ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಸಮೀಪದ ಮುರುವ ಎಂಬಲ್ಲಿ ದಲಿತ ಬಾಲಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಮೆ ಆಗ್ರಹಿಸಿ, ಪ್ರಕರಣದ ಅಮೂಲಾಗ್ರ ತನಿಖೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ(ಡಿಎಚ್ಎಸ್) ನೇತೃತ್ವದಲ್ಲಿ ಎಡ ಹಾಗೂ ದಲಿತ ಸಂಘಟನೆಗಳು ವಿಟ್ಲ ಪೇಟೆಯಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಿವೆ. ಪ್ರಕರಣದಲ್ಲಿ ಪೋಕ್ಸೋ ದಾಖಲಾದರೂ ಪ್ರಭಾವಿ ಭೂಮಾಲಕನ ಬಂಧನಕ್ಕೆ ಹಿಂದೇಟು ಹಾಕುತ್ತಿರುವ ಪೊಲೀಸರ ನಡೆಯನ್ನು ಖಂಡಿಸಿದ ಹೋರಾಟಗಾರರು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸದ್ಯದಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಕಚೇರಿಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿವೆ. ವಿಟ್ಲ | ದಲಿತ ಬಾಲಕಿ ಮೇಲೆ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ, “ಪ್ರಕರಣವನ್ನು ಪೊಲೀಸರು ಮರೆಮಾಚುತ್ತಿದ್ದಾರೆ. ಹೆತ್ತವರಿಗೆ ಕೊಲೆ ಬೆದರಿಕೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ನಮ್ಮ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಹೋರಾಟ ನಡೆಸಲಾಗುತ್ತಿದೆ” ಎಂದು ಹೇಳಿದರು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ನಾಡಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.

ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಈಶ್ವರಿ ಅವರು, ಆರೋಪಿ ಮಹೇಶ್ ಭಟ್ನನ್ನು ತಕ್ಷಣವೇ ಬಂಧಿಸಬೇಕು. ಒಂದು ವೇಳೆ ಪೊಲೀಸರ ಮಕ್ಕಳ ಮೇಲೆ ಈ ರೀತಿಯ ದೌರ್ಜನ್ಯವಾದರೆ ಪೊಲೀಸರು ಈ ರೀತಿಯಾಗಿ ವರ್ತಿಸುತ್ತಿದ್ದರಾ? ಎಂದು ಪ್ರಶ್ನಿಸಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ. ಬದಲಾಗಿ, ಅತ್ಯಾಚಾರ ನಡೆದಿರುವ ಶಂಕೆ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ನೀಡುತ್ತಿದ್ದಾರೆ. ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ವಿಟ್ಲ ಪೊಲೀಸರು ಖಾಕಿ ಕಳಚಿ ಭೂ ಮಾಲಕನ ತೋಟದಲ್ಲಿ ಕೂಲಿ ಕೆಲಸ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಹೆಣ್ಮಕ್ಕಳೆಂದರೆ ಮೇಲ್ವರ್ಗದ ಕಾಮುಕರಿಗೆ ಬೋಗದ ವಸ್ತು ಮಾತ್ರವಾಗಿದೆ. ಇದಕ್ಕೆ ಅವರ ಮನುವಾದ ಸಂಸ್ಕೃತಿ ಕೂಡಾ ಕಾರಣ. ಡಾ.ಬಿ.ಆರ್. ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟಿದ್ದು ಕೇವಲ ಜಾತಿ ವಿರೋಧಿ ಎಂಬ ಕಾರಣಕಷ್ಟೇ ಅಲ್ಲ, ಅದು ಸ್ರೀ ವಿರೋಧಿ ಎಂಬ ಕಾರಣಕ್ಕೂ ಆಗಿದೆ. ಧರ್ಮರಕ್ಷಣೆಯ ಹೆಸರಲ್ಲಿ ಅನ್ಯ ಧರ್ಮೀಯರ ಮೇಲೆ ಎತ್ತಿಕಟ್ಟಲು ಓಡೋಡಿ ಬರುವ ಬಿಜೆಪಿ ಶಾಸಕರುಗಳು ಮಾಣಿಲ ಗ್ರಾಮದ ಕಡೆ ಯಾಕೆ ಬರಲಿಲ್ಲ” ಎಂದು ಪ್ರಶ್ನಿಸಿದರು.

ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆ ಹೊರಗಡೆ ತರಬೇಕು. ಇಲ್ಲದಿದ್ದಲ್ಲಿ ಮುಂದೆ ಎಸ್ಪಿ ಚಲೋ ಕಚೇರಿ ಹೋರಾಟ ನಡೆಸಲಾಗುತ್ತದೆ ಎಂದು ಸಂತೋಷ್ ಬಜಾಲ್ ಎಚ್ಚರಿಸಿದರು.
ಕಾರ್ಮಿಕ ಮುಖಂಡ ಶೇಖರ ಮಾತನಾಡಿ, ಜಾತಿ ಧರ್ಮ ಬಿಟ್ಟು ಎಲ್ಲರೂ ಇಲ್ಲಿ ಸೇರಿದ್ದೇವೆ. ನಮ್ಮೆಲ್ಲರ ಉದ್ದೇಶ ಬಡ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿದೆ. ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯಿಂದಾಗಿ ಜನರು ನ್ಯಾಯ ವಂಚಿತರಾಗುತ್ತಿದ್ದಾರೆ ಎಂದರು.

ಮುಖಂಡ ದಿನೇಶ್ ಮೂಳೂರು ಮಾತನಾಡಿ, “ಬಿಜೆಪಿಯಲ್ಲಿರುವ ದಲಿತ ಯುವಕರು ಈ ಬಗ್ಗೆ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಅನ್ಯಾಯವಾದಾಗ ಯಾರೂ ಮುಂದೆ ಬರುವುದಿಲ್ಲ. ಪ್ರಗತಿಪರ ಮತ್ತು ದಲಿತ ಸಂಘಟನೆ ಮಾತ್ರ ಮುಂದೆ ಬರುತ್ತದೆ. ಮಹೇಶ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಹೋರಾಟ ಮುಂದುವರೆಯಲಿದೆ” ಎಂದರು.
ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿದರು. ರೈತ ಮುಖಂಡರಾದ ಕೆ ಯಾದವ ಶೆಟ್ಟಿ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯಕ್, ಕಾರ್ಮಿಕ ಮುಖಂಡರುಗಳಾದ ಅಶೋಕ್ ಕೊಂಚಾಡಿ, ಬಿ.ಕೆ ಇಮ್ತಿಯಾಜ್, ಸದಾಶಿವ ಪಡುಬಿದ್ರೆ, ಸರೋಜಿನಿ, ದಿನೇಶ್, ಎಸ್.ಪಿ ಆನಂದ್, ಸೇಸಪ್ಪ ಬೆದ್ರಕಾಡ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ವಿಟ್ಲ | ದಲಿತ ಬಾಲಕಿ ಮೇಲೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ
ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

