Homeಮುಖಪುಟಪಂಜಾಬ್‌ | 14,000 ಎಕರೆ ವಕ್ಫ್‌ ಭೂಮಿ ಅಕ್ರಮ ಅತಿಕ್ರಮಣ

ಪಂಜಾಬ್‌ | 14,000 ಎಕರೆ ವಕ್ಫ್‌ ಭೂಮಿ ಅಕ್ರಮ ಅತಿಕ್ರಮಣ

- Advertisement -
- Advertisement -

ಪಂಜಾಬ್‌ ವಕ್ಫ್ ಮಂಡಳಿಯು ರಾಜ್ಯಾದ್ಯಂತ ಒಟ್ಟು 36,625.83 ಎಕರೆ ಭೂಮಿಯನ್ನು ಹೊಂದಿದೆ, ಆದರೆ ಈ ಭೂಮಿಯಲ್ಲಿ 14,000 ಎಕರೆಗೂ ಹೆಚ್ಚು ಭೂಮಿ ಪ್ರಸ್ತುತ ಅಕ್ರಮ ಒತ್ತುವರಿಯಾಗಿದೆ ಎಂದು TNIE ವರದಿ ಮಾಡಿದೆ. ಈ ಅತಿಕ್ರಮಣಗಳ ಕುರಿತು ನಡೆಯುತ್ತಿರುವ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅದು ಹೇಳಿದೆ.

ಮಂಡಳಿಯ ಅಂಕಿ ಅಂಶಗಳ ಪ್ರಕಾರ ಪಂಜಾಬ್‌ ವಕ್ಫ್ ಮಂಡಳಿಯು ಒಟ್ಟು 75,965 ನೋಂದಾಯಿತ ಆಸ್ತಿಗಳನ್ನು ಮತ್ತು 25,403 ನೋಂದಾಯಿತ ವಕ್ಫ್ ಎಸ್ಟೇಟ್‌ಗಳನ್ನು ಹೊಂದಿದೆ ಎಂದು ಹೇಳುತ್ತದೆ. ಮಂಡಳಿಯು ರಾಜ್ಯಾದ್ಯಂತ 36,625.83 ಎಕರೆ ಭೂಮಿಯನ್ನು ಹೊಂದಿದ್ದು, ಸರಿಸುಮಾರು 14,085.004 ಎಕರೆ ಅಥವಾ 38.46% ರಷ್ಟು ಪ್ರಸ್ತುತ ಅಕ್ರಮ ಒತ್ತುವರಿಯಾಗಿದೆ. ಉಳಿದ 61.45% ಭೂಮಿಯನ್ನು ಅದರ ಉದ್ದೇಶಿತ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ 18 ಪ್ರಕರಣಗಳು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ 462 ಪ್ರಕರಣಗಳು, ವಿವಿಧ ನ್ಯಾಯಾಲಯಗಳಲ್ಲಿ ಘೋಷಣೆ, ಸ್ವಾಧೀನ ಅಥವಾ ಹೊರಹಾಕುವಿಕೆಗೆ ಸಂಬಂಧಿಸಿದಂತೆ 1,157 ಸಿವಿಲ್ ಮೊಕದ್ದಮೆಗಳು ಐದು ವಕ್ಫ್ ನ್ಯಾಯಮಂಡಳಿಗಳ ಮುಂದೆ ಬಾಕಿ ಉಳಿದಿವೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ವಕ್ಫ್ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಲತೀಫ್ ಅಹ್ಮದ್ ಥಿಂಡ್, “ಪಂಜಾಬ್‌ನಲ್ಲಿ ಒಟ್ಟು ವಕ್ಫ್ ಮಂಡಳಿಯ ಆಸ್ತಿಗಳ ಸಂಖ್ಯೆ 75,965. ಪ್ರಮುಖ ಸಮಸ್ಯೆಯೆಂದರೆ ರಾಜ್ಯಾದ್ಯಂತ ಅಕ್ರಮ ಅತಿಕ್ರಮಣಗಳಾಗಿವೆ. ಗರಿಷ್ಠ ಅತಿಕ್ರಮಣಗಳು ಬಟಿಂಡಾದಲ್ಲಿದ್ದು, ನಂತರ ಲುಧಿಯಾನ, ಅಮೃತಸರ, ಜಲಂಧರ್ ಮತ್ತು ಪಟಿಯಾಲದಲ್ಲಿವೆ. ಅನೇಕ ಪ್ರಕರಣಗಳಲ್ಲಿ, ಅಕ್ರಮ ಅತಿಕ್ರಮಣಕಾರರು 1947 ರಿಂದ ಈ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇತರ ಹಲವು ಪ್ರಕರಣಗಳಲ್ಲಿ ಮಂಡಳಿಯೊಂದಿಗೆ ಮಾಡಲಾದ ಗುತ್ತಿಗೆ ಮುಗಿದಿದ್ದರೂ, ಅವರು ಆಸ್ತಿಯನ್ನು ತೆರವು ಮಾಡಿಲ್ಲ ಅಥವಾ ಅದರನ್ನು ವಾಪಾಸು ಮಾಡಿಲ್ಲ” ಎಂದು ಹೇಳಿದ್ದಾರೆ.

“ಪ್ರಭಾವಿ ವ್ಯಕ್ತಿಗಳು ಸೇರಿದಂತೆ ಸಾಮಾನ್ಯ ವ್ಯಕ್ತಿಗಳು ಕೂಡಾ ವಕ್ಫ್ ಮಂಡಳಿಯ ಆಸ್ತಿಗಳನ್ನು ಅತಿಕ್ರಮಿಸಿದ್ದಾರೆ. ಪಟಿಯಾಲ ಬಳಿಯ ಸಮನಾದಲ್ಲಿ ಅನೇಕ ಗುಡಿಸಲುಗಳಿದ್ದು, ಆ ಜನರು ಖಾಲಿ ಮಾಡಲು ನಿರಾಕರಿಸುತ್ತಿದ್ದಾರೆ. ಇದರಲ್ಲಿ ಇತರ ಧರ್ಮದ ಜನರು ಕೂಡಾ ಅತಿಕ್ರಮಣ ಮಾಡಿದ್ದಾರೆ. ಜೊತೆಗೆ ಮುಸ್ಲಿಮರು ಕೂಡಾ ಕೆಲವು ಸಂದರ್ಭಗಳಲ್ಲಿ ಮಂಡಳಿಯ ಆಸ್ತಿಗಳನ್ನು ಅಕ್ರಮವಾಗಿ ಅತಿಕ್ರಮಣ ಮಾಡಿದ್ದಾರೆ,” ಎಂದು ಅವರು ಹೇಳಿದ್ದಾರೆ.

“ನಾವು ಕಾನೂನಿನ ಸರಿಯಾದ ಕಾರ್ಯವಿಧಾನವನ್ನು ಅನುಸರಿಸುತ್ತೇವೆ. ಪ್ರಕರಣಗಳು ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿವೆ. ತಿದ್ದುಪಡಿ ಬರುವುದರಿಂದ ಈ ಪ್ರಕ್ರಿಯೆಯು ಮತ್ತಷ್ಟು ಕಷ್ಟಕರವಾಗುತ್ತದೆ.” ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೈದರಾಬಾದ್ ವಿವಿ ‘ಕಾಂಚ ಗಚಿಬೌಲಿ’ ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ

ಹೈದರಾಬಾದ್ ವಿವಿ ‘ಕಾಂಚ ಗಚಿಬೌಲಿ’ ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...