Homeಮುಖಪುಟಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

ಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

- Advertisement -
- Advertisement -

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸದಿರಲು ಕೇಂದ್ರ ಸುನ್ನಿ ವಕ್ಫ್‌ ಬೋರ್ಡ್ ತೀರ್ಮಾನಿಸಿದೆ. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಪರ್ಯಾಯ 5 ಎಕರೆ ಭೂಮಿ ನೀಡುವುದನ್ನು ಒಪ್ಪುವ ಸಂಬಂಧ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡಳಿ ಅಧ್ಯಕ್ಷ ಜುಕಾರ್ ಫಾರೂಕಿ ಹೇಳಿದ್ದಾರೆ.

ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಂಡಿರುವ ವಕ್ಫ್ ಬೋರ್ಡ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವುದನ್ನು ಉಲ್ಲೇಖಿಸಿ ವರದಿ ಮಾಡಿರುವ ದಿ ವೈರ್.ಕಾಮ್ ಲಕ್ನೋದಲ್ಲಿ ನಡೆದ ವಕ್ಫ್‌ ಬೋರ್ಡ್ ಸಭೆಯಲ್ಲಿ ಒಟ್ಟು ಏಳು ಮಂದಿ ಭಾಗವಹಿಸಿದ್ದರು ಎಂದು ಹೇಳಿದೆ.

ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಅಬ್ದುಲ್ ರಜಾಕ್ ಖಾನ್ ಅಧ್ಯಕ್ಷರು ತೆಗೆದುಕೊಂಡಿರುವ ತೀರ್ಮಾನವನ್ನು ವಿರೋಧಿಸಿದ್ದಾರೆ. ಬಾಬ್ರಿ ಮಸೀದಿ ಜಾಗಕ್ಕೆ ಪರ್ಯಾಯವಾಗಿ 5 ಎಕರೆ ನೀಡುವಂತೆ ಆದೇಶಿರುವುದನ್ನು ಒಪ್ಪಿ ಕೊಳ್ಳಬೇಕೇ ಅಥವಾ ಒಪ್ಪಿಕೊಳ್ಳಬಾರದೇ ಎಂಬ ಬಗ್ಗೆ ಯಾವುದೇ ತೀರ್ಮಾವನ್ನು ಪ್ರಕಟಿಸಿಲ್ಲ.

ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸುವಂತೆ ಸಭೆಯಲ್ಲಿ ಕೋರಿದಾಗ ಆರು ಮಂದಿ ಸದಸ್ಯರು ತಮ್ಮ ಅಭಿಪ್ರಾಯ ಹೇಳಲು ಸಮಯವಕಾಶ ಕೊಡಬೇಕು. ಒಂದೊಮ್ಮೆ ನಿರ್ಧಾರ ಕೈಗೊಂಡರೆ ಅದನ್ನು ಪ್ರತ್ಯೇಕವಾಗಿ ತಿಳಿಸುತ್ತೇವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದಿ ವೈರ್ ತಿಳಿಸಿದೆ.

ಇದನ್ನೂ ಓದಿ: ಅಯೋಧ್ಯೆ ಪ್ರಕರಣ:ಸುಪ್ರೀಂ ತೀರ್ಪಿನ ವಿರುದ್ದ ಪುನರ್ ಪರಿಶೀಲನ ಅರ್ಜಿ ಸಲ್ಲಿಸಲು ನಿರ್ಧಾರ

ಆದರೆ ಅಖಿಲ ಭಾರತ ಮುಸ್ಲೀಂ ವೈಯಕ್ತಿಕ ಕಾನೂನು ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾಗಿದೆ. ಬಾಬ್ರಿ ಮಸೀದಿಗೆ ನೀಡಲಾಗುವ ಪರ್ಯಾಯ 5 ಎಕರೆ ಭೂಮಿಯನ್ನು ಒಪ್ಪಿಕೊಳ್ಳದಿರಲು ಅದು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...