Homeಕರ್ನಾಟಕವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ...

ವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ ಡಿಎಚ್‌ಎಸ್ ಪ್ರತಿಭಟನಾ ರ‍್ಯಾಲಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಸಮೀಪದ ಮುರುವ ಎಂಬಲ್ಲಿ ದಲಿತ ಬಾಲಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಮೆ ಆಗ್ರಹಿಸಿ, ಪ್ರಕರಣದ ಅಮೂಲಾಗ್ರ ತನಿಖೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ(ಡಿಎಚ್‌ಎಸ್) ನೇತೃತ್ವದಲ್ಲಿ ಎಡ ಹಾಗೂ ದಲಿತ ಸಂಘಟನೆಗಳು ವಿಟ್ಲ ಪೇಟೆಯಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಿವೆ. ಪ್ರಕರಣದಲ್ಲಿ ಪೋಕ್ಸೋ ದಾಖಲಾದರೂ ಪ್ರಭಾವಿ ಭೂಮಾಲಕನ ಬಂಧನಕ್ಕೆ ಹಿಂದೇಟು ಹಾಕುತ್ತಿರುವ ಪೊಲೀಸರ ನಡೆಯನ್ನು ಖಂಡಿಸಿದ ಹೋರಾಟಗಾರರು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸದ್ಯದಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಕಚೇರಿಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿವೆ. ವಿಟ್ಲ | ದಲಿತ ಬಾಲಕಿ ಮೇಲೆ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ, “ಪ್ರಕರಣವನ್ನು ಪೊಲೀಸರು ಮರೆಮಾಚುತ್ತಿದ್ದಾರೆ. ಹೆತ್ತವರಿಗೆ ಕೊಲೆ ಬೆದರಿಕೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ನಮ್ಮ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಹೋರಾಟ ನಡೆಸಲಾಗುತ್ತಿದೆ” ಎಂದು ಹೇಳಿದರು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ನಾಡಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.

ದಲಿತ ಬಾಲಕಿ, ಲೈಂಗಿಕ ದೌರ್ಜನ್ಯ, ಪೋಕ್ಸೋ, ಬಿಜೆಪಿ ಮುಖಂಡ, ಬಂಧನ, ಹೋರಾಟ, ಡಿಎಚ್‌ಎಸ್, Dalit girl, sexual assault, POCSO, BJP leader, arrest, struggle, DHS,
ಆರೋಪಿ ಮಹೇಶ್ ಭಟ್

ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಈಶ್ವರಿ ಅವರು, ಆರೋಪಿ ಮಹೇಶ್ ಭಟ್‌ನನ್ನು ತಕ್ಷಣವೇ ಬಂಧಿಸಬೇಕು. ಒಂದು ವೇಳೆ ಪೊಲೀಸರ ಮಕ್ಕಳ ಮೇಲೆ ಈ ರೀತಿಯ ದೌರ್ಜನ್ಯವಾದರೆ ಪೊಲೀಸರು ಈ ರೀತಿಯಾಗಿ ವರ್ತಿಸುತ್ತಿದ್ದರಾ? ಎಂದು ಪ್ರಶ್ನಿಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ. ಬದಲಾಗಿ, ಅತ್ಯಾಚಾರ ನಡೆದಿರುವ ಶಂಕೆ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ನೀಡುತ್ತಿದ್ದಾರೆ. ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ವಿಟ್ಲ ಪೊಲೀಸರು ಖಾಕಿ ಕಳಚಿ ಭೂ ಮಾಲಕನ ತೋಟದಲ್ಲಿ ಕೂಲಿ ಕೆಲಸ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹೆಣ್ಮಕ್ಕಳೆಂದರೆ ಮೇಲ್ವರ್ಗದ ಕಾಮುಕರಿಗೆ ಬೋಗದ ವಸ್ತು ಮಾತ್ರವಾಗಿದೆ. ಇದಕ್ಕೆ ಅವರ ಮನುವಾದ ಸಂಸ್ಕೃತಿ ಕೂಡಾ ಕಾರಣ. ಡಾ.ಬಿ.ಆರ್. ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟಿದ್ದು ಕೇವಲ ಜಾತಿ ವಿರೋಧಿ ಎಂಬ ಕಾರಣಕಷ್ಟೇ ಅಲ್ಲ, ಅದು ಸ್ರೀ ವಿರೋಧಿ ಎಂಬ ಕಾರಣಕ್ಕೂ ಆಗಿದೆ. ಧರ್ಮ‌ರಕ್ಷಣೆಯ ಹೆಸರಲ್ಲಿ ಅನ್ಯ ಧರ್ಮೀಯರ ಮೇಲೆ ಎತ್ತಿಕಟ್ಟಲು ಓಡೋಡಿ ಬರುವ ಬಿಜೆಪಿ ಶಾಸಕರುಗಳು ಮಾಣಿಲ ಗ್ರಾಮದ ಕಡೆ ಯಾಕೆ ಬರಲಿಲ್ಲ” ಎಂದು ಪ್ರಶ್ನಿಸಿದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆ ಹೊರಗಡೆ ತರಬೇಕು. ಇಲ್ಲದಿದ್ದಲ್ಲಿ ಮುಂದೆ ಎಸ್ಪಿ ಚಲೋ ಕಚೇರಿ ಹೋರಾಟ ನಡೆಸಲಾಗುತ್ತದೆ ಎಂದು ಸಂತೋಷ್ ಬಜಾಲ್ ಎಚ್ಚರಿಸಿದರು.

ಕಾರ್ಮಿಕ ಮುಖಂಡ ಶೇಖರ ಮಾತನಾಡಿ, ಜಾತಿ ಧರ್ಮ ಬಿಟ್ಟು ಎಲ್ಲರೂ ಇಲ್ಲಿ ಸೇರಿದ್ದೇವೆ. ನಮ್ಮೆಲ್ಲರ ಉದ್ದೇಶ ಬಡ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿದೆ. ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯಿಂದಾಗಿ ಜನರು ನ್ಯಾಯ ವಂಚಿತರಾಗುತ್ತಿದ್ದಾರೆ ಎಂದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಮುಖಂಡ ದಿನೇಶ್ ಮೂಳೂರು ಮಾತನಾಡಿ, “ಬಿಜೆಪಿಯಲ್ಲಿರುವ ದಲಿತ ಯುವಕರು ಈ ಬಗ್ಗೆ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಅನ್ಯಾಯವಾದಾಗ ಯಾರೂ ಮುಂದೆ ಬರುವುದಿಲ್ಲ. ಪ್ರಗತಿಪರ ಮತ್ತು ದಲಿತ ಸಂಘಟನೆ ಮಾತ್ರ ಮುಂದೆ ಬರುತ್ತದೆ. ಮಹೇಶ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಹೋರಾಟ ಮುಂದುವರೆಯಲಿದೆ” ಎಂದರು.

ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿದರು. ರೈತ ಮುಖಂಡರಾದ ಕೆ ಯಾದವ ಶೆಟ್ಟಿ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯಕ್, ಕಾರ್ಮಿಕ ಮುಖಂಡರುಗಳಾದ ಅಶೋಕ್ ಕೊಂಚಾಡಿ, ಬಿ.ಕೆ ಇಮ್ತಿಯಾಜ್, ಸದಾಶಿವ ಪಡುಬಿದ್ರೆ, ಸರೋಜಿನಿ, ದಿನೇಶ್, ಎಸ್.ಪಿ ಆನಂದ್, ಸೇಸಪ್ಪ ಬೆದ್ರಕಾಡ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಟ್ಲ | ದಲಿತ ಬಾಲಕಿ ಮೇಲೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...