Homeಮುಖಪುಟಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

ಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

- Advertisement -
- Advertisement -

ಅಂಡಮಾನ್ ನಿಕೋಬಾರ್‌ನ ಉತ್ತರ ಸೆಂಟಿನೆಲ್ ದ್ವೀಪದ ನಿರ್ಬಂಧಿತ ಬುಡಕಟ್ಟು ಮೀಸಲು ಪ್ರದೇಶವನ್ನು ಪ್ರವೇಶಿಸಿದ ಆರೋಪದ ಮೇಲೆ ಅಮೆರಿಕದ ಪ್ರಜೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪಿಟಿಐ ಬುಧವಾರ ವರದಿ ಮಾಡಿದೆ. ಆರೋಪಿಯನ್ನು 24 ವರ್ಷದ ಮೈಖೈಲೊ ವಿಕ್ಟೋರೊವಿಚ್ ಪಾಲಿಯಕೋವ್ ಎಂದು ಗುರುತಿಸಲಾಗಿದೆ.

ಆರೋಪಿಯು ಸೋಮವಾರ ಅಪರಾಧ ತನಿಖಾ ಇಲಾಖೆಯು ಅನುಮತಿಯಿಲ್ಲದೆ ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿ ತಿಳಿಸಿದೆ.

ಉತ್ತರ ಸೆಂಟಿನೆಲ್ ದ್ವೀಪಕ್ಕೆ ಪರವಾನಗಿ ಇಲ್ಲದೆ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ಸೆಂಟಿನೆಲೀಸ್ ಬುಡಕಟ್ಟು ಜನಾಂಗದ ಈ ಸಮುದಾಯದ ಜನಸಂಖ್ಯೆ 2011 ರಲ್ಲಿ ಸುಮಾರು 40 ರಷ್ಟು ಇತ್ತು. ಈ ಸಮುದಾಯವು ಹೊರಗಿನವರೊಂದಿಗೆ ಸಂಪರ್ಕವನ್ನು ವಿರೋಧಿಸುತ್ತಾರೆ.

ಆರೋಪಿ ಪಾಲಿಯಕೋವ್ ಮಾರ್ಚ್ 26 ರಂದು ಪೋರ್ಟ್ ಬ್ಲೇರ್‌ಗೆ ಬಂದಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಅವರು ಶನಿವಾರ ಬೆಳಿಗ್ಗೆ 1 ಗಂಟೆ ಸುಮಾರಿಗೆ ಕುರ್ಮದೇರಾ ಬೀಚ್‌ನಿಂದ ಕೊಬ್ಬರಿ ಮತ್ತು ಕೋಕಾ-ಕೋಲಾ ಪಾನೀಯದ ಡಬ್ಬಿಯನ್ನು ತೆಗೆದುಕೊಂಡು “ಸೆಂಟಿನೆಲೀಸ್‌ಗೆ ಅರ್ಪಣೆ” ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೋಲಿಯಕೋವ್ ಬೆಳಿಗ್ಗೆ 10 ಗಂಟೆಯ ಹೊತ್ತಿಗೆ ಉತ್ತರ ಸೆಂಟಿನೆಲ್ ದ್ವೀಪದ ಈಶಾನ್ಯ ತೀರವನ್ನು ತಲುಪಿ ಒಂದು ಗಂಟೆ ಕಡಲಾಚೆಯಲ್ಲಿಯೇ ಇದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಲ್ಲಿ ಅವರು ತಿರುಗಾಡಿ ಶಿಳ್ಳೆ ಹೊಡೆದರೂ ಯಾರೊಬ್ಬರನ್ನೂ ನೋಡಲಿಲ್ಲ ಎಂದು ಅವರು ಹೇಳಿದ್ದಾರೆ.

ಇದರ ನಂತರ, ಪೋಲಿಯಕೋವ್ ಸುಮಾರು ಐದು ನಿಮಿಷಗಳ ಕಾಲ ದಡಕ್ಕೆ ಇಳಿದು ತನ್ನೊಂದಿಗೆ ತಂದಿದ್ದ ಕಾಣಿಕೆಗಳನ್ನು ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಅವರು ಮರಳಿನ ಮಾದರಿಗಳನ್ನು ಸಂಗ್ರಹಿಸಿ ವೀಡಿಯೊ ರೆಕಾರ್ಡ್ ಮಾಡಿ ತಮ್ಮ ದೋಣಿಗೆ ಹಿಂತಿರುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕುರ್ಮದೇರಾ ಬೀಚ್‌ಗೆ ಹಿಂತಿರುಗುವ ಪ್ರಯಾಣವನ್ನು ಪ್ರಾರಂಭಿಸಿದ್ದ ಅವರು ಸಂಜೆ 7 ಗಂಟೆಗೆ ತಲುಪಿದ್ದರು. ಈ ವೇಳೆ ಮೀನುಗಾರರು ಅವರನ್ನು ನೋಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಲಿಯಕೋವ್ ಶನಿವಾರ ಕುರ್ಮದೇರಾ ಬೀಚ್ ಬಳಿ ಸಣ್ಣ ಎಂಜಿನ್ ಹೊಂದಿದ ಗಾಳಿ ತುಂಬಬಹುದಾದ ಏಕ ಆಸನದ ದೋಣಿಯೊಂದಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅವರ ಬಗ್ಗೆ ಮತ್ತು ಮೀಸಲು ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡುವ ಅವರ ಉದ್ದೇಶದ ಬಗ್ಗೆ ನಮಗೆ ಹೆಚ್ಚಿನ ವಿವರಗಳು ಸಿಗುತ್ತಿವೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅವರು ತಂಗಿದ್ದಾಗ ಅವರು ಬೇರೆ ಎಲ್ಲಿಗೆ ಭೇಟಿ ನೀಡಿದ್ದರು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ.” ಎಂದು ಪೊಲೀಸ್ ಮಹಾನಿರ್ದೇಶಕ ಎಚ್‌ಎಸ್ ಧಲಿವಾಲ್ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಪೋರ್ಟ್ ಬ್ಲೇರ್‌ನಲ್ಲಿರುವ ಹೋಟೆಲ್ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಧಲಿವಾಲ್ ಹೇಳಿದ್ದಾರೆ. ಪಾಲಿಯಕೋವ್ ಅವರ ಬಳಿ ದೊರೆತ ಕ್ಯಾಮೆರಾ ದೃಶ್ಯಾವಳಿಗಳು ಅವರು ಉತ್ತರ ಸೆಂಟಿನೆಲ್ ದ್ವೀಪದಲ್ಲಿ ಇಳಿದಿರುವುದನ್ನು ತೋರಿಸುತ್ತವೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೂಲನಿವಾಸಿ ಬುಡಕಟ್ಟುಗಳ ರಕ್ಷಣೆ ತಿದ್ದುಪಡಿ ನಿಯಂತ್ರಣ, 2012 ರ ವಿಭಾಗಗಳೊಂದಿಗೆ ವಿದೇಶಿಯರ ಕಾಯ್ದೆ, 1946 ರ ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ತಿರೂರ್‌ನ ಬುಡಕಟ್ಟು ಕಲ್ಯಾಣ ಅಧಿಕಾರಿ ಪ್ರೋಣಬ್ ಸಿರ್ಕಾರ್ ಅವರು ಓಗ್ರಬ್ರಾಜ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಅಂಡಮಾನ್ ನಿಕೋಬಾರ್‌ನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...