Homeಮುಖಪುಟವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಶುಕ್ರವಾರ (ಏಪ್ರಿಲ್ 4, 2025) ಬೆಳಗಿನ ಜಾವ 2.30ಕ್ಕೆ ಸಂಸತ್ತು ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಮಸೂದೆಯ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ. ವಿರೋಧ ಪಕ್ಷವು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದು, ಇದು ಮುಸ್ಲಿಮರನ್ನು “ಎರಡನೇ ದರ್ಜೆ”ಯ ನಾಗರಿಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದ್ದು, ಮಸೂದೆಯ “ಉದ್ದೇಶ ಮತ್ತು ವಿಷಯ” ಎರಡನ್ನೂ ಪ್ರಶ್ನಿಸಿದೆ. ವಕ್ಪ್‌ ತಿದ್ದುಪಡಿ

ಗುರುವಾರ ಲೋಕಸಭೆಯಲ್ಲಿ 56 ಮತಗಳ ಅಂತರದಿಂದ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಇದಕ್ಕೂ ಮೊದಲು, ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಷರತ್ತಿನ ವಿರುದ್ಧದ ತಿದ್ದುಪಡಿಯನ್ನು ಡಿಎಂಕೆ ಸಂಸದ ತಿರುಚಿ ಶಿವ ಮಂಡಿಸಿದರು. ಆದರೆ ಈ ತಿದ್ದುಪಡಿಗೆ 125 ಮತಗಳು ವಿರುದ್ಧವಾಗಿ ಮತ್ತು 92 ಮತಗಳು ಪರವಾಗಿ ಚಲವಾಣೆಯಾದವು, ಹಾಗಾಗಿ ತಿದ್ದುಪಡಿಯನ್ನು ತಿರಸ್ಕರಿಸಲಾಯಿತು.

ಮಸೂದೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ಕೆಲವು ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು. ಅಲ್ಪಸಂಖ್ಯಾತ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು ಮಧ್ಯಾಹ್ನ 12:55 ಕ್ಕೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಆಲಿಸಿದೆ ಎಂದು ಅವರು ಪುನರುಚ್ಚರಿಸಿದರು. ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದಕ್ಕೆ ವಿರೋಧ ಪಕ್ಷದ ತೀವ್ರ ಆಕ್ಷೇಪಣೆಯನ್ನು ಅವರು ಆಧಾರರಹಿತ ಎಂದು ಪ್ರತಿಪಾದಿಸಿದ್ದಾರೆ.

ವಕ್ಫ್‌ ಮಂಡಳಿಯಲ್ಲಿ ಇತರ ಧರ್ಮಗಳ ಸದಸ್ಯರನ್ನು ಸೇರಿಸುವ ನಿಬಂಧನೆಯ ಬಗ್ಗೆ ಇತರ ಧಾರ್ಮಿಕ ದತ್ತಿ ಮಂಡಳಿಗಳೊಂದಿಗೆ ವಿರೋಧ ಪಕ್ಷದ ಹೋಲಿಕೆಯನ್ನು ತಳ್ಳಿಹಾಕಿದ ಅವರು, “ವಕ್ಫ್ ಮಂಡಳಿಗಳು ಶಾಸನಬದ್ಧ ಸಂಸ್ಥೆಗಳಾಗಿದ್ದು, ಹಿಂದೂ ದತ್ತಿ ಮಂಡಳಿಗಳಂತೆ ಧಾರ್ಮಿಕ ಸಂಸ್ಥೆಗಳಲ್ಲ. ಶಾಸನಬದ್ಧ ಸಂಸ್ಥೆಯು ಜಾತ್ಯತೀತವಾಗಿರಬೇಕು” ಎಂದು ಅವರು ಹೇಳಿದ್ದಾರೆ. ಇದರಲ್ಲಿ ಮುಸ್ಲಿಮೇತರ ಸದಸ್ಯರು ನಿರ್ಧಾರವನ್ನು ನಿರ್ದೇಶಿಸಲು ಸಾಧ್ಯವಿಲ್ಲ, “ಅವರು ಕೊಡುಗೆ ನೀಡಲು ಮಾತ್ರ ಸಾಧ್ಯವಿದೆ” ಎಂದು ಅವರು ಮತ್ತೆ ಸ್ಪಷ್ಟಪಡಿಸಿದ್ದಾರೆ.

“22 ಸದಸ್ಯರಿರುವ ಕೇಂದ್ರ ವಕ್ಫ್ ಮಂಡಳಿಯಲ್ಲಿ ಕೇವಲ ನಾಲ್ವರು ಮುಸ್ಲಿಮೇತರ ಸದಸ್ಯರು ಮಾತ್ರ ಇರಲು ಸಾಧ್ಯ ಎಂದು ನಾನು ಪದೇ ಪದೇ ಹೇಳಿದ್ದೇನೆ… ಆದರೂ ವಿರೋಧ ಪಕ್ಷಗಳು ಈ ವಿಷಯವನ್ನು ಪದೇ ಪದೇ ಎತ್ತಿದ್ದವು” ಎಂದು ಅವರು ಹೇಳಿದ್ದಾರೆ. ವಕ್ಪ್‌ ತಿದ್ದುಪಡಿ

ಗುರುವಾರ ಮಸೂದೆ ಬಗ್ಗೆ ಮಾತನಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್,  ಇದು “ಮುಸ್ಲಿಂ ಸಮುದಾಯವನ್ನು ಗುರಿ ಮಾಡಿಟ್ಟುಕೊಂಡು ಮಾಡಲಾಗಿರುವ ಕಾನೂನು” ಎಂದು ಬಣ್ಣಿಸಿದ್ದಾರೆ. ಜೊತೆಗೆ ದೇಶದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದ ಕಾರಣ ಆಡಳಿತರೂಢ ಪಕ್ಷವು 2024 ರಲ್ಲಿ ತನ್ನ ಮತ ಬ್ಯಾಂಕ್ ಅನ್ನು ಬಲಪಡಿಸುವ ಸಲುವಾಗಿ ಈ ಮಸೂದೆಯನ್ನು ತಂದಿದೆ” ಎಂದು ಅವರು ಆರೋಪಿಸಿದ್ದಾರೆ.

“ಕೋಮು ಧ್ರುವೀಕರಣಕ್ಕಾಗಿ ಮಾತ್ರ ಅವರು ಈ ಕಾಯ್ದೆಯನ್ನು ತರಲಾಗಿದೆ. ಕೋಮು ಧ್ರುವೀಕರಣ ನಡೆದಾಗ ಯಾರಿಗೆ ಲಾಭವಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಯಾವ ರಾಜಕೀಯ ಪಕ್ಷ ಒಂದು ಸಮುದಾಯವನ್ನು ಖಳನಾಯಕನಂತೆ ಬಿಂಬಿಸಲು ಮತ್ತು ಅದರ ವಿರುದ್ಧ ನಿರೂಪಣೆಯನ್ನು ನಿರ್ಮಿಸಲು ಪ್ರಯತ್ನಿಸುತ್ತದೆ” ಎಂದು ಎಲ್ಲರಿಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಕಾನೂನಿನ ಪ್ರಕಾರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಬಗ್ಗೆ ಬೆಟ್ಟು ಮಾಡಿದ ಹುಸೇನ್ ಅವರು, “ನೀವು ನನ್ನನ್ನು ಹಿಂದೂ ದೇವಾಲಯ ಟ್ರಸ್ಟ್‌ನ ಭಾಗವಾಗಲು ಬಿಡುತ್ತೀರಾ?” ಎಂದು ಕೇಳಿದ್ದಾರೆ. ಮಸೂದೆಯಲ್ಲಿ ತೆಗೆದುಹಾಕಲಾದ ವಕ್ಫ್ ಬೈ ಯೂಸರ್ ಷರತ್ತಿನ ಕುರಿತು ಮಾತನಾಡಿದ ಅವರು, ಶತಮಾನಗಳಿಂದ ಇರುವ ದೇವಾಲಯಗಳು, ಚರ್ಚ್‌ಗಳು ಅಥವಾ ಗುರುದ್ವಾರಗಳು ತಮ್ಮ ಆಸ್ತಿಗಳಿಗೆ ಸಾಕ್ಷ್ಯ ತರುವುದು ಹೇಗೆ? ಈಗ ವಕ್ಫ್ ಆಸ್ತಿಗಳಿಗೆ ಆ ಸಾಕ್ಷ್ಯ ಕೇಳಲಾಗುತ್ತಿದೆಯಲ್ಲವೇ? ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...