Homeಮುಖಪುಟವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

- Advertisement -
- Advertisement -

ನಿರೀಕ್ಷೆಯಂತೆ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆ ವಿಚಾರ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೆದ್ ಬೆನ್ನಲ್ಲೇ, ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಕೂಡ ಮಸೂದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

“ಮಸೂದೆಯು ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಿದೆ. ಧಾರ್ಮಿಕ ಆಚರಣೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶ ನೀಡಲಿದೆ” ಎಂದು ಇಬ್ಬರೂ ನಾಯಕರು ಆರೋಪಿಸಿದ್ದಾರೆ.

ಇಬ್ಬರೂ ನಾಯಕರೂ ವಕೀಲ ಅನಸ್ ತನ್ವೀರ್ ಮೂಲಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ವಿವಾದಿತ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅಂಗೀಕಾರಗೊಂಡಿದೆ. ರಾಷ್ಟ್ರಪತಿ ಅಂಕಿತ ಬೀಳಲು ಬಾಕಿಯಿದೆ.

ಮಸೂದೆಯನ್ನು ಪರಿಶೀಲಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸದಸ್ಯ ಜಾವೆದ್, “ಮಸೂದೆಯ ತಿದ್ದುಪಡಿಗಳು ಸಂವಿಧಾನದ 14, 25, 26, 29 ಮತ್ತು 300ಎ ವಿಧಿಗಳನ್ನು ಉಲ್ಲಂಘಿಸುತ್ತವೆ. ಈ ವಿಧಿಗಳು ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಆಸ್ತಿಗೆ ಸಂಬಂಧಿಸಿವೆ. ಮಸೂದೆಯು ಧಾರ್ಮಿಕ ಆಚರಣೆಯ ಅವಧಿಯನ್ನು ಆಧರಿಸಿದ ಅನಿಯಂತ್ರಿತ ನಿರ್ಬಂಧಗಳನ್ನು ಹೇರುತ್ತದೆ. ಇದು ಇತ್ತೀಚೆಗೆ ಮತಾಂತರಗೊಂಡವರು ವಕ್ಫ್ ಅಡಿಯಲ್ಲಿ ಆಸ್ತಿ ಅರ್ಪಿಸುವುದನ್ನು ತಡೆಯುತ್ತದೆ. ಈ ನೀತಿಯು ಇಸ್ಲಾಮಿಕ್ ಕಾನೂನಿಗೆ ವಿರುದ್ದವಾಗಿದೆ” ಎಂದು ವಾದಿಸಿದ್ದಾರೆ.

“ತಿದ್ದುಪಡಿ ಮಸೂದೆಯು ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸಲು ಅವಕಾಶ ನೀಡುತ್ತದೆ. ಇದು ಸಮರ್ಥನೀಯವಲ್ಲ. ಹಿಂದೂ, ಸಿಖ್ ಸೇರಿದಂತೆ ಇತರ ಯಾವುದೇ ಧರ್ಮಗಳ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಇಂತಹ ನಿಯಮಗಳಿಲ್ಲ” ಎಂದು ಜಾವೆದ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜಾವೆದ್, “ಇನ್ನೂ ಹಲವು ಮಂದಿ ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ದ ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಹಲವು ಪಕ್ಷಗಳು ಅರ್ಜಿ ಸಲ್ಲಿಸಲಿವೆ. ಸಂಸತ್ತಿನಲ್ಲಿ, ವಿರೋಧ ಪಕ್ಷದ ಪ್ರತಿಯೊಬ್ಬರೂ ಇದು ಸಂವಿಧಾನಬಾಹಿರ ಎಂದು ಹೇಳಿದ್ದಾರೆ. ನೀವು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಹೇಗೆ ಸಾಧ್ಯ? ನಿಮಗೆ ಬಹುಮತ ಇದ್ದ ಮಾತ್ರಕ್ಕೆ ನೀವು ಬಯಸಿದ್ದನ್ನು ಅಂಗೀಕರಿಸಬಹುದು ಎಂದಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡ ಈ ಮಸೂದೆಯನ್ನು ಮುಸ್ಲಿಂ ಸಮುದಾಯದ ಹಕ್ಕುಗಳ ‘ಲಜ್ಜೆಗೆಟ್ಟ ಉಲ್ಲಂಘನೆ’ ಎಂದು ಕರೆದಿದ್ದಾರೆ.

ಸಂಸತ್ತಿನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ, ಅವರು ಮಸೂದೆಯ ಪ್ರತಿಯನ್ನು ಹರಿದು, ತಮ್ಮ ಕೃತ್ಯವನ್ನು ದಕ್ಷಿಣ ಆಫ್ರಿಕಾದ ಮಹಾತ್ಮ ಗಾಂಧಿಯವರ ನಾಗರಿಕ ಅಸಹಕಾರಕ್ಕೆ ಹೋಲಿಸಿದ್ದಾರೆ. “ಗಾಂಧಿಯಂತೆ, ನಾನು ಕೂಡ ಈ ಕಾನೂನನ್ನು ಹರಿದು ಹಾಕುತ್ತಿದ್ದೇನೆ. ಇದು ಸಂವಿಧಾನಬಾಹಿರ. ಬಿಜೆಪಿ ದೇವಾಲಯಗಳು ಮತ್ತು ಮಸೀದಿಗಳ ಹೆಸರಿನಲ್ಲಿ ಈ ದೇಶದಲ್ಲಿ ವಿಭಜನೆಯನ್ನು ಸೃಷ್ಟಿಸಲು ಬಯಸುತ್ತಿದೆ” ಎಂದು ಹೇಳಿದ್ದಾರೆ.

ಚರ್ಚೆಯ ಸಮಯದಲ್ಲಿ, ತಾನು ಪ್ರಸ್ತಾಪಿಸಿದ 10 ತಿದ್ದುಪಡಿಗಳನ್ನು ಪರಿಗಣಿಸುವಂತೆ ಓವೈಸಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮಸೂದೆಯು ಮುಸ್ಲಿಂ ಹಕ್ಕುಗಳನ್ನು ಮೊಟಕುಗೊಳಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಚ್-ರಾಜ್‌ಬೋಂಗ್ಶಿ ಸಮುದಾಯದ 28 ಸಾವಿರ ಪ್ರಕರಣ ವಾಪಾಸ್: ಅಸ್ಸಾಂ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...