಾವನೆಗೆ ಹೋಲುತ್ತದೆ, ಆದರೂ ಇದು ಮೃತ ಒತ್ತೆಯಾಳುಗಳ ಹೆಚ್ಚುವರಿ ಶವಗಳ ಬಿಡುಗಡೆಯನ್ನು ಸಹ ಒಳಗೊಂಡಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ನಕ್ಸಲರಿಂದ ಷರತ್ತುಬದ್ಧ ಮಾತುಕತೆಗೆ ಕರೆ; ಬೇಷರತ್ ಶಾಂತಿ ಮಾತುಕತೆಗೆ ಸಿದ್ಧ ಎಂದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...