Homeಕರ್ನಾಟಕವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ...

ವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ ಡಿಎಚ್‌ಎಸ್ ಪ್ರತಿಭಟನಾ ರ‍್ಯಾಲಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಸಮೀಪದ ಮುರುವ ಎಂಬಲ್ಲಿ ದಲಿತ ಬಾಲಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಮೆ ಆಗ್ರಹಿಸಿ, ಪ್ರಕರಣದ ಅಮೂಲಾಗ್ರ ತನಿಖೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ(ಡಿಎಚ್‌ಎಸ್) ನೇತೃತ್ವದಲ್ಲಿ ಎಡ ಹಾಗೂ ದಲಿತ ಸಂಘಟನೆಗಳು ವಿಟ್ಲ ಪೇಟೆಯಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಿವೆ. ಪ್ರಕರಣದಲ್ಲಿ ಪೋಕ್ಸೋ ದಾಖಲಾದರೂ ಪ್ರಭಾವಿ ಭೂಮಾಲಕನ ಬಂಧನಕ್ಕೆ ಹಿಂದೇಟು ಹಾಕುತ್ತಿರುವ ಪೊಲೀಸರ ನಡೆಯನ್ನು ಖಂಡಿಸಿದ ಹೋರಾಟಗಾರರು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸದ್ಯದಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಕಚೇರಿಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿವೆ. ವಿಟ್ಲ | ದಲಿತ ಬಾಲಕಿ ಮೇಲೆ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ, “ಪ್ರಕರಣವನ್ನು ಪೊಲೀಸರು ಮರೆಮಾಚುತ್ತಿದ್ದಾರೆ. ಹೆತ್ತವರಿಗೆ ಕೊಲೆ ಬೆದರಿಕೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ನಮ್ಮ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಹೋರಾಟ ನಡೆಸಲಾಗುತ್ತಿದೆ” ಎಂದು ಹೇಳಿದರು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ನಾಡಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.

ದಲಿತ ಬಾಲಕಿ, ಲೈಂಗಿಕ ದೌರ್ಜನ್ಯ, ಪೋಕ್ಸೋ, ಬಿಜೆಪಿ ಮುಖಂಡ, ಬಂಧನ, ಹೋರಾಟ, ಡಿಎಚ್‌ಎಸ್, Dalit girl, sexual assault, POCSO, BJP leader, arrest, struggle, DHS,
ಆರೋಪಿ ಮಹೇಶ್ ಭಟ್

ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಈಶ್ವರಿ ಅವರು, ಆರೋಪಿ ಮಹೇಶ್ ಭಟ್‌ನನ್ನು ತಕ್ಷಣವೇ ಬಂಧಿಸಬೇಕು. ಒಂದು ವೇಳೆ ಪೊಲೀಸರ ಮಕ್ಕಳ ಮೇಲೆ ಈ ರೀತಿಯ ದೌರ್ಜನ್ಯವಾದರೆ ಪೊಲೀಸರು ಈ ರೀತಿಯಾಗಿ ವರ್ತಿಸುತ್ತಿದ್ದರಾ? ಎಂದು ಪ್ರಶ್ನಿಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ. ಬದಲಾಗಿ, ಅತ್ಯಾಚಾರ ನಡೆದಿರುವ ಶಂಕೆ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ನೀಡುತ್ತಿದ್ದಾರೆ. ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ವಿಟ್ಲ ಪೊಲೀಸರು ಖಾಕಿ ಕಳಚಿ ಭೂ ಮಾಲಕನ ತೋಟದಲ್ಲಿ ಕೂಲಿ ಕೆಲಸ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹೆಣ್ಮಕ್ಕಳೆಂದರೆ ಮೇಲ್ವರ್ಗದ ಕಾಮುಕರಿಗೆ ಬೋಗದ ವಸ್ತು ಮಾತ್ರವಾಗಿದೆ. ಇದಕ್ಕೆ ಅವರ ಮನುವಾದ ಸಂಸ್ಕೃತಿ ಕೂಡಾ ಕಾರಣ. ಡಾ.ಬಿ.ಆರ್. ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟಿದ್ದು ಕೇವಲ ಜಾತಿ ವಿರೋಧಿ ಎಂಬ ಕಾರಣಕಷ್ಟೇ ಅಲ್ಲ, ಅದು ಸ್ರೀ ವಿರೋಧಿ ಎಂಬ ಕಾರಣಕ್ಕೂ ಆಗಿದೆ. ಧರ್ಮ‌ರಕ್ಷಣೆಯ ಹೆಸರಲ್ಲಿ ಅನ್ಯ ಧರ್ಮೀಯರ ಮೇಲೆ ಎತ್ತಿಕಟ್ಟಲು ಓಡೋಡಿ ಬರುವ ಬಿಜೆಪಿ ಶಾಸಕರುಗಳು ಮಾಣಿಲ ಗ್ರಾಮದ ಕಡೆ ಯಾಕೆ ಬರಲಿಲ್ಲ” ಎಂದು ಪ್ರಶ್ನಿಸಿದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆ ಹೊರಗಡೆ ತರಬೇಕು. ಇಲ್ಲದಿದ್ದಲ್ಲಿ ಮುಂದೆ ಎಸ್ಪಿ ಚಲೋ ಕಚೇರಿ ಹೋರಾಟ ನಡೆಸಲಾಗುತ್ತದೆ ಎಂದು ಸಂತೋಷ್ ಬಜಾಲ್ ಎಚ್ಚರಿಸಿದರು.

ಕಾರ್ಮಿಕ ಮುಖಂಡ ಶೇಖರ ಮಾತನಾಡಿ, ಜಾತಿ ಧರ್ಮ ಬಿಟ್ಟು ಎಲ್ಲರೂ ಇಲ್ಲಿ ಸೇರಿದ್ದೇವೆ. ನಮ್ಮೆಲ್ಲರ ಉದ್ದೇಶ ಬಡ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿದೆ. ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯಿಂದಾಗಿ ಜನರು ನ್ಯಾಯ ವಂಚಿತರಾಗುತ್ತಿದ್ದಾರೆ ಎಂದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಮುಖಂಡ ದಿನೇಶ್ ಮೂಳೂರು ಮಾತನಾಡಿ, “ಬಿಜೆಪಿಯಲ್ಲಿರುವ ದಲಿತ ಯುವಕರು ಈ ಬಗ್ಗೆ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಅನ್ಯಾಯವಾದಾಗ ಯಾರೂ ಮುಂದೆ ಬರುವುದಿಲ್ಲ. ಪ್ರಗತಿಪರ ಮತ್ತು ದಲಿತ ಸಂಘಟನೆ ಮಾತ್ರ ಮುಂದೆ ಬರುತ್ತದೆ. ಮಹೇಶ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಹೋರಾಟ ಮುಂದುವರೆಯಲಿದೆ” ಎಂದರು.

ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿದರು. ರೈತ ಮುಖಂಡರಾದ ಕೆ ಯಾದವ ಶೆಟ್ಟಿ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯಕ್, ಕಾರ್ಮಿಕ ಮುಖಂಡರುಗಳಾದ ಅಶೋಕ್ ಕೊಂಚಾಡಿ, ಬಿ.ಕೆ ಇಮ್ತಿಯಾಜ್, ಸದಾಶಿವ ಪಡುಬಿದ್ರೆ, ಸರೋಜಿನಿ, ದಿನೇಶ್, ಎಸ್.ಪಿ ಆನಂದ್, ಸೇಸಪ್ಪ ಬೆದ್ರಕಾಡ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಟ್ಲ | ದಲಿತ ಬಾಲಕಿ ಮೇಲೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...