Homeಮುಖಪುಟ‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ...

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, ಸರ್ಕಾರವು ಉದ್ದೇಶಪೂರ್ವಕವಾಗಿ ಜನರನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರವು ನಿಜವಾಗಿಯೂ ಸಂವಿಧಾನವನ್ನು ನಂಬಿದರೆ, ಅದು ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ತಮ್ಮ ಭಾಷಣದ ಸಮಯದಲ್ಲಿ, ಇತ್ತಿಚೆಗೆ ಬಿಡುಗಡೆಯಾದ ಮಲಯಾಳಂ ಸಿನಿಮಾ ಎಂಪುರಾನ್ ಅನ್ನು ಉಲ್ಲೇಖಿಸಿದ ಬ್ರಿಟ್ಟಾಸ್, ಬಿಜೆಪಿ ಸಂಸದ ಸುರೇಶ್ ಗೋಪಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ನಿಮ್ಮ ವಿಷವನ್ನು ಕೇರಳ

ಸದನದಲ್ಲಿರುವ ಬಿಜೆಪಿ ಸದಸ್ಯರಲ್ಲಿ ಎಂಪೂರನ್‌ ಸಿನಿಮಾದ ‘ಮುನ್ನಾ’ ಎಂಬ ಪಾತ್ರಧಾರಿಯಂತ ವ್ಯಕ್ತಿಯಿದ್ದಾರೆ ಎಂದು ಬ್ರಿಟ್ಟಾಸ್ ಪರೋಕ್ಷವಾಗಿ ಬಿಜೆಪಿ ಸಂಸದ ಸುರೇಶ್ ಗೋಪಿಯನ್ನು ಉಲ್ಲೇಖಿಸಿದ್ದಾರೆ. ನಂತರ ಅವರು,“ನಾವು ನಿಮ್ಮ ವಿಷವನ್ನು ಕೇರಳದಿಂದ ದೂರವಿಟ್ಟಿದ್ದೇವೆ. ಆದಾಗ್ಯೂ, ಒಬ್ಬ ವ್ಯಕ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಶೀಘ್ರದಲ್ಲೇ ಆ ಖಾತೆಯನ್ನು ಸಹ ಮುಚ್ಚಲಾಗುವುದು.” ಎಂದು ಹೇಳಿದ್ದಾರೆ. ನಿಮ್ಮ ವಿಷವನ್ನು ಕೇರಳ

ಜಾನ್ ಬ್ರಿಟ್ಟಾಸ್ ಅವರ ಭಾಷಣದ ಆಯ್ದ ಭಾಗಗಳು:

“ಕಳೆದ ವರ್ಷವೊಂದರಲ್ಲೇ, ಕ್ರಿಶ್ಚಿಯನ್ನರ ಮೇಲೆ ಸುಮಾರು 700 ದಾಳಿಗಳು ನಡೆದಿವೆ. ಮಣಿಪುರದಲ್ಲಿ, ಅವರು 200 ಕ್ಕೂ ಹೆಚ್ಚು ಚರ್ಚ್‌ಗಳನ್ನು ಸುಟ್ಟುಹಾಕಿದರು. ಕಳೆದ ಎರಡು ಅಥವಾ ಮೂರು ದಿನಗಳಿಂದ ಬಿಜೆಪಿ ಇದ್ದಕ್ಕಿದ್ದಂತೆ ಕ್ರಿಶ್ಚಿಯನ್ನರು ಮತ್ತು ಮುನಂಬಮ್ ಪ್ರದೇಶದ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ. ನಾವು ಸ್ಟಾನ್ ಸ್ವಾಮಿಯನ್ನು ಮರೆಯಲು ಸಾಧ್ಯವೆ? ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ, ಸಹಾಯವಿಲ್ಲದೆ ಒಂದು ಹನಿ ನೀರು ಕುಡಿಯಲು ಸಾಧ್ಯವಾಗದ ಅವರಿಗೆ ಒಂದು ಸ್ಟ್ರಾ ಕೂಡಾ ನೀಡದೆ ಜೈಲಿನಲ್ಲಿ ಸಾಯಲು ಬಿಡಲಿಲ್ಲವೇ? ನಾವು ಗ್ರಹಾಂ ಸ್ಟೇನ್ಸ್ ಅವರನ್ನು ಮರೆಯಲು ಸಾಧ್ಯವೇ? ಅವರನ್ನು ಅವರ ಮಕ್ಕಳೊಂದಿಗೆ ಜೀವಂತವಾಗಿ ಸುಟ್ಟುಹಾಕಲಿಲ್ಲವೇ? ಇಂದಿಗೂ ದಾಳಿಗಳು ಮುಂದುವರೆದಿವೆ.”

“ಕೇವಲ ಮೂವತ್ತು ಬೆಳ್ಳಿಯ ತುಂಡುಗಳಿಗಾಗಿ ಯೇಸು ಕ್ರಿಸ್ತನಿಗೆ ದ್ರೋಹ ಮಾಡಿದ ಪಾತ್ರವೊಂದು ಬೈಬಲ್‌ನಲ್ಲಿದೆ. ಇಲ್ಲಿ ಕೆಲವರು ಹಾಗೆ ಇದ್ದಾರೆ. ಕೆಲವು ದಿನಗಳ ಹಿಂದೆ, ಕೆಲವು ವ್ಯಕ್ತಿಗಳು ಶಿಲುಬೆ ಮತ್ತು ಕ್ರಿಶ್ಚಿಯನ್ನರ ಬಗ್ಗೆ ಮಾತನಾಡಿದರು, ಆದರೆ ವಾಸ್ತವದಲ್ಲಿ, ಅವರು ಕ್ರಿಸ್ತನಿಗೆ ದ್ರೋಹ ಮಾಡಿದ ಯೂದನಂತಿದ್ದಾರೆ.”

“ಇತ್ತೀಚೆಗೆ, ನಾವು ಎಂಪುರಾನ್ ಚಿತ್ರದ ಬಗ್ಗೆ ಮಾತನಾಡಿದ್ದೆವು. ಆ ಚಿತ್ರದಲ್ಲಿ ಮುನ್ನಾ ಎಂಬ ಪಾತ್ರವಿದೆ. ಮುನ್ನಾ ಯಾರೆಂದು ನಿಮಗೆ ತಿಳಿದಿದೆಯೇ? ಆ ಪಾತ್ರವನ್ನು ನೀವು ಇಲ್ಲಿಯೇ(ಬಿಜೆಪಿ ಪೀಢಗಳ ಮೇಲೆ) ನೋಡಬಹುದು. ಕೇರಳದ ಜನರು ಈ ಮುನ್ನಾ ಪಾತ್ರಧಾರಿಯನ್ನು ಗುರುತಿಸುತ್ತಾರೆ. ಅದು ಕೇರಳದ ಇತಿಹಾಸ. ನಾವು ನಿಮ್ಮ ವಿಷವನ್ನು ನಮ್ಮ ರಾಜ್ಯದಿಂದ ದೂರವಿಟ್ಟಿದ್ದೇವೆ. ಹೌದು, ಒಬ್ಬ ವ್ಯಕ್ತಿ ಗೆದ್ದಿದ್ದಾನೆ, ವಿಧಾನಸಭೆಯಲ್ಲಿ ಕೂಡಾ ಒಂದು ಖಾತೆ ಇತ್ತು, ಅದನ್ನು ನಾವು ಮುಚ್ಚಿದ್ದೇವೆ. ಅದನ್ನು ಮುಚ್ಚಿದಂತೆ, ಶೀಘ್ರದಲ್ಲೇ ಲೋಕಸಭೆಯ ಈ ಖಾತೆಯನ್ನು ಸಹ ಮುಚ್ಚುತ್ತೇವೆ. ಕೇರಳದಲ್ಲಿ ಒಂದು ತಪ್ಪು ಸಂಭವಿಸಿದೆ, ಆದರೆ ನಾವು ಅದನ್ನು ಶೀಘ್ರದಲ್ಲೇ ಸರಿಪಡಿಸುತ್ತೇವೆ – ಚಿಂತಿಸುವ ಅಗತ್ಯವಿಲ್ಲ.”

ಬ್ರಿಟ್ಟಾಸ್ ಅವರ ಈ ಹೇಳಿಕೆ ಸಂಸದ ಸುರೇಶ್ ಗೋಪಿ ಅವರ ತ್ರಿಶೂರ್‌ ಕ್ಷೇತ್ರದ ಬಗ್ಗೆಯಾಗಿದೆ. ಅವರು ಕೇರಳದ ಮೊದಲ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು.

ಮುನಂಬಮ್ ಬಗ್ಗೆ ಭರವಸೆ:

ಬ್ರಿಟಸ್ ಮುನಂಬಮ್ ಪ್ರದೇಶದ ಜನರಿಗೆ ಇದೇ ವೇಳೆ ಭರವಸೆ ನೀಡಿದ್ದಾರೆ. “ಮುನಂಬಮ್‌ನಲ್ಲಿ ಯಾರೂ ತಮ್ಮ ಮನೆಯನ್ನು ಕಳೆದುಕೊಳ್ಳುವುದಿಲ್ಲ. ಇದು ಎಡಪಂಥೀಯ ಸರ್ಕಾರದ ಬದ್ಧತೆಯಾಗಿದೆ. ಐದು ಲಕ್ಷ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಶಕ್ತಿ ಮತ್ತು ಪ್ರಾಮಾಣಿಕತೆ ನಮಗಿದ್ದರೆ, ಮುನಂಬಮ್‌ನ ಜನರನ್ನು ರಕ್ಷಿಸುವ ಜವಾಬ್ದಾರಿಯೂ ನಮಗಿದೆ.” ಎಂದು ಘೋಷಿಸಿದ್ದಾರೆ.

“ನಾವು ಅದನ್ನು ಮಾಡಲಿದ್ದು, ನಮಗೆ ಯಾರ ಸಹಾನುಭೂತಿಯೂ ಅಗತ್ಯವಿಲ್ಲ. ಕೇರಳದಲ್ಲಿ ಯಾವುದೇ ಮಸೀದಿಯನ್ನು ಬಲವಂತವಾಗಿ ಮುಚ್ಚಲಾಗುವುದಿಲ್ಲ. ಯಾವುದೇ ಪೂಜಾ ಸ್ಥಳವನ್ನು ಮರೆಮಾಡಲಾಗುವುದಿಲ್ಲ. ಯಾರೂ ಭಯದಿಂದ ಬದುಕಬೇಕಾಗಿಲ್ಲ. ಕೇರಳದಲ್ಲಿ ಸಹೋದರತ್ವದ ವಾತಾವರಣವನ್ನು ನಾವು ಖಚಿತಪಡಿಸುತ್ತೇವೆ. ಅದು ಅಲ್ಲಿ ಅಸ್ತಿತ್ವದಲ್ಲಿದ್ದು, ಅದನ್ನು ಹೇಗೆ ನಿರ್ವಹಿಸಬೇಕೆಂದು ನಮಗೆ ತಿಳಿದಿದೆ. ನೀವು ಈಗ ಕ್ರಿಶ್ಚಿಯನ್ನರಿಗಾಗಿ ಮೊಸಳೆ ಕಣ್ಣೀರು ಸುರಿಸಿರಬಹುದು, ಆದರೆ ಕೇರಳದ ಜನರು ನಿಮ್ಮ ವಂಚನೆಯನ್ನು ನೋಡುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಿ.”

ಬಿಜೆಪಿಯ ಕೋಮು ರಾಜಕೀಯದ ಟೀಕೆ:

ದೇಶದಲ್ಲಿ ನಿರಾಶ್ರಿತರಾಗಿರುವ ಜನರ ದುಃಸ್ಥಿತಿಯನ್ನು ಎತ್ತಿ ತೋರಿಸಿದ ಜಾನ್ ಬ್ರಿಟ್ಟಾಸ್, “ನೀವು ಈ ಮಸೂದೆಯನ್ನು ಮಂಡಿಸುವಾಗ ‘ಮುನಂಬಂ, ಮುನಂಬಂ’ ಎಂದು ಪುನರಾವರ್ತಿಸುತ್ತಿದ್ದೀರಿ. ಆದರೆ ಉತ್ತರ ಭಾರತದಲ್ಲಿ, ನೀವು ಹತ್ತಾರು ಸಾವಿರ ಜನರನ್ನು ಸ್ಥಳಾಂತರಗೊಳಿಸಿ, ನಿರಾಶ್ರಿತರನ್ನಾಗಿ ಮಾಡಿದ್ದೀರಿ. ಮಣಿಪುರದಲ್ಲಿ 50,000 ಕ್ಕೂ ಹೆಚ್ಚು ಜನರು ಈಗ ನಿರಾಶ್ರಿತರಾಗಿದ್ದಾರೆ. ಅನೇಕರು ದೇಶವನ್ನು ಬಿಟ್ಟು ಓಡಿಹೋಗಿದ್ದಾರೆ. ಅವರ ಬಗ್ಗೆ ನೀವು ಏನೂ ಹೇಳುತ್ತಿಲ್ಲ. ನೀವು ಹಲವಾರು ಚರ್ಚುಗಳನ್ನು ನಾಶಪಡಿಸಿದ್ದೀರಿ. ನೀವು ಎಂಪುರಾನ್‌ನ ಮುನ್ನಾ ಪಾತ್ರಧಾರಿಯಾಗಿದ್ದೀರಿ. ಆದರೆ ಕೇರಳದ ಜನರು ನಿಮ್ಮಲ್ಲಿರುವ ಈ ಮುನ್ನಾಗಳನ್ನು ಗುರುತಿಸುವ ಶಕ್ತಿಯನ್ನು ಹೊಂದಿದ್ದಾರೆ.”

“ನಿಜವಾಗಿಯೂ ಭಾರತೀಯ ಸಂವಿಧಾನವನ್ನು ನೀವು ನಂಬಿದರೆ, ಈ ಮಸೂದೆಯನ್ನು ಹಿಂತೆಗೆದುಕೊಳ್ಳಿ. ನೀವು ಕೋಮು ಸಾಮರಸ್ಯವನ್ನು ಬಯಸಿದರೆ, ಎಲ್ಲಾ ಜನರನ್ನು ಮತ್ತು ಎಲ್ಲಾ ನಂಬಿಕೆಗಳನ್ನು ಸಮಾನವಾಗಿ ಪರಿಗಣಿಸುವಲ್ಲಿ ನಂಬಿಕೆಯಿದ್ದರೆ, ಈ ಮಸೂದೆಯನ್ನು ಹಿಂತೆಗೆದುಕೊಳ್ಳಿ” ಎಂದು ಬ್ರಿಟ್ಟಾಸ್ ನೇರ ಮನವಿಯೊಂದಿಗೆ ತನ್ನ ಭಾಷಣವನ್ನು ಮುಕ್ತಾಯಗೊಳಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ವಕ್ಫ್ ಮಸೂದೆಗೆ ಬೆಂಬಲ | ನಿತೀಶ್‌ ನೇತೃತ್ವದ ಜೆಡಿಯುನಲ್ಲಿ ಸರಣಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...