Homeಮುಖಪುಟಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

- Advertisement -
- Advertisement -

ಖ್ಯಾತ ಫ್ಯಾಕ್ಟ್‌ಚೆಕ್ಕರ್‌, ಆಲ್ಟ್-ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಛತ್ತೀಸ್‌ಗಢ ರಾಜ್ಯ ಸರ್ಕಾರ ಅಧಿಕೃತವಾಗಿ ಛತ್ತೀಸ್‌ಗಢ ಹೈಕೋರ್ಟ್‌ಗೆ ತಿಳಿಸಿದೆ. ಝುಬೈರ್ ಅವರು 2020 ರಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿ ಈ ಪ್ರಕರಣ ದಾಖಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರನ್ನೊಳಗೊಂಡ ಪೀಠದ ಮುಂದೆ ರಾಜ್ಯದ ವಕೀಲರು ಈ ಮಾಹಿತಿಯನ್ನು ಮಂಡಿಸಿದ್ದಾರೆ. ಇದರ ನಂತರ, ವಿಭಾಗೀಯ ಪೀಠವು ಝುಬೈರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು. ಇದರಲ್ಲಿ ಐಟಿ ಕಾಯ್ದೆ, ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಝುಬೈರ್ ಅವರು, ಸತ್ಯಕ್ಕೆ ಹಿನ್ನಡೆಯಾಗಬಹುದು, ಆದರೆ ಅದನ್ನು ಸೋಲಿಸಲು ಸಾಧ್ಯವಿಲ್ಲ. ನ್ಯಾಯವು ಗೆಲ್ಲುತ್ತದೆ! ಎಂದು ಹೇಳಿದ್ದಾರೆ.

“ಈಗ ಎರಡು ಕಡಿಮೆಯಾಗಿದೆ, ಇನ್ನೂ ಹತ್ತು ಎಫ್‌ಐಆರ್‌ಗಳು ಬಾಕಿ ಇವೆ. ಛತ್ತೀಸ್‌ಗಢದಲ್ಲಿ ಪೋಕ್ಸೋ ಕಾಯ್ದೆಯಡಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿ 4 ವರ್ಷಗಳ ನಂತರ, ರಾಯ್‌ಪುರ ಪೊಲೀಸರು ಅಂತಿಮವಾಗಿ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ಛತ್ತೀಸ್‌ಗಢ ನ್ಯಾಯಾಲಯವು ಆದೇಶವನ್ನು ವಿಲೇವಾರಿ ಮಾಡಿದೆ. ಈ ಪ್ರಕರಣದಲ್ಲಿ, ಕನೂಂಗೊ ಪ್ರಿಯಾಂಕ್, ಎನ್‌ಸಿಪಿಸಿಆರ್ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ದೆಹಲಿ ಮತ್ತು ರಾಯ್‌ಪುರ ಪೊಲೀಸರಿಗೆ ಪತ್ರ ಬರೆದು ನನ್ನ ಟ್ವೀಟ್ ಅಪ್ರಾಪ್ತ ಬಾಲಕಿಯ ಚಿತ್ರಹಿಂಸೆ ಮತ್ತು ಕಿರುಕುಳಕ್ಕೆ ಸಮನಾಗಿದೆ ಎಂದು ಆರೋಪಿಸಿ ನನ್ನ ವಿರುದ್ಧ ಅಪಪ್ರಚಾರ ನಡೆಸಿತು. ಆದರೆ ಕಳೆದ ವರ್ಷ, ದೆಹಲಿ ನ್ಯಾಯಾಲಯವು ನನ್ನ ವಿರುದ್ಧ ಪ್ರಕರಣ ದಾಖಲಿಸಿದ ವ್ಯಕ್ತಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಕೇಳಿತ್ತು. ಮತ್ತು ಈಗ ಛತ್ತೀಸ್‌ಗಢ ಪೊಲೀಸರು ಮುಕ್ತಾಯ ವರದಿಯನ್ನು ಸಲ್ಲಿಸಿ ನನ್ನ ಹೆಸರನ್ನು ತೆರವುಗೊಳಿಸಿದರು.” ಎಂದು ಝುಬೈರ್ ಹೇಳಿದ್ದಾರೆ.

ಪ್ರಕರಣದ ಹಿನ್ನಲೆ

ತಮ್ಮ ಅಪ್ರಾಪ್ತ ಮೊಮ್ಮಗಳೊಂದಿಗೆ ನಿಂತಿದ್ದ ಜಗದೀಶ್ ಸಿಂಗ್ ಎಂಬ ವ್ಯಕ್ತಿಯ ಪ್ರೊಫೈಲ್ ಚಿತ್ರವನ್ನು 2020 ರಲ್ಲಿ ಮೊಹಮ್ಮದ್ ಝುಬೈರ್ ಅವರು ಹಂಚಿಕೊಂಡ ನಂತರ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜಗಧೀಶ್ ಸಿಂಗ್ ಅವರು ಝುಬೈರ್ ಅವರನ್ನು “ಜಿಹಾದಿ” ಎಂದು ಕರೆಯುವುದು ಸೇರಿದಂತೆ ಅವಹೇಳನಕಾರಿ ಭಾಷೆಯನ್ನು ಬಳಸಿದ್ದರು. ಇದನ್ನು ಉದ್ದೇಶಿಸಿ ಜುಬೈರ್ ಅವರು ಮಗುವನ್ನು ಒಳಗೊಂಡ ಪ್ರೊಫೈಲ್ ಚಿತ್ರವನ್ನು ಹಂಚಿ, ಮಕ್ಕಳ ಜೊತೆಗೆ ಇಂತಹ ಚಿತ್ರ ಹಾಕಿರುವ ನೀವು ಇಂತಹ ಭಾಷೆಯನ್ನು ಬಳಸುವುದು ಸರಿಯೆ ಎಂದು ಪ್ರಶ್ನಿಸಿದ್ದರು.

“ನಮಸ್ಕಾರ ಜಗದೀಶ್ ಸಿಂಗ್. ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ನಿಮ್ಮ ಮುದ್ದಾದ ಮೊಮ್ಮಗಳಿಗೆ ತಿಳಿದಿದೆಯೇ? ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ನಾನು ಸೂಚಿಸುತ್ತೇನೆ.” ಎಂದು ಝುಬೈರ್ ಟ್ವೀಟ್ ಮಾಡಿದ್ದು, ಟ್ವೀಟ್ ಪೋಸ್ಟ್ ಮಾಡುವ ಮೊದಲು ಝುಬೈರ್ ಅವರು ಅಪ್ರಾಪ್ತ ಬಾಲಕಿಯ ಮುಖವನ್ನು ಮಸುಕುಗೊಳಿಸಿದ್ದರು.

ಝುಬೈರ್ ಅವರ ಟ್ವೀಟ್‌ನ ನಂತರ, ಜಗದೀಶ್ ಸಿಂಗ್ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (NCPCR) ದೂರು ದಾಖಲಿಸಿದ್ದರು. ಇದರ ನಂತರ NCPCR ದೆಹಲಿ ಪೊಲೀಸರು ಮತ್ತು ರಾಯ್ಪುರ್ ಪೊಲೀಸರಿಗೆ ಪತ್ರ ಬರೆದು, ಈ ಟ್ವೀಟ್ ಅಪ್ರಾಪ್ತ ಬಾಲಕಿಗೆ ನೀಡುತ್ತಿರುವ ಚಿತ್ರಹಿಂಸೆ ಮತ್ತು ಕಿರುಕುಳವಾಗಿದೆ ಎಂದು ಹೇಳಿಕೊಂಡಿತ್ತು. ಇದರ ಆಧಾರದ ರಾಯ್ಪುರ್ ಪೊಲೀಸರು ಹಲವಾರು ಕಾನೂನು ನಿಬಂಧನೆಗಳ ಅಡಿಯಲ್ಲಿ ಝಬೈರ್‌ ವಿರುದ್ಧ FIR ದಾಖಲಿಸಿದ್ದರು.

ಈ ವೇಳೆ ಅವರ ವಿರುದ್ಧ IPC ಯ ಸೆಕ್ಷನ್ 509B (ಎಲೆಕ್ಟ್ರಾನಿಕ್ ವಿಧಾನಗಳಿಂದ ಲೈಂಗಿಕ ಕಿರುಕುಳ), POCSO ಕಾಯ್ದೆಯ ಸೆಕ್ಷನ್ 12 (ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಕ್ಕಾಗಿ ಶಿಕ್ಷೆ), IT ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಅಥವಾ ರವಾನಿಸಿದ್ದಕ್ಕಾಗಿ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

FIR ಅನ್ನು ಪ್ರಶ್ನಿಸಿ, ಮೊಹಮ್ಮದ್ ಝುಬೈರ್ ಅವರು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 482 ರ ಅಡಿಯಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಈ ಎಫ್‌ಐಆರ್ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದ್ದು, ತಾನು ಮಾಡಿರುವ ಟ್ವೀಟ್ ಆಪಾದಿತ ವಿಭಾಗಗಳ ಅಡಿಯಲ್ಲಿ ಯಾವುದೇ ಕ್ರಿಮಿನಲ್ ಅಪರಾಧವಲ್ಲ ಎಂದು ಅವರ ವಕೀಲರು ವಾದಿಸಿದ್ದರು. ಅಕ್ಟೋಬರ್ 2020 ರಲ್ಲಿ, ಝುಬೈರ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಆಗಸ್ಟ್ 2023 ರಲ್ಲಿ, ದೆಹಲಿ ಹೈಕೋರ್ಟ್ ಜಗದೀಶ್ ಸಿಂಗ್ ಅವರು 2020 ರಲ್ಲಿ ಝುಬೈರ್ ಅವರನ್ನು “ಜಿಹಾದಿ” ಎಂದು ಕರೆದಿದ್ದ ಅವರ ಆಕ್ರಮಣಕಾರಿ ಟ್ವೀಟ್‌ಗಾಗಿ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಆದೇಶಿಸಿತ್ತು. ಜುಬೈರ್ ವಿರುದ್ಧದ ಆಕ್ರಮಣಕಾರಿ ಕಾಮೆಂಟ್‌ಗಾಗಿ ಸಿಂಗ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹೇಳುವ ಸ್ಥಿತಿ ವರದಿಯನ್ನು ದೆಹಲಿ ಪೊಲೀಸರು ಸಲ್ಲಿಸಿದ ನಂತರ ಈ ಆದೇಶವನ್ನು ಅಂಗೀಕರಿಸಲಾಯಿತು. ಜೊತೆಗೆ ಅವರ ಅವಹೇಳನಕಾರಿ ಕಾಮೆಂಟ್ ಸಾರ್ವಜನಿಕವಾಗಿ ಲಭ್ಯವಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕಾಗಿ ದೆಹಲಿ ಪೊಲೀಸರನ್ನು ನ್ಯಾಯಾಲಯವು ಈ ಹಿಂದೆ ಟೀಕಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...