Homeಮುಖಪುಟಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5...

ಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5 ದಿನವಾದರೂ ಬಂಧನವಿಲ್ಲ

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಇಬ್ಬರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಬಿಜೆಪಿ ಪರ ಸಂಘಟನೆಯಾದ ಬಜರಂಗದಳ ಮತ್ತು ವಿಎಚ್‌ಪಿಯ ದುಷ್ಕರ್ಮಿಗಳು ಸೋಮವಾರ ದಾಳಿ ನಡೆಸಿರುವ ಘಟನೆ ನಡೆದಿದೆ. ಪೊಲೀಸರ ಮುಂದೆಯೆ ಈ ಹಲ್ಲೆ ನಡೆದಿದ್ದರೂ, ಪೊಲೀಸರು ಈ ದುಷ್ಕರ್ಮಿಗಳ ವಿರುದ್ಧ ಮೂರು ದಿನಗಳ ಎಫ್‌ಐಆರ್‌ ದಾಖಲಿಸಿದ್ದಾರೆ. ಅದಾಗ್ಯೂ, ಘಟನೆ ನಡೆದು 5 ದಿನಗಳಾದರೂ ಪ್ರಕರಣದಲ್ಲಿ ಪೊಲೀಸರು ಇಲ್ಲಿವರೆಗೆ ಯಾವುದೆ ದುಷ್ಕರ್ಮಿಗಳ ಬಂಧನ ಮಾಡಿಲ್ಲ ಎಂದು ವರದಿಯಾಗಿದೆ. ಮಧ್ಯಪ್ರದೇಶ

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಿಂದ ಸುಮಾರು 50 ಕ್ರಿಶ್ಚಿಯನ್ ಯಾತ್ರಿಕರು ಸೋಮವಾರ ಒಂದು ದಿನದ ಚರ್ಚ್ ಭೇಟಿಗಾಗಿ ಜಬಲ್ಪುರ ತಲುಪಿದ್ದರು. ಈ ವೇಳೆ ಬಿಜೆಪಿ ಪರ ಸಂಘಟನೆಗಳ ದುಷ್ಕರ್ಮಿಗಳ ಗುಂಪು ಯಾತ್ರಿಕರ ಮೇಲೆ ಧಾರ್ಮಿಕ ಮತಾಂತರದ ಆರೋಪ ಹೊರಿಸಿ ಅವರು ಪ್ರಯಾಣಿಸುತ್ತಿದ್ದ ಬಸ್ ಅನ್ನು ತಡೆದು ಅವರನ್ನು ರಂಜಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮಧ್ಯಪ್ರದೇಶ

ಈ ವೇಳೆ ಅವರನ್ನು ಪೊಲೀಸ್‌ ಠಾಣೆಯಲ್ಲಿ ಆರು ಗಂಟೆಗಳ ಕಾಲ ಬಂಧಿಸಲಾಗಿತ್ತ. ಆದಾಗ್ಯೂ, ಜಬಲ್ಪುರ ಡಯೋಸಿಸ್‌ನ ವಿಕಾರ್ ಜನರಲ್ ಫಾದರ್ ಡೇವಿಸ್ ಜಾರ್ಜ್ ಮತ್ತು ಡಯೋಸಿಸ್‌ನ ಪ್ರೊಕ್ಯುರೇಟರ್ ಫಾದರ್ ಜಾರ್ಜ್ ಥಾಮಸ್ ಅವರು ಯಾತ್ರಿಕರಿಗೆ ಸಹಾಯ ಮಾಡಲು ಪೊಲೀಸ್ ಠಾಣೆಗೆ ತಲುಪಿದಾಗ, ಅವರ ಮೇಲೆ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸುವ ವೇಳೆ ದುಷ್ಕರ್ಮಿಗಳ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಡಾ ಕೂಗಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಬಂಧನಗಳನ್ನು ನಡೆದಿಲ್ಲವಾದರೂ, ಕೇರಳದ ಇಬ್ಬರು ಸಂಸತ್ ಸದಸ್ಯರಾದ ಕೋಡಿಕುನ್ನಿಲ್ ಸುರೇಶ್ ಮತ್ತು ದೀನ್ ಕುರಿಯಾಕೋಸ್ ಅವರು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಪೊಲೀಸರು ಏಪ್ರಿಲ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ಹಲ್ಲೆಯನ್ನು ತಡೆಯಲು, ಎಫ್‌ಐಆರ್ ಅನ್ನು ಬೇಗ ದಾಖಲಿಸಲು ಮತ್ತು ದಾಳಿಕೋರರನ್ನು ಬಂಧಿಸಲು ಏಕೆ ಸಾಧ್ಯವಾಗಲಿಲ್ಲ ಎಂಬ ನ್ಯೂಸ್ ಲಾಂಡ್ರಿ ಜಬಲ್ಪುರ್ ಪ್ರಶ್ನೆಗೆ ಉತ್ತರಿಸಿರುವ ರಂಜಿ ಪ್ರದೇಶದ ನಗರ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಸಾಹು, “ನಾವು ಮಧ್ಯಪ್ರವೇಶಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಶೀಘ್ರದಲ್ಲೇ ನಾವು ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಿದ್ದೇವೆ” ಎಂದು ಹೇಳಿದ್ದಾರೆ.

ಆಪಾದಿತ ದಾಳಿಯ ಸಮಯದಲ್ಲಿ ಪೊಲೀಸರು ಇದ್ದರು ಆದರೆ ಅವರ ಹಸ್ತಕ್ಷೇಪ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿತ್ತು ಎಂದು ತನಗೆ ತಿಳಿದಿಲ್ಲ ಎಂದು ಫಾದರ್ ಜಾರ್ಜ್ ನ್ಯೂಸ್ ಲಾಂಡ್ರಿಗೆ ತಿಳಿಸಿದ್ದಾರೆ. “ಪೊಲೀಸ್ ಹಸ್ತಕ್ಷೇಪ ಹೆಚ್ಚು ಪರಿಣಾಮಕಾರಿಯಾಗಿರಬೇಕಿತ್ತು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಹೇಗೆ ಹಲ್ಲೆ ನಡೆಸಲು ಸಾಧ್ಯ” ಎಂದು ಫಾದರ್ ಜಾರ್ಜ್ ಹೇಳಿದ್ದಾರೆ.

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿಯ ನಾಯಕ ಘಟನೆಯನ್ನು ಸಮರ್ಥಿಸಿಕೊಂಡಿದ್ದು, ಧಾರ್ಮಿಕ ಮತಾಂತರಕ್ಕಾಗಿ ಬುಡಕಟ್ಟು ಜನರನ್ನು ಜಬಲ್ಪುರಕ್ಕೆ ಕರೆತರಲಾಗುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಹೇಳಿದ್ದಾರೆ. “ಬುಡಕಟ್ಟು ಜನರನ್ನು ಬೆದರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವಂತೆ ಪ್ರಚೋದಿಸಲಾಯಿತು. ಇದರ ನಂತರ, ವಿಎಚ್‌ಪಿ ಮತ್ತು ಬಜರಂಗದಳ ಸದಸ್ಯರು ಮಧ್ಯಪ್ರವೇಶಿಸಿ ಯಾತ್ರಿಕರನ್ನು ಪೊಲೀಸ್ ಠಾಣೆಗೆ ಕರೆತಂದರು” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಯಾತ್ರಿಕರು ಈ ಹೇಳಿಕೆಯನ್ನು ನಿರಾಕರಿಸಿದ್ದು, ದುಷ್ಕರ್ಮಿಗಳು ಯಾವುದೇ ಕಾರಣವಿಲ್ಲದೆ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. “ಯಾತ್ರಿಕರ ಭೇಟಿಯ ಸಮಯದಲ್ಲಿ ಯಾವುದೇ ಮತಾಂತರ ನಡೆಯುತ್ತಿರಲಿಲ್ಲ. ನನ್ನ ಪೋಷಕರು ಕ್ರಿಶ್ಚಿಯನ್ನರು, ಮತ್ತು ನಾನು ಹುಟ್ಟಿನಿಂದಲೇ ಕ್ರಿಶ್ಚಿಯನ್ ಆಗಿದ್ದೇನೆ. ಧಾರ್ಮಿಕ ಪ್ರವಾಸದ ಭಾಗವಾಗಿ ನಾವು ಜಬಲ್ಪುರದ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಆದರೆ ಈ ದುಷ್ಕರ್ಮಿಗಳು ಕಥೆಗಳನ್ನು ಹೆಣೆದು, ನಮ್ಮನ್ನು ಮತಾಂತರಕ್ಕಾಗಿ ಇಲ್ಲಿಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ. ಅವರು ಪೊಲೀಸರ ಸಹಾಯದಿಂದ ನಮ್ಮನ್ನು ತಡೆದು ರಂಝಿ ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ನಮ್ಮನ್ನು ಗಂಟೆಗಟ್ಟಲೆ ಬಂಧಿಸಲಾಯಿತು.” ಎಂದು ಯಾತ್ರಿಕರೊಬ್ಬರು ಹೇಳಿದ್ದಾರೆ.

ಮತ್ತೊಬ್ಬ ಯಾತ್ರಿಕರು ಮಾತನಾಡಿ, “ನನ್ನ ಕುಟುಂಬವು ಮೂರು ತಲೆಮಾರುಗಳಿಂದ ಕ್ರಿಶ್ಚಿಯನ್ ಆಗಿದೆ. ನಾನು ಹುಟ್ಟಿನಿಂದ ಕ್ರಿಶ್ಚಿಯನ್. ಪರಿಸ್ಥಿತಿ ಹೀಗಿರುವಾಗ ನನ್ನನ್ನು ಮತ್ತೆ ಹೇಗೆ ಮತಾಂತರಿಸಲು ಸಾಧ್ಯ? ನಮ್ಮಲ್ಲಿ ಸುಮಾರು 50 ಜನರು ಮಾಂಡ್ಲಾದಿಂದ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಪೊಲೀಸರು ನಮ್ಮ ಹೆಸರುಗಳನ್ನು ಬರೆದುಕೊಂಡು ಜಬಲ್‌ಪುರಕ್ಕೆ ಏಕೆ ಬಂದಿದ್ದೇವೆ ಎಂದು ಕೇಳಿದ್ದಾರೆ. ಇದು ಕಿರುಕುಳ ಅಲ್ಲದೆ ಇನ್ನೇನೂ ಅಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...