Homeಮುಖಪುಟಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5...

ಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5 ದಿನವಾದರೂ ಬಂಧನವಿಲ್ಲ

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಇಬ್ಬರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಬಿಜೆಪಿ ಪರ ಸಂಘಟನೆಯಾದ ಬಜರಂಗದಳ ಮತ್ತು ವಿಎಚ್‌ಪಿಯ ದುಷ್ಕರ್ಮಿಗಳು ಸೋಮವಾರ ದಾಳಿ ನಡೆಸಿರುವ ಘಟನೆ ನಡೆದಿದೆ. ಪೊಲೀಸರ ಮುಂದೆಯೆ ಈ ಹಲ್ಲೆ ನಡೆದಿದ್ದರೂ, ಪೊಲೀಸರು ಈ ದುಷ್ಕರ್ಮಿಗಳ ವಿರುದ್ಧ ಮೂರು ದಿನಗಳ ಎಫ್‌ಐಆರ್‌ ದಾಖಲಿಸಿದ್ದಾರೆ. ಅದಾಗ್ಯೂ, ಘಟನೆ ನಡೆದು 5 ದಿನಗಳಾದರೂ ಪ್ರಕರಣದಲ್ಲಿ ಪೊಲೀಸರು ಇಲ್ಲಿವರೆಗೆ ಯಾವುದೆ ದುಷ್ಕರ್ಮಿಗಳ ಬಂಧನ ಮಾಡಿಲ್ಲ ಎಂದು ವರದಿಯಾಗಿದೆ. ಮಧ್ಯಪ್ರದೇಶ

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಿಂದ ಸುಮಾರು 50 ಕ್ರಿಶ್ಚಿಯನ್ ಯಾತ್ರಿಕರು ಸೋಮವಾರ ಒಂದು ದಿನದ ಚರ್ಚ್ ಭೇಟಿಗಾಗಿ ಜಬಲ್ಪುರ ತಲುಪಿದ್ದರು. ಈ ವೇಳೆ ಬಿಜೆಪಿ ಪರ ಸಂಘಟನೆಗಳ ದುಷ್ಕರ್ಮಿಗಳ ಗುಂಪು ಯಾತ್ರಿಕರ ಮೇಲೆ ಧಾರ್ಮಿಕ ಮತಾಂತರದ ಆರೋಪ ಹೊರಿಸಿ ಅವರು ಪ್ರಯಾಣಿಸುತ್ತಿದ್ದ ಬಸ್ ಅನ್ನು ತಡೆದು ಅವರನ್ನು ರಂಜಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮಧ್ಯಪ್ರದೇಶ

ಈ ವೇಳೆ ಅವರನ್ನು ಪೊಲೀಸ್‌ ಠಾಣೆಯಲ್ಲಿ ಆರು ಗಂಟೆಗಳ ಕಾಲ ಬಂಧಿಸಲಾಗಿತ್ತ. ಆದಾಗ್ಯೂ, ಜಬಲ್ಪುರ ಡಯೋಸಿಸ್‌ನ ವಿಕಾರ್ ಜನರಲ್ ಫಾದರ್ ಡೇವಿಸ್ ಜಾರ್ಜ್ ಮತ್ತು ಡಯೋಸಿಸ್‌ನ ಪ್ರೊಕ್ಯುರೇಟರ್ ಫಾದರ್ ಜಾರ್ಜ್ ಥಾಮಸ್ ಅವರು ಯಾತ್ರಿಕರಿಗೆ ಸಹಾಯ ಮಾಡಲು ಪೊಲೀಸ್ ಠಾಣೆಗೆ ತಲುಪಿದಾಗ, ಅವರ ಮೇಲೆ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸುವ ವೇಳೆ ದುಷ್ಕರ್ಮಿಗಳ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಡಾ ಕೂಗಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಬಂಧನಗಳನ್ನು ನಡೆದಿಲ್ಲವಾದರೂ, ಕೇರಳದ ಇಬ್ಬರು ಸಂಸತ್ ಸದಸ್ಯರಾದ ಕೋಡಿಕುನ್ನಿಲ್ ಸುರೇಶ್ ಮತ್ತು ದೀನ್ ಕುರಿಯಾಕೋಸ್ ಅವರು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಪೊಲೀಸರು ಏಪ್ರಿಲ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ಹಲ್ಲೆಯನ್ನು ತಡೆಯಲು, ಎಫ್‌ಐಆರ್ ಅನ್ನು ಬೇಗ ದಾಖಲಿಸಲು ಮತ್ತು ದಾಳಿಕೋರರನ್ನು ಬಂಧಿಸಲು ಏಕೆ ಸಾಧ್ಯವಾಗಲಿಲ್ಲ ಎಂಬ ನ್ಯೂಸ್ ಲಾಂಡ್ರಿ ಜಬಲ್ಪುರ್ ಪ್ರಶ್ನೆಗೆ ಉತ್ತರಿಸಿರುವ ರಂಜಿ ಪ್ರದೇಶದ ನಗರ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಸಾಹು, “ನಾವು ಮಧ್ಯಪ್ರವೇಶಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಶೀಘ್ರದಲ್ಲೇ ನಾವು ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಿದ್ದೇವೆ” ಎಂದು ಹೇಳಿದ್ದಾರೆ.

ಆಪಾದಿತ ದಾಳಿಯ ಸಮಯದಲ್ಲಿ ಪೊಲೀಸರು ಇದ್ದರು ಆದರೆ ಅವರ ಹಸ್ತಕ್ಷೇಪ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿತ್ತು ಎಂದು ತನಗೆ ತಿಳಿದಿಲ್ಲ ಎಂದು ಫಾದರ್ ಜಾರ್ಜ್ ನ್ಯೂಸ್ ಲಾಂಡ್ರಿಗೆ ತಿಳಿಸಿದ್ದಾರೆ. “ಪೊಲೀಸ್ ಹಸ್ತಕ್ಷೇಪ ಹೆಚ್ಚು ಪರಿಣಾಮಕಾರಿಯಾಗಿರಬೇಕಿತ್ತು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಹೇಗೆ ಹಲ್ಲೆ ನಡೆಸಲು ಸಾಧ್ಯ” ಎಂದು ಫಾದರ್ ಜಾರ್ಜ್ ಹೇಳಿದ್ದಾರೆ.

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿಯ ನಾಯಕ ಘಟನೆಯನ್ನು ಸಮರ್ಥಿಸಿಕೊಂಡಿದ್ದು, ಧಾರ್ಮಿಕ ಮತಾಂತರಕ್ಕಾಗಿ ಬುಡಕಟ್ಟು ಜನರನ್ನು ಜಬಲ್ಪುರಕ್ಕೆ ಕರೆತರಲಾಗುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಹೇಳಿದ್ದಾರೆ. “ಬುಡಕಟ್ಟು ಜನರನ್ನು ಬೆದರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವಂತೆ ಪ್ರಚೋದಿಸಲಾಯಿತು. ಇದರ ನಂತರ, ವಿಎಚ್‌ಪಿ ಮತ್ತು ಬಜರಂಗದಳ ಸದಸ್ಯರು ಮಧ್ಯಪ್ರವೇಶಿಸಿ ಯಾತ್ರಿಕರನ್ನು ಪೊಲೀಸ್ ಠಾಣೆಗೆ ಕರೆತಂದರು” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಯಾತ್ರಿಕರು ಈ ಹೇಳಿಕೆಯನ್ನು ನಿರಾಕರಿಸಿದ್ದು, ದುಷ್ಕರ್ಮಿಗಳು ಯಾವುದೇ ಕಾರಣವಿಲ್ಲದೆ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. “ಯಾತ್ರಿಕರ ಭೇಟಿಯ ಸಮಯದಲ್ಲಿ ಯಾವುದೇ ಮತಾಂತರ ನಡೆಯುತ್ತಿರಲಿಲ್ಲ. ನನ್ನ ಪೋಷಕರು ಕ್ರಿಶ್ಚಿಯನ್ನರು, ಮತ್ತು ನಾನು ಹುಟ್ಟಿನಿಂದಲೇ ಕ್ರಿಶ್ಚಿಯನ್ ಆಗಿದ್ದೇನೆ. ಧಾರ್ಮಿಕ ಪ್ರವಾಸದ ಭಾಗವಾಗಿ ನಾವು ಜಬಲ್ಪುರದ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಆದರೆ ಈ ದುಷ್ಕರ್ಮಿಗಳು ಕಥೆಗಳನ್ನು ಹೆಣೆದು, ನಮ್ಮನ್ನು ಮತಾಂತರಕ್ಕಾಗಿ ಇಲ್ಲಿಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ. ಅವರು ಪೊಲೀಸರ ಸಹಾಯದಿಂದ ನಮ್ಮನ್ನು ತಡೆದು ರಂಝಿ ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ನಮ್ಮನ್ನು ಗಂಟೆಗಟ್ಟಲೆ ಬಂಧಿಸಲಾಯಿತು.” ಎಂದು ಯಾತ್ರಿಕರೊಬ್ಬರು ಹೇಳಿದ್ದಾರೆ.

ಮತ್ತೊಬ್ಬ ಯಾತ್ರಿಕರು ಮಾತನಾಡಿ, “ನನ್ನ ಕುಟುಂಬವು ಮೂರು ತಲೆಮಾರುಗಳಿಂದ ಕ್ರಿಶ್ಚಿಯನ್ ಆಗಿದೆ. ನಾನು ಹುಟ್ಟಿನಿಂದ ಕ್ರಿಶ್ಚಿಯನ್. ಪರಿಸ್ಥಿತಿ ಹೀಗಿರುವಾಗ ನನ್ನನ್ನು ಮತ್ತೆ ಹೇಗೆ ಮತಾಂತರಿಸಲು ಸಾಧ್ಯ? ನಮ್ಮಲ್ಲಿ ಸುಮಾರು 50 ಜನರು ಮಾಂಡ್ಲಾದಿಂದ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಪೊಲೀಸರು ನಮ್ಮ ಹೆಸರುಗಳನ್ನು ಬರೆದುಕೊಂಡು ಜಬಲ್‌ಪುರಕ್ಕೆ ಏಕೆ ಬಂದಿದ್ದೇವೆ ಎಂದು ಕೇಳಿದ್ದಾರೆ. ಇದು ಕಿರುಕುಳ ಅಲ್ಲದೆ ಇನ್ನೇನೂ ಅಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...