Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಪದಚ್ಯುತಿ ಎತ್ತಿಹಿಡಿದ ಕೋರ್ಟ್

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಪದಚ್ಯುತಿ ಎತ್ತಿಹಿಡಿದ ಕೋರ್ಟ್

- Advertisement -
- Advertisement -

ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷ ಯೂನ್ ಸುಕ್‌ ಯೋಲ್ ಅವರನ್ನು ಸಾಂವಿಧಾನಿಕ ನ್ಯಾಯಾಲಯ ಶುಕ್ರವಾರ (ಏ.3) ಅಧಿಕಾರದಿಂದ ವಜಾಗೊಳಿಸಿದೆ. ಈ ಮೂಲಕ ಕಳೆದ ನಾಲ್ಕು ತಿಂಗಳಿನಿಂದ ತಲೆದೋರಿದ್ದ ರಾಜಕೀಯ ಅಸ್ಥಿರತೆಗೆ ಅಂತ್ಯ ಹಾಡಿದೆ.

ಎಂಟು ನ್ಯಾಯಮೂರ್ತಿಗಳಲ್ಲಿ ಆರು ಮಂದಿ ಯೂನ್ ಅವರ ಪದಚ್ಯುತಿ ಪರವಾಗಿ ತೀರ್ಪು ನೀಡಿದ್ದಾರೆ. ಆದ್ದರಿಂದ ಅವರು ಅಧಿಕಾರದಿಂದ ವಜಾಗೊಂಡಿದ್ದಾರೆ ಎಂದು ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

“ಯೂನ್ ಅವರು ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿರುವುದು ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಗಂಭೀರ ಋಣಾತ್ಮಕ ಪರಿಣಾಮ ಬೀರಿದೆ. ಯೂನ್ ಅವರು ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ ಅವರನ್ನು ಅಧಿಕಾರದಿಂದ ವಜಾಗೊಳಿಸುವುದು ಸೂಕ್ತವೆನಿಸುತ್ತದೆ” ಎಂದು ತೀರ್ಪು ಪ್ರಕಟಿಸುವಾಗ ನ್ಯಾಯಾಲಯದ ಹಂಗಾಮಿ ಮುಖ್ಯಸ್ಥ ಮೂನ್ ಹ್ಯುಂಗ್-ಬೇ ಹೇಳಿದ್ದಾರೆ.

“ಯೂನ್ ಅವರು ತುರ್ತು ಮಿಲಿಟರಿ ಆಡಳಿತವನ್ನು ಜಾರಿಗೊಳಿಸಿ, ಶಾಸಕಾಂಗದ ಆಡಳಿತ ಅಧಿಕಾರವನ್ನು ಕಿತ್ತುಕೊಂಡಿದ್ದಾರೆ. ಇದಕ್ಕಾಗಿ ಮಿಲಿಟರಿ ಮತ್ತು ಪೊಲೀಸ್ ಬಲ ಪ್ರಯೋಗಿಸಿ ಸಂವಿಧಾನ ಉಲ್ಲಂಘಿಸಿದ್ದಾರೆ. ತುರ್ತು ಮಿಲಿಟರಿ ಆಡಳಿತ ಹೇರುವ ಮೂಲಭೂತ ನಿಯಮಗಳನ್ನು ಅವರು ಪಾಲಿಸಿಲ್ಲ” ಎಂದಿದ್ದಾರೆ.

ನ್ಯಾಯಾಲಯದ ತೀರ್ಪಿನಿಂದ ಕಳೆದ ನಾಲ್ಕು ತಿಂಗಳಿನಿಂದ ತಲೆದ್ದೋರಿದ್ದ ರಾಜಕೀಯ ಅಸ್ಥಿರತೆ ಕೊನೆಗೊಂಡಿದೆ. ಮುಂದಿನ ಎರಡು ತಿಂಗಳ ಒಳಗೆ ಅಧ್ಯಕ್ಷೀಯ ಚುನಾವಣೆ ನಡೆಸಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಿದೆ.

ನ್ಯಾಯಾಲಯದ ಆದೇಶ ದಕ್ಷಿಣ ಕೊರಿಯಾದಲ್ಲಿ ಮಹತ್ವದ ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ನ್ಯಾಯಯುತ ರೀತಿಯಲ್ಲಿ ಹೊಸ ಅಧ್ಯಕ್ಷರ ಆಯ್ಕೆಯೂ ನಡೆಯಬಹುದು. ಆದರೆ, ಮತ್ತೊಂದೆಡೆ ಯೂನ್ ಅವರ ಬೆಂಬಲಿಗರು ತಿರುಗಿ ಬೀಳುವ ಸಾಧ್ಯತೆಯೂ ಇದೆ. ಯೂನ್ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದೂ ಕಾದು ನೋಡಬೇಕಿದೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ದೇಶದಲ್ಲಿ ಮಿಲಿಟರಿ ಕಣ್ಗಾವಲು ಹೆಚ್ಚಿಸಲಾಗಿದೆ.

“ಜನರು ಶಾಂತವಾಗಿರಬೇಕು, ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾರೂ ಉದ್ವೇಗಕ್ಕೆ ಒಳಗಾಗಬಾರದು” ಎಂದು ಹಂಗಾಮಿ ಅಧ್ಯಕ್ಷ ಹಾನ್ ಡಕ್-ಸೂ ಮನವಿ ಮಾಡಿದ್ದಾರೆ.

ನ್ಯಾಯಾಲಯದ ತೀರ್ಪಿಗೂ ಮುನ್ನ ಸಚಿವ ಸಂಪುಟದ ಸಭೆ ನಡೆಸಿದ ಅವರು, ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ರಾಜಕಾರಣಿಗಳು ಅಶಾಂತಿ ಉಂಟು ಮಾಡಬಹುದಾದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

ಯಾವುದೇ ಕಾನೂನುಬಾಹಿರ, ಹಿಂಸಾತ್ಮಕ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಕೃತ್ಯವೆಸಗುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಯೂನ್ ಸುಕ್ ಯೋಲ್ ಅಧಿಕಾರ ಕಳೆದುಕೊಂಡಿದ್ದೇಕೆ?

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಯೂನ್ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿತ್ತು. ಅವರ ವಿರುದ್ದ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಮೂರು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ಯೂನ್ ಅದನ್ನು ಕಡೆಗಣಿಸಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಅವರ ಬಂಧನಕ್ಕೆ ಮನೆ ಬಳಿಗೆ ಹೋದಾಗ, ಬೆಂಬಲಿಗರು ಹೈಡ್ರಾಮ ಸೃಷ್ಟಿಸಿ ಬಂಧನಕ್ಕೆ ಅಡ್ಡಿಪಡಿಸಿದ್ದರು.

ಕೊನೆಗೆ, 2025ರ ಜನವರಿ 15ರಂದು ಬೆಳಗಿನ ಜಾವಕ್ಕೆ ಮುನ್ನ, ಭ್ರಷ್ಟಾಚಾರ ತನಿಖಾ ಕಚೇರಿಯ ನೂರಾರು ಪೊಲೀಸ್ ಮತ್ತು ತನಿಖಾಧಿಕಾರಿಗಳು ಮತ್ತೆ ಯೋನ್ ಅವರ ಮನೆಯಯನ್ನು ಸುತ್ತುವರೆದರು. ಕೆಲವರು ಹಿಂದಿನ ಭಾಗದಲ್ಲಿ ಕಾಂಪೌಂಡ್ ಗೋಡೆ ಹತ್ತಿ ಮುಖ್ಯ ಕಟ್ಟಡ ತಲುಪಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಮುಂದಾದರು. ಸುಮಾರು ಐದು ಗಂಟೆಗಳ ಕಾಲ ನಡೆದ ತಿಕ್ಕಾಟದ ನಂತರ, ಅಧಿಕಾರಿಗಳು ಯೋಲ್ ಅವರನ್ನು ಬಂಧಿಸಿಲಾಗಿದೆ ಎಂದು ಘೋಷಿಸಿದರು.

ಶುಕ್ರವಾರ ನ್ಯಾಯಾಲಯದ ತೀರ್ಪು ಹೊರ ಬೀಳುವ ಹೊತ್ತಿಗೆ ಯೂನ್ ಅವರ ಸಾವಿರಾರು ಬೆಂಬಲಿಗರು ಸಿಯೋಲ್‌ನ ಡೌನ್‌ಟೌನ್‌ನಲ್ಲಿ ಜಮಾಯಿಸಿದ್ದರು. ಸಂಭಾವ್ಯ ಘರ್ಷಣೆಗಳನ್ನು ತಡೆಗಟ್ಟಲು ಸರ್ಕಾರ ನೂರಾರು ಪೊಲೀಸ್ ಬಸ್‌ಗಳು, ಬ್ಯಾರಿಕೇಡ್‌ಗಳು ಮತ್ತು ಅಧಿಕಾರಿಗಳನ್ನು ನಿಯೋಜಿಸಿತ್ತು.

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...