Homeಮುಖಪುಟತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

- Advertisement -
- Advertisement -

ಬುಕ್‌ಮೈಶೊ (BookMyShow) ತನ್ನ ವೇದಿಕೆಗಳಿಂದ ಸ್ಟ್ಯಾಂಡ್‌ ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರನ್ನು ಕಲಾವಿದರ ಪಟ್ಟಿಯಿಂದ ಹೊರಗಿಟ್ಟಿದೆ ಎಂದು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಶನಿವಾರ ಹೇಳಿದ್ದಾರೆ. ಕುನಾಲ್ ಅವರ ಹೆಸರು ಈಗಾಗಲೆ ಬುಕ್‌ಮೈಶೊನಿಂದ ಕಾಣೆಯಾಗಿದೆ. ಅದಾಗ್ಯೂ, ಈ ಬಗ್ಗೆ ಬುಕ್‌ ಮೈ ಶೊ ತಂಡವು ಯಾವುದೇ ಹೇಳಿಕೆಗಳನ್ನು ನೀಡಲು ಮುಂದಾಗಿಲ್ಲ ಎಂದು ವರದಿಯಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ತನ್ನ ಪೋರ್ಟಲ್ ಅನ್ನು ಸ್ವಚ್ಛವಾಗಿಟ್ಟು ಅಂತಹ ಕಲಾವಿದರನ್ನು ಶುದ್ಧ ಮನರಂಜನೆಯ ಪಟ್ಟಿಯಿಂದ ಹೊರಗಿಟ್ಟಿದ್ದಕ್ಕಾಗಿ ಬುಕ್‌ಮೈಶೊ ಸಿಇಒ ಆಶಿಶ್ ಹೇಮರಾಜ ಅವರಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಾಮಾಜಿಕ ಮಾಧ್ಯಮ ಉಸ್ತುವಾರಿ ಹೊಂದಿರುವ ರಾಹುಲ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“ಈ ಕಲಾವಿದನನ್ನು ನಿಮ್ಮ ಮಾರಾಟ ಮತ್ತು ಪ್ರಚಾರ ಪಟ್ಟಿಯಿಂದ ತೆಗೆದುಹಾಕಲು ನಿಮ್ಮ ತಂಡಕ್ಕೆ ನೀವು ನಿರಂತರವಾಗಿ ಬೆಂಬಲ ನೀಡಿದ್ದಕ್ಕಾಗಿ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಪ್ರದರ್ಶನದ ಹುಡುಕಾಟದಿಂದ ಅವರನ್ನು ಹೊರತೆಗೆದಿದ್ದಕ್ಕಾಗಿ ಧನ್ಯವಾದಗಳು. ಶಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಅದೇ ಸಮಯದಲ್ಲಿ ನಮ್ಮ ಭಾವನೆಗಳನ್ನು ಗೌರವಿಸುವಲ್ಲಿ ನಿಮ್ಮ ನಂಬಿಕೆ ಬಹಳ ಮುಖ್ಯವಾಗಿದೆ” ಎಂದು ರಾಹುಲ್ ಅವರು ಹೇಮರಾನ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುಂಬೈ ನಿವಾಸಿಗಳು ಪ್ರತಿಯೊಂದು ರೀತಿಯ ಕಲೆಯನ್ನು ಪ್ರೀತಿಸುತ್ತಾರೆ ಮತ್ತು ನಂಬುತ್ತಾರೆ. ಆದರೆ ವೈಯಕ್ತಿಕ ಕಾರ್ಯಸೂಚಿಗಳನ್ನಲ್ಲ ಎಂದು ಅವರು ಹೇಳಿದ್ದಾರೆ. “ನಾವು ಬುಕ್‌ಮೈಶೋನ ಮೌಲ್ಯಗಳ ಬಗ್ಗೆ ನಿಮ್ಮ ಬದ್ಧತೆಯನ್ನು ಗಾಢವಾಗಿ ಗೌರವಿಸುತ್ತೇವೆ. ಇದು ಬೆಂಬಲ ಮತ್ತು ಗ್ರಾಹಕ ಅನುಭವಕ್ಕೆ ಸಂಬಂಧಿಸಿದೆ. ನಿಮ್ಮ ದೃಷ್ಟಿಕೋನ ಮತ್ತು ನಾಯಕತ್ವ ನಿಜವಾಗಿಯೂ ಪ್ರೇರಕವಾಗಿದೆ. ನಿಮ್ಮ ತಂಡವನ್ನು ನಮಗೆ ನೀಡಿ ಇದನ್ನು ಆದಷ್ಟು ಬೇಗ ತೀರ್ಮಾನಿಸಿದ್ದಕ್ಕಾಗಿ ಧನ್ಯವಾದಗಳು.” ಎಂದು ರಾಹುಲ್ ಹೇಳಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರನ್ನು ದೇಶದ್ರೋಹಿ ಎಂದು ಉಲ್ಲೇಖಿಸಿದ್ದನ್ನು ವಿರೋಧಿಸಿ ಕುನಾಲ್ ಪ್ರದರ್ಶನ ನೀಡಿದ್ದ ಸ್ಟುಡಿಯೋವನ್ನು ರಾಹುಲ್ ಧ್ವಂಸಗೊಳಿಸಿದ್ದರು. ಹಾಗಾಗಿ ಅವರ ಇರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮಧ್ಯೆ, ಕುನಾಲ್ ಅವರು ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ. ಇದು ಅವರ ಮೂರನೇ ಗೈರಾಗಿದ್ದು, ಇದಕ್ಕೂ ಮುಂಚೆ ಅವರು ಪೊಲೀಸರು ನೀಡಿದ್ದ ಎರಡು ಸಮನ್ಸ್‌ ಅನ್ನು ತಪ್ಪಿಸಿಕೊಂಡಿದ್ದರು.

ಈ ನಡುವೆ ಮದ್ರಾಸ್ ಹೈಕೋರ್ಟ್ ಏಪ್ರಿಲ್ 7 ರವರೆಗೆ ಕುನಾಲ್‌ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ತಾನು ತಮಿಳುನಾಡಿನ ಖಾಯಂ ನಿವಾಸಿ ಆಗಿರುವುದರಿಂದ ತನ್ನ ಅರ್ಜಿ ಆಲಿಸುವ ಹಕ್ಕು ಮದ್ರಾಸ್  ಹೈಕೋರ್ಟ್‌ಗೆ ಇದೆ ಎಂದು ಅವರು ಪ್ರತಿಪಾದಿಸಿದ್ದರು. ಅವರ ವಿರುದ್ಧ ನಾಸಿಕ್ ಗ್ರಾಮೀಣ, ಜಲಗಾಂವ್ ಮತ್ತು ನಾಸಿಕ್ (ನಂದಗಾಂವ್) ನಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳನ್ನು ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...