Homeಮುಖಪುಟವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರಿಂಕೋರ್ಟ್‌ ಮೆಟ್ಟಿಲೇರಿದ ಎಎಪಿ ಸಂಸದ ಅಮಾನತುಲ್ಲಾ ಖಾನ್

ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರಿಂಕೋರ್ಟ್‌ ಮೆಟ್ಟಿಲೇರಿದ ಎಎಪಿ ಸಂಸದ ಅಮಾನತುಲ್ಲಾ ಖಾನ್

- Advertisement -
- Advertisement -

ಕೇಂದ್ರ ಸರ್ಕಾರ ಉಭಯ ಸದನದಲ್ಲಿ ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಅರ್ಜಿಯಲ್ಲಿ ಅವರು ವಕ್ಫ್ (ತಿದ್ದುಪಡಿ) ಮಸೂದೆಯನ್ನು “ಅಸಂವಿಧಾನಿಕ ಮತ್ತು ಸಂವಿಧಾನದ 14, 15, 21, 25, 26, 29, 30 ಮತ್ತು 300-A ವಿಧಿಗಳ ಉಲ್ಲಂಘನೆಯಾಗಿದೆ” ಎಂದು ಘೋಷಿಸಬೇಕೆಂದು ಕೋರಿದ್ದು, ಜೊತೆಗೆ ಅದನ್ನು ರದ್ದುಗೊಳಿಸಲು ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.  

“ಮಸೂದೆಯು ಸಂವಿಧಾನದ 14, 15, 21, 25, 26, 29, 30 ಮತ್ತು 300-A ವಿಧಿಗಳ ಅಡಿಯಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಇದು ಮುಸ್ಲಿಮರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ. ಅನಿಯಂತ್ರಿತ ಕಾರ್ಯಾಂಗ ಹಸ್ತಕ್ಷೇಪವನ್ನು ಸಕ್ರಿಯಗೊಳಿಸುತ್ತದೆ ಮತ್ತು ಅವರ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳನ್ನು ನಿರ್ವಹಿಸಲು ಅಲ್ಪಸಂಖ್ಯಾತರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ” ಎಂದು ಅಮಾನತುಲ್ಲಾ ಖಾನ್ ಅವರ ಅರ್ಜಿಯಲ್ಲಿ ತಿಳಿಸಲಾಗಿದೆ.

ಶುಕ್ರವಾರದಂದು ವಕ್ಫ್ (ತಿದ್ದುಪಡಿ) ಮಸೂದೆ, 2025 ರ ಸಿಂಧುತ್ವವನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಮಸೂದೆಯು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ಮಸೂದೆಯು ವಕ್ಫ್ ಆಸ್ತಿಗಳು ಮತ್ತು ಅವುಗಳ ನಿರ್ವಹಣೆಯ ಮೇಲೆ “ಅನಿಯಂತ್ರಿತ ನಿರ್ಬಂಧಗಳನ್ನು” ವಿಧಿಸಿದೆ. ಜೊತೆಗೆ ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ಜಾವೇದ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದಾರೆ. ವಕೀಲ ಅನಸ್ ತನ್ವೀರ್ ಅವರ ಮೂಲಕ ಸಲ್ಲಿಸಲಾದ ಅವರ ಅರ್ಜಿಯಲ್ಲಿ, ಪ್ರಸ್ತಾವಿತ ಕಾನೂನು “ಇತರ ಧಾರ್ಮಿಕ ದತ್ತಿಗಳ ಆಡಳಿತದಲ್ಲಿ ಇಲ್ಲದ ನಿರ್ಬಂಧಗಳನ್ನು ವಿಧಿಸುವ” ಮೂಲಕ ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯ ಮಾಡಿದೆ ಎಂದು ಹೇಳಲಾಗಿದೆ.

ಮಸೂದೆಯನ್ನು ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಅಂಗೀಕರಿಸಲಾಯಿತು. ಏಪ್ರಿಲ್ 3 ರ ಆರಂಭದಲ್ಲಿ ಲೋಕಸಭೆಯಲ್ಲಿ 288 ಸದಸ್ಯರು ಇದನ್ನು ಬೆಂಬಲಿಸಿದರು ಮತ್ತು 232 ಸದಸ್ಯರು ಅದರ ವಿರುದ್ಧವಾಗಿ ಮತಚಲಾಯಿಸಿದರು.

ಬಿಹಾರದ ಕಿಶನ್‌ಗಂಜ್‌ನ ಲೋಕಸಭಾ ಸಂಸದರಾಗಿರುವ ಜಾವೇದ್ ಅವರು, ಮಸೂದೆಯ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಸದಸ್ಯರಾಗಿದ್ದರು. ಅವರು ತಮ್ಮ ಅರ್ಜಿಯಲ್ಲಿ, ಮಸೂದೆಯು ವ್ಯಕ್ತಿಯೊಬ್ಬರ ಧಾರ್ಮಿಕ ಆಚರಣೆಯ ಅವಧಿಯನ್ನು ಆಧರಿಸಿ ವಕ್ಫ್‌ಗಳ ರಚನೆಯ ಮೇಲೆ ನಿರ್ಬಂಧಗಳನ್ನು ಹೇರುತ್ತದೆ ಎಂದು ಹೇಳಿದ್ದಾರೆ. “ಇಸ್ಲಾಮಿಕ್ ಕಾನೂನು, ಪದ್ಧತಿ ಅಥವಾ ಪೂರ್ವನಿದರ್ಶನದಲ್ಲಿ ಅಂತಹ ಮಿತಿ ಆಧಾರರಹಿತವಾಗಿದೆ ಮತ್ತು ಆರ್ಟಿಕಲ್ 25 ರ ಅಡಿಯಲ್ಲಿ ಧರ್ಮವನ್ನು ಪ್ರತಿಪಾದಿಸುವ ಮತ್ತು ಆಚರಿಸುವ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ಅದು ಹೇಳಿದೆ.

ತಮ್ಮ ಪ್ರತ್ಯೇಕ ಅರ್ಜಿಯಲ್ಲಿ ಓವೈಸಿ  ಅವರು, ಮಸೂದೆಯು ವಕ್ಫ್‌ಗಳಿಂದ ವಕ್ಫ್‌ಗಳಿಗೆ ಮತ್ತು ಹಿಂದೂ, ಜೈನ ಮತ್ತು ಸಿಖ್ ಧಾರ್ಮಿಕ ಮತ್ತು ದತ್ತಿ ದತ್ತಿಗಳಿಗೆ ನೀಡಲಾದ ವಿವಿಧ ರಕ್ಷಣೆಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ವಕೀಲ ಲಜಫೀರ್ ಅಹ್ಮದ್ ಅವರ ಮೂಲಕ ಅವರು ತಮ್ಮ ಅರ್ಜಿ ಸಲ್ಲಿಸಿದ್ದಾರೆ. “ಇದು ಮುಸ್ಲಿಮರ ವಿರುದ್ಧ ಪ್ರತಿಕೂಲ ತಾರತಮ್ಯವಾಗಿದ್ದು, ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುವ ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರಿಂಕೋರ್ಟ್‌ ಮೆಟ್ಟಿಲೇರಿದ ಎಎಪಿ ಸಂಸದ ಅಮಾನತುಲ್ಲಾ ಖಾನ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...