Homeಮುಖಪುಟವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ವಕ್ಪ್‌ ತಿದ್ದುಪಡಿ | ಬೆಳಗಿನ ಜಾವ 2.30ಕ್ಕೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಶುಕ್ರವಾರ (ಏಪ್ರಿಲ್ 4, 2025) ಬೆಳಗಿನ ಜಾವ 2.30ಕ್ಕೆ ಸಂಸತ್ತು ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಮಸೂದೆಯ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ. ವಿರೋಧ ಪಕ್ಷವು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದು, ಇದು ಮುಸ್ಲಿಮರನ್ನು “ಎರಡನೇ ದರ್ಜೆ”ಯ ನಾಗರಿಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದ್ದು, ಮಸೂದೆಯ “ಉದ್ದೇಶ ಮತ್ತು ವಿಷಯ” ಎರಡನ್ನೂ ಪ್ರಶ್ನಿಸಿದೆ. ವಕ್ಪ್‌ ತಿದ್ದುಪಡಿ

ಗುರುವಾರ ಲೋಕಸಭೆಯಲ್ಲಿ 56 ಮತಗಳ ಅಂತರದಿಂದ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಇದಕ್ಕೂ ಮೊದಲು, ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಷರತ್ತಿನ ವಿರುದ್ಧದ ತಿದ್ದುಪಡಿಯನ್ನು ಡಿಎಂಕೆ ಸಂಸದ ತಿರುಚಿ ಶಿವ ಮಂಡಿಸಿದರು. ಆದರೆ ಈ ತಿದ್ದುಪಡಿಗೆ 125 ಮತಗಳು ವಿರುದ್ಧವಾಗಿ ಮತ್ತು 92 ಮತಗಳು ಪರವಾಗಿ ಚಲವಾಣೆಯಾದವು, ಹಾಗಾಗಿ ತಿದ್ದುಪಡಿಯನ್ನು ತಿರಸ್ಕರಿಸಲಾಯಿತು.

ಮಸೂದೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ಕೆಲವು ವಿರೋಧ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು. ಅಲ್ಪಸಂಖ್ಯಾತ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು ಮಧ್ಯಾಹ್ನ 12:55 ಕ್ಕೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಆಲಿಸಿದೆ ಎಂದು ಅವರು ಪುನರುಚ್ಚರಿಸಿದರು. ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದಕ್ಕೆ ವಿರೋಧ ಪಕ್ಷದ ತೀವ್ರ ಆಕ್ಷೇಪಣೆಯನ್ನು ಅವರು ಆಧಾರರಹಿತ ಎಂದು ಪ್ರತಿಪಾದಿಸಿದ್ದಾರೆ.

ವಕ್ಫ್‌ ಮಂಡಳಿಯಲ್ಲಿ ಇತರ ಧರ್ಮಗಳ ಸದಸ್ಯರನ್ನು ಸೇರಿಸುವ ನಿಬಂಧನೆಯ ಬಗ್ಗೆ ಇತರ ಧಾರ್ಮಿಕ ದತ್ತಿ ಮಂಡಳಿಗಳೊಂದಿಗೆ ವಿರೋಧ ಪಕ್ಷದ ಹೋಲಿಕೆಯನ್ನು ತಳ್ಳಿಹಾಕಿದ ಅವರು, “ವಕ್ಫ್ ಮಂಡಳಿಗಳು ಶಾಸನಬದ್ಧ ಸಂಸ್ಥೆಗಳಾಗಿದ್ದು, ಹಿಂದೂ ದತ್ತಿ ಮಂಡಳಿಗಳಂತೆ ಧಾರ್ಮಿಕ ಸಂಸ್ಥೆಗಳಲ್ಲ. ಶಾಸನಬದ್ಧ ಸಂಸ್ಥೆಯು ಜಾತ್ಯತೀತವಾಗಿರಬೇಕು” ಎಂದು ಅವರು ಹೇಳಿದ್ದಾರೆ. ಇದರಲ್ಲಿ ಮುಸ್ಲಿಮೇತರ ಸದಸ್ಯರು ನಿರ್ಧಾರವನ್ನು ನಿರ್ದೇಶಿಸಲು ಸಾಧ್ಯವಿಲ್ಲ, “ಅವರು ಕೊಡುಗೆ ನೀಡಲು ಮಾತ್ರ ಸಾಧ್ಯವಿದೆ” ಎಂದು ಅವರು ಮತ್ತೆ ಸ್ಪಷ್ಟಪಡಿಸಿದ್ದಾರೆ.

“22 ಸದಸ್ಯರಿರುವ ಕೇಂದ್ರ ವಕ್ಫ್ ಮಂಡಳಿಯಲ್ಲಿ ಕೇವಲ ನಾಲ್ವರು ಮುಸ್ಲಿಮೇತರ ಸದಸ್ಯರು ಮಾತ್ರ ಇರಲು ಸಾಧ್ಯ ಎಂದು ನಾನು ಪದೇ ಪದೇ ಹೇಳಿದ್ದೇನೆ… ಆದರೂ ವಿರೋಧ ಪಕ್ಷಗಳು ಈ ವಿಷಯವನ್ನು ಪದೇ ಪದೇ ಎತ್ತಿದ್ದವು” ಎಂದು ಅವರು ಹೇಳಿದ್ದಾರೆ. ವಕ್ಪ್‌ ತಿದ್ದುಪಡಿ

ಗುರುವಾರ ಮಸೂದೆ ಬಗ್ಗೆ ಮಾತನಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ದಾಳಿ ಮಾಡಿದ ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್,  ಇದು “ಮುಸ್ಲಿಂ ಸಮುದಾಯವನ್ನು ಗುರಿ ಮಾಡಿಟ್ಟುಕೊಂಡು ಮಾಡಲಾಗಿರುವ ಕಾನೂನು” ಎಂದು ಬಣ್ಣಿಸಿದ್ದಾರೆ. ಜೊತೆಗೆ ದೇಶದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾದ ಕಾರಣ ಆಡಳಿತರೂಢ ಪಕ್ಷವು 2024 ರಲ್ಲಿ ತನ್ನ ಮತ ಬ್ಯಾಂಕ್ ಅನ್ನು ಬಲಪಡಿಸುವ ಸಲುವಾಗಿ ಈ ಮಸೂದೆಯನ್ನು ತಂದಿದೆ” ಎಂದು ಅವರು ಆರೋಪಿಸಿದ್ದಾರೆ.

“ಕೋಮು ಧ್ರುವೀಕರಣಕ್ಕಾಗಿ ಮಾತ್ರ ಅವರು ಈ ಕಾಯ್ದೆಯನ್ನು ತರಲಾಗಿದೆ. ಕೋಮು ಧ್ರುವೀಕರಣ ನಡೆದಾಗ ಯಾರಿಗೆ ಲಾಭವಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಯಾವ ರಾಜಕೀಯ ಪಕ್ಷ ಒಂದು ಸಮುದಾಯವನ್ನು ಖಳನಾಯಕನಂತೆ ಬಿಂಬಿಸಲು ಮತ್ತು ಅದರ ವಿರುದ್ಧ ನಿರೂಪಣೆಯನ್ನು ನಿರ್ಮಿಸಲು ಪ್ರಯತ್ನಿಸುತ್ತದೆ” ಎಂದು ಎಲ್ಲರಿಗೂ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಕಾನೂನಿನ ಪ್ರಕಾರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಬಗ್ಗೆ ಬೆಟ್ಟು ಮಾಡಿದ ಹುಸೇನ್ ಅವರು, “ನೀವು ನನ್ನನ್ನು ಹಿಂದೂ ದೇವಾಲಯ ಟ್ರಸ್ಟ್‌ನ ಭಾಗವಾಗಲು ಬಿಡುತ್ತೀರಾ?” ಎಂದು ಕೇಳಿದ್ದಾರೆ. ಮಸೂದೆಯಲ್ಲಿ ತೆಗೆದುಹಾಕಲಾದ ವಕ್ಫ್ ಬೈ ಯೂಸರ್ ಷರತ್ತಿನ ಕುರಿತು ಮಾತನಾಡಿದ ಅವರು, ಶತಮಾನಗಳಿಂದ ಇರುವ ದೇವಾಲಯಗಳು, ಚರ್ಚ್‌ಗಳು ಅಥವಾ ಗುರುದ್ವಾರಗಳು ತಮ್ಮ ಆಸ್ತಿಗಳಿಗೆ ಸಾಕ್ಷ್ಯ ತರುವುದು ಹೇಗೆ? ಈಗ ವಕ್ಫ್ ಆಸ್ತಿಗಳಿಗೆ ಆ ಸಾಕ್ಷ್ಯ ಕೇಳಲಾಗುತ್ತಿದೆಯಲ್ಲವೇ? ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಪ್ರಯತ್ನ: ನಾಸಿರ್ ಹುಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...