Homeಮುಖಪುಟರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ...

ರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಶುಕ್ರವಾರ (ಏ.4) ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂಡಿಯಾ ಟುಡೇ ಚಾನೆಲ್‌ನಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಿಂದ ಶಾಝಿಯಾ ಇಲ್ಮಿ ಹೊರನಡೆದ ನಂತರ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿದ್ದ ವಿಡಿಯೋ ಪೋಸ್ಟ್ ವಿರುದ್ದ ಇಲ್ಮಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇಲ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಭಾಗಶಃ ಮಾನ್ಯ ಮಾಡಿದ್ದಾರೆ. ಆದರೆ, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಕ್ಸ್‌ ಪೋಸ್ಟ್‌ಗಳನ್ನು ಇಲ್ಮಿ ಮುಚ್ಚಿಟ್ಟಿರುವುದು ಕಂಡು ಬಂದಿದೆ ಎಂದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿ ಹೇಳಿದೆ.

ರಾಜ್‌ದೀಪ್ ಸರ್ದೇಸಾಯಿ ಪೋಸ್ಟ್ ಮಾಡಿದ್ದ, ಇಲ್ಮಿ ಮತ್ತು ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ನಡುವಿನ ವಾಗ್ವಾದವನ್ನು ತೋರಿಸುವ 18 ಸೆಕೆಂಡುಗಳ ವಿಡಿಯೋ ತುಣುಕನ್ನು ತೆಗೆದು ಹಾಕುವಂತೆ ನಿರ್ದೇಶಿಸಿದ್ದ ಈ ಹಿಂದಿನ ಮಧ್ಯಂತರ ಆದೇಶವನ್ನು ನ್ಯಾಯಾಲಯ ಸಮರ್ಥಿಸಿಕೊಂಡಿದೆ.

“ಇಲ್ಮಿ ಚರ್ಚಾ ಕಾರ್ಯಕ್ರಮದಿಂದ ಹೊರನಡೆದ ನಂತರವೂ ವಿಡಿಯೋ ರೆಕಾರ್ಡಿಂಗ್ ಮಾಡಿರುವುದು, ಅವರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಿದೆ. ಹಾಗಾಗಿ, ಅದನ್ನು ಆನ್‌ಲೈನ್‌ನಲ್ಲಿ ಉಳಿಸಲು ಸಾಧ್ಯವಿಲ್ಲ” ಎಂದಿದೆ.

ವಿಡಿಯೋ ಪತ್ರಕರ್ತ ತನ್ನ ನಡವಳಿಕೆ ಮೂಲಕ ನನಗೆ  ಕೋಪ ಬರಿಸಿದರು ಎಂಬ ಇಲ್ಮಿ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ಪತ್ರಕರ್ತನನ್ನು ವಿಕೃತ, ಕಾಮುಕ ಎಂದು ಹೇಳುವುದು ಸಮರ್ಥನೀಯವಲ್ಲ ಎಂದಿದೆ. ಸರ್ದೇಸಾಯಿ ಪೋಸ್ಟ್ ಮಾಡಿದ್ದ ವಿಡಿಯೋವನ್ನು ತಿರುಚಲಾಗಿದೆ ಎಂಬ ಇಲ್ಮಿ ಆರೋಪನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.

ತನ್ನ ಮನೆಯಲ್ಲಿದ್ದ ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ಮೇಲೆ ಇಲ್ಮಿ ದೌರ್ಜನ್ಯವೆಸಗಿದ್ದಾರೆ ಎಂದು ರಾಜ್‌ದೀಪ್ ಸರ್ದೇಸಾಯಿ ಎಕ್ಸ್ ಪೋಸ್ಟ್ ಮೂಲಕ ಮಾಡಿದ್ದ ಆರೋಪವನ್ನು ವಜಾಗೊಳಿಸಬೇಕೇ ಎಂದು ನ್ಯಾಯಾಲಯ ಪರಿಶೀಲಿಸಿದೆ.

“ಇಲ್ಮಿ ಮೈಕ್ ಕಿತ್ತು ಹಾಕಿದ್ದಾರೆ, ಪತ್ರಕರ್ತನನ್ನು ಮನೆಯಿಂದ ಹೊರದಬ್ಬಿದ್ದಾರೆ” ಎಂದು ಹೇಳುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದಾಗ್ಯೂ, ರಾಜ್‌ದೀಪ್ ಅವರ ಅದೇ ಪೋಸ್ಟ್‌ನ ಉಳಿದ ಭಾಗಗಳು (ನಮ್ಮ ಪತ್ರಕರ್ತನನ್ನು ನಿಂದಿಸಲಾಗಿದೆ, ಕೆಟ್ಟ ನಡವಳಿಕೆಗೆ ಕ್ಷಮೆಯಿಲ್ಲ) ಪ್ರಾಥಮಿಕವಾಗಿ ರದ್ದುಗೊಳಿಸಬೇಕಿಲ್ಲ ಎಂದ ನ್ಯಾಯಾಲಯ, ಅವುಗಳಿಗೆ ಕೆಲವು ಆಧಾರಗಳಿವೆ ಎಂದು ತೋರುತ್ತದೆ ಎಂದಿದೆ.

ಏನಿದು ಪ್ರಕರಣ?

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಅವರು ಜುಲೈ 26, 2024ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಅದರಂತೆ, ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...