Homeಕರ್ನಾಟಕ'ರೋಹಿತ್ ಕಾಯ್ದೆ'ಗಾಗಿ ಜನಾಂದೋಲನವಾಗಬೇಕು: ದಸಂಸ ಮುಖಂಡ ಮಾವಳ್ಳಿ ಶಂಕರ್

‘ರೋಹಿತ್ ಕಾಯ್ದೆ’ಗಾಗಿ ಜನಾಂದೋಲನವಾಗಬೇಕು: ದಸಂಸ ಮುಖಂಡ ಮಾವಳ್ಳಿ ಶಂಕರ್

- Advertisement -
- Advertisement -

ಏಪ್ರಿಲ್ 14 ರಂದು ಅಥವಾ ಅದಕ್ಕೂ ಮೊದಲು ಕರ್ನಾಟಕದಲ್ಲಿ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಬೇಕೆಂದು ಒತ್ತಾಯಿಸಿ, ರಾಜ್ಯದ ಹಲವು ವಿವಿಗಳ ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, “ರೋಹಿತ್ ಕಾಯ್ದೆಗಾಗಿ ಈ ಆಂದೋಲನ ಒಂದು ಜನಾಂದೋಲನವಾಗಬೇಕು. ದೇಶದ ವಿಶ್ವವಿದ್ಯಾನಿಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಅವರ ಜೀವ ಕಳೆದಕೊಳ್ಳುತ್ತಲೇ ಇದ್ದಾರೆ. ಸಮಾನತೆ ಬಗ್ಗೆ ಮಾತನಾಡುವ ನಮ್ಮ ಪ್ರಧಾನಮಂತ್ರಿಗಳು ಈ ಬಗ್ಗೆ ಮಾತನಾಡುವುದಿಲ್ಲ. ಅವರ ಸಂಘಟನೆಯವರು (ಆರ್‌ಎಸ್‌ಎಸ್‌) ದಲಿತ ವಿದ್ಯಾರ್ಥಿಗಳ ಸಾವಿಗೆ ಕಾರಣವಾದಾಗ ಅವರು ಖಂಡಿಸುವುದೇ ಇಲ್ಲ. ಕರ್ನಾಟಕದಾದ್ಯಂತ ವಿಶ್ವವಿದ್ಯಾನಿಲಯಗಳನ್ನು ಈಗ ವ್ಯವಸ್ಥಿತವಾಗಿ ಕೇಸರಿಕರಣ ಮಾಡಲಾಗುತ್ತಿದೆ; ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆಸಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

ದಲಿತ ಹೋರಾಟಗಾರರರಾದ ಬಸವರಾಜ್ ಕೌತಾಳ್ ಮಾತನಾಡಿ, ಈ ಆಂದೋಲನದಲ್ಲಿ ಎಲ್ಲ ದಲಿತ ಸಂಘಟನೆಗಳು ಕೈಜೋಡಿಸಬೇಕು ಎಂದು ಕರೆ ಕೊಟ್ಟರು. “2014 ರಿಂದ 2024 ರವರೆಗೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಕ್ರೌರ್ಯ ಮತ್ತು ದಬ್ಬಾಳಿಕೆಯಿಂದಾಗಿ ಸುಮಾರು 122 ದಲಿತ, ಆದಿವಾಸಿ ಒಬಿಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸಾವುಗಳನ್ನು ತಡೆಯಲು ರಾಜ್ಯದಲ್ಲಿ ರೋಹಿತ್ ಕಾಯ್ದೆ ಜಾರಿಯಾಗಲೇಬೇಕು” ಎಂದರು.

ಕೆ.ಪಿ. ಅಶ್ವಿನಿ ಮಾತನಾಡಿ “ರೋಹಿತ್ ವೇಮುಲಾ ಅವರ ಸಾಂಸ್ಥಿಕ ಹತ್ಯೆಯನ್ನು ಸಾಧ್ಯವಾದಷ್ಟು ಕಠಿಣವಾಗಿ ಖಂಡಿಸಬೇಕು. ರಾಜ್ಯ ಮತ್ತು ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ, ವಿದ್ಯಾರ್ಥಿಗಳು ಹೇಳಲಾಗದ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳಲ್ಲಿರಲಿ, ಜಾತಿ ತಾರತಮ್ಯದ ಬಗ್ಗೆ ಮಾತನಾಡಲು ಅವಕಾಶವೇ ಇಲ್ಲ . ಜಾತಿ ತಾರತಮ್ಯವು ಹಿಂದಿನಕಾಲದ ಸಮಸ್ಯೆ ಎಂಬ ಅಭಿಪ್ರಾಯದಲ್ಲಿ ಜನರು ಬದುಕುತ್ತಿದ್ದಾರೆ. ಆದರೆ, ಅದು ನಿಜವಲ್ಲ. ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ, ಸಾಮಾಜಿಕ ಮತ್ತು ಆರ್ಥಿಕ ಚಲನಶೀಲತೆಯನ್ನು ಪಡೆಯಲು ಶಿಕ್ಷಣವು ಏಕೈಕ ಮಾರ್ಗವಾಗಿದೆ. ಅದನ್ನು ಸಹ ನಮ್ಮಿಂದ ಕಸಿದುಕೊಳ್ಳಲಾಗುತ್ತಿದೆ. ದೌರ್ಜನ್ಯ ತಡೆ ಕಾಯ್ದೆಯು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ಪರಿಹರಿಸಲು ಯಾವುದೇ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊಂದಿಲ್ಲದ ಕಾರಣ ನಾವು ಪ್ರತ್ಯೇಕ ಕಾನೂನಿಗೆ ಒತ್ತಾಯಿಸುತ್ತಿದ್ದೇವೆ. ಶಿಕ್ಷಣವು ಪ್ರಗತಿಪರ ಸ್ಥಳವಾಗಿರಬೇಕು. ಏಪ್ರಿಲ್ 14 ರ ಮೊದಲು, ರಾಜ್ಯ ಸರ್ಕಾರವು ರೋಹಿತ್ ಕಾಯ್ದೆಯ ಬಗ್ಗೆ ಚರ್ಚಿಸಲು ಕನಿಷ್ಠ ಒಂದು ಸಮಿತಿಯನ್ನು ರಚಿಸಬೇಕು” ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ಶ್ರೀಪಾದ್ ಭಟ್ ಮಾತನಾಡಿ, “ರಾಜ್ಯ ಸರ್ಕಾರವು ಎಸ್‌ಸಿ/ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವ ಮೂಲಕ ಅಂಚಿನಲ್ಲಿರುವ ವರ್ಗಗಳಿಗೆ ತನ್ನ ಬದ್ಧತೆಯನ್ನು ತೋರಿಸಬೇಕು. ಇತ್ತೀಚೆಗೆ, ಯುಜಿಸಿ ಕರಡು ತಾರತಮ್ಯ ವಿರೋಧಿ ನಿಯಂತ್ರಣವನ್ನು ಮಂಡಿಸಿತು. ಆದರೆ, ಈ ಕರಡು ಜಾತಿ, ಲಿಂಗ, ಧರ್ಮದ ತಾರತಮ್ಯವನ್ನು ಒಟ್ಟಿಗೆ ನೋಡುತ್ತದೆ. ಈ ಎಲ್ಲ ತಾರತಮ್ಯಗಳನ್ನು ನಿಯಂತ್ರಿಸಬೇಕು. ಆದರೆ, ಜಾತಿ ತಾರತಮ್ಯವನ್ನು ನಿರ್ದಿಷ್ಟ ಗಮನದಿಂದ ನೋಡಬೇಕು ಮತ್ತು ನಿರ್ದಿಷ್ಟವಾಗಿ ಪರಿಹರಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಯುಜಿಸಿ ಕರಡು ಈ ದೃಷ್ಟಿಕೋನವನ್ನು ದುರ್ಬಲಗೊಳಿಸುತ್ತದೆ. ಈ ಕಾಯ್ದೆಯ ಜೊತೆಗೆ, ನಾವು ವಿಶ್ವವಿದ್ಯಾಲಯಗಳಲ್ಲಿನ ರೋಸ್ಟರ್ ಪಾಯಿಂಟ್ ವ್ಯವಸ್ಥೆಯನ್ನು ಗಂಭೀರವಾಗಿ ಮರುಪರಿಶೀಲಿಸಬೇಕು. ನಾವು ಕಾಯ್ದೆಯ ಮೇಲೆ ಮಾತ್ರ ಗಮನಹರಿಸಲು ಸಾಧ್ಯವಿಲ್ಲ. ಆದರೆ, ಯುಜಿಸಿ ಏನು ಮಾಡುತ್ತಿದೆ ಎಂಬುದನ್ನು ನೋಡಲು ಮತ್ತು ಅದಕ್ಕೆ ಪ್ರತಿಕ್ರಿಯಿಸುತ್ತಲೇ ಇರಲು ಸಾಧ್ಯವಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...