Homeಮುಖಪುಟವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಶುಕ್ರವಾರ (ಏಪ್ರಿಲ್ 4, 2025) ಬೆಳಗಿನ ಜಾವ 2.30ಕ್ಕೆ ಸಂಸತ್ತು ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಮಸೂದೆಯ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ. ವಿರೋಧ ಪಕ್ಷವು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದು, ಇದು ಮುಸ್ಲಿಮರನ್ನು “ಎರಡನೇ ದರ್ಜೆ”ಯ ನಾಗರಿಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದ್ದು, ಮಸೂದೆಯ “ಉದ್ದೇಶ ಮತ್ತು ವಿಷಯ” ಎರಡನ್ನೂ ಪ್ರಶ್ನಿಸಿದೆ. ವಕ್ಪ್‌ ತಿದ್ದುಪಡಿ

ಗುರುವಾರ ಲೋಕಸಭೆಯಲ್ಲಿ 56 ಮತಗಳ ಅಂತರದಿಂದ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಇದಕ್ಕೂ ಮೊದಲು, ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಷರತ್ತಿನ ವಿರುದ್ಧದ ತಿದ್ದುಪಡಿಯನ್ನು ಡಿಎಂಕೆ ಸಂಸದ ತಿರುಚಿ ಶಿವ ಮಂಡಿಸಿದರು. ಆದರೆ ಈ ತಿದ್ದುಪಡಿಗೆ 125 ಮತಗಳು ವಿರುದ್ಧವಾಗಿ ಮತ್ತು 92 ಮತಗಳು ಪರವಾಗಿ ಚಲವಾಣೆಯಾದವು, ಹಾಗಾಗಿ ತಿದ್ದುಪಡಿಯನ್ನು ತಿರಸ್ಕರಿಸಲಾಯಿತು.

ಮಸೂದೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ಕೆಲವು ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು. ಅಲ್ಪಸಂಖ್ಯಾತ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು ಮಧ್ಯಾಹ್ನ 12:55 ಕ್ಕೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಆಲಿಸಿದೆ ಎಂದು ಅವರು ಪುನರುಚ್ಚರಿಸಿದರು. ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದಕ್ಕೆ ವಿರೋಧ ಪಕ್ಷದ ತೀವ್ರ ಆಕ್ಷೇಪಣೆಯನ್ನು ಅವರು ಆಧಾರರಹಿತ ಎಂದು ಪ್ರತಿಪಾದಿಸಿದ್ದಾರೆ.

ವಕ್ಫ್‌ ಮಂಡಳಿಯಲ್ಲಿ ಇತರ ಧರ್ಮಗಳ ಸದಸ್ಯರನ್ನು ಸೇರಿಸುವ ನಿಬಂಧನೆಯ ಬಗ್ಗೆ ಇತರ ಧಾರ್ಮಿಕ ದತ್ತಿ ಮಂಡಳಿಗಳೊಂದಿಗೆ ವಿರೋಧ ಪಕ್ಷದ ಹೋಲಿಕೆಯನ್ನು ತಳ್ಳಿಹಾಕಿದ ಅವರು, “ವಕ್ಫ್ ಮಂಡಳಿಗಳು ಶಾಸನಬದ್ಧ ಸಂಸ್ಥೆಗಳಾಗಿದ್ದು, ಹಿಂದೂ ದತ್ತಿ ಮಂಡಳಿಗಳಂತೆ ಧಾರ್ಮಿಕ ಸಂಸ್ಥೆಗಳಲ್ಲ. ಶಾಸನಬದ್ಧ ಸಂಸ್ಥೆಯು ಜಾತ್ಯತೀತವಾಗಿರಬೇಕು” ಎಂದು ಅವರು ಹೇಳಿದ್ದಾರೆ. ಇದರಲ್ಲಿ ಮುಸ್ಲಿಮೇತರ ಸದಸ್ಯರು ನಿರ್ಧಾರವನ್ನು ನಿರ್ದೇಶಿಸಲು ಸಾಧ್ಯವಿಲ್ಲ, “ಅವರು ಕೊಡುಗೆ ನೀಡಲು ಮಾತ್ರ ಸಾಧ್ಯವಿದೆ” ಎಂದು ಅವರು ಮತ್ತೆ ಸ್ಪಷ್ಟಪಡಿಸಿದ್ದಾರೆ.

“22 ಸದಸ್ಯರಿರುವ ಕೇಂದ್ರ ವಕ್ಫ್ ಮಂಡಳಿಯಲ್ಲಿ ಕೇವಲ ನಾಲ್ವರು ಮುಸ್ಲಿಮೇತರ ಸದಸ್ಯರು ಮಾತ್ರ ಇರಲು ಸಾಧ್ಯ ಎಂದು ನಾನು ಪದೇ ಪದೇ ಹೇಳಿದ್ದೇನೆ… ಆದರೂ ವಿರೋಧ ಪಕ್ಷಗಳು ಈ ವಿಷಯವನ್ನು ಪದೇ ಪದೇ ಎತ್ತಿದ್ದವು” ಎಂದು ಅವರು ಹೇಳಿದ್ದಾರೆ. ವಕ್ಪ್‌ ತಿದ್ದುಪಡಿ

ಗುರುವಾರ ಮಸೂದೆ ಬಗ್ಗೆ ಮಾತನಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್,  ಇದು “ಮುಸ್ಲಿಂ ಸಮುದಾಯವನ್ನು ಗುರಿ ಮಾಡಿಟ್ಟುಕೊಂಡು ಮಾಡಲಾಗಿರುವ ಕಾನೂನು” ಎಂದು ಬಣ್ಣಿಸಿದ್ದಾರೆ. ಜೊತೆಗೆ ದೇಶದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದ ಕಾರಣ ಆಡಳಿತರೂಢ ಪಕ್ಷವು 2024 ರಲ್ಲಿ ತನ್ನ ಮತ ಬ್ಯಾಂಕ್ ಅನ್ನು ಬಲಪಡಿಸುವ ಸಲುವಾಗಿ ಈ ಮಸೂದೆಯನ್ನು ತಂದಿದೆ” ಎಂದು ಅವರು ಆರೋಪಿಸಿದ್ದಾರೆ.

“ಕೋಮು ಧ್ರುವೀಕರಣಕ್ಕಾಗಿ ಮಾತ್ರ ಅವರು ಈ ಕಾಯ್ದೆಯನ್ನು ತರಲಾಗಿದೆ. ಕೋಮು ಧ್ರುವೀಕರಣ ನಡೆದಾಗ ಯಾರಿಗೆ ಲಾಭವಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಯಾವ ರಾಜಕೀಯ ಪಕ್ಷ ಒಂದು ಸಮುದಾಯವನ್ನು ಖಳನಾಯಕನಂತೆ ಬಿಂಬಿಸಲು ಮತ್ತು ಅದರ ವಿರುದ್ಧ ನಿರೂಪಣೆಯನ್ನು ನಿರ್ಮಿಸಲು ಪ್ರಯತ್ನಿಸುತ್ತದೆ” ಎಂದು ಎಲ್ಲರಿಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಕಾನೂನಿನ ಪ್ರಕಾರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಬಗ್ಗೆ ಬೆಟ್ಟು ಮಾಡಿದ ಹುಸೇನ್ ಅವರು, “ನೀವು ನನ್ನನ್ನು ಹಿಂದೂ ದೇವಾಲಯ ಟ್ರಸ್ಟ್‌ನ ಭಾಗವಾಗಲು ಬಿಡುತ್ತೀರಾ?” ಎಂದು ಕೇಳಿದ್ದಾರೆ. ಮಸೂದೆಯಲ್ಲಿ ತೆಗೆದುಹಾಕಲಾದ ವಕ್ಫ್ ಬೈ ಯೂಸರ್ ಷರತ್ತಿನ ಕುರಿತು ಮಾತನಾಡಿದ ಅವರು, ಶತಮಾನಗಳಿಂದ ಇರುವ ದೇವಾಲಯಗಳು, ಚರ್ಚ್‌ಗಳು ಅಥವಾ ಗುರುದ್ವಾರಗಳು ತಮ್ಮ ಆಸ್ತಿಗಳಿಗೆ ಸಾಕ್ಷ್ಯ ತರುವುದು ಹೇಗೆ? ಈಗ ವಕ್ಫ್ ಆಸ್ತಿಗಳಿಗೆ ಆ ಸಾಕ್ಷ್ಯ ಕೇಳಲಾಗುತ್ತಿದೆಯಲ್ಲವೇ? ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...