Homeಮುಖಪುಟಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

ಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

- Advertisement -
- Advertisement -

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸದಿರಲು ಕೇಂದ್ರ ಸುನ್ನಿ ವಕ್ಫ್‌ ಬೋರ್ಡ್ ತೀರ್ಮಾನಿಸಿದೆ. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಪರ್ಯಾಯ 5 ಎಕರೆ ಭೂಮಿ ನೀಡುವುದನ್ನು ಒಪ್ಪುವ ಸಂಬಂಧ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡಳಿ ಅಧ್ಯಕ್ಷ ಜುಕಾರ್ ಫಾರೂಕಿ ಹೇಳಿದ್ದಾರೆ.

ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಂಡಿರುವ ವಕ್ಫ್ ಬೋರ್ಡ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವುದನ್ನು ಉಲ್ಲೇಖಿಸಿ ವರದಿ ಮಾಡಿರುವ ದಿ ವೈರ್.ಕಾಮ್ ಲಕ್ನೋದಲ್ಲಿ ನಡೆದ ವಕ್ಫ್‌ ಬೋರ್ಡ್ ಸಭೆಯಲ್ಲಿ ಒಟ್ಟು ಏಳು ಮಂದಿ ಭಾಗವಹಿಸಿದ್ದರು ಎಂದು ಹೇಳಿದೆ.

ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಅಬ್ದುಲ್ ರಜಾಕ್ ಖಾನ್ ಅಧ್ಯಕ್ಷರು ತೆಗೆದುಕೊಂಡಿರುವ ತೀರ್ಮಾನವನ್ನು ವಿರೋಧಿಸಿದ್ದಾರೆ. ಬಾಬ್ರಿ ಮಸೀದಿ ಜಾಗಕ್ಕೆ ಪರ್ಯಾಯವಾಗಿ 5 ಎಕರೆ ನೀಡುವಂತೆ ಆದೇಶಿರುವುದನ್ನು ಒಪ್ಪಿ ಕೊಳ್ಳಬೇಕೇ ಅಥವಾ ಒಪ್ಪಿಕೊಳ್ಳಬಾರದೇ ಎಂಬ ಬಗ್ಗೆ ಯಾವುದೇ ತೀರ್ಮಾವನ್ನು ಪ್ರಕಟಿಸಿಲ್ಲ.

ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸುವಂತೆ ಸಭೆಯಲ್ಲಿ ಕೋರಿದಾಗ ಆರು ಮಂದಿ ಸದಸ್ಯರು ತಮ್ಮ ಅಭಿಪ್ರಾಯ ಹೇಳಲು ಸಮಯವಕಾಶ ಕೊಡಬೇಕು. ಒಂದೊಮ್ಮೆ ನಿರ್ಧಾರ ಕೈಗೊಂಡರೆ ಅದನ್ನು ಪ್ರತ್ಯೇಕವಾಗಿ ತಿಳಿಸುತ್ತೇವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದಿ ವೈರ್ ತಿಳಿಸಿದೆ.

ಇದನ್ನೂ ಓದಿ: ಅಯೋಧ್ಯೆ ಪ್ರಕರಣ:ಸುಪ್ರೀಂ ತೀರ್ಪಿನ ವಿರುದ್ದ ಪುನರ್ ಪರಿಶೀಲನ ಅರ್ಜಿ ಸಲ್ಲಿಸಲು ನಿರ್ಧಾರ

ಆದರೆ ಅಖಿಲ ಭಾರತ ಮುಸ್ಲೀಂ ವೈಯಕ್ತಿಕ ಕಾನೂನು ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾಗಿದೆ. ಬಾಬ್ರಿ ಮಸೀದಿಗೆ ನೀಡಲಾಗುವ ಪರ್ಯಾಯ 5 ಎಕರೆ ಭೂಮಿಯನ್ನು ಒಪ್ಪಿಕೊಳ್ಳದಿರಲು ಅದು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...