Homeಕರ್ನಾಟಕ'ರೋಹಿತ್ ಕಾಯ್ದೆ'ಗಾಗಿ ಜನಾಂದೋಲನವಾಗಬೇಕು: ದಸಂಸ ಮುಖಂಡ ಮಾವಳ್ಳಿ ಶಂಕರ್

‘ರೋಹಿತ್ ಕಾಯ್ದೆ’ಗಾಗಿ ಜನಾಂದೋಲನವಾಗಬೇಕು: ದಸಂಸ ಮುಖಂಡ ಮಾವಳ್ಳಿ ಶಂಕರ್

- Advertisement -
- Advertisement -

ಏಪ್ರಿಲ್ 14 ರಂದು ಅಥವಾ ಅದಕ್ಕೂ ಮೊದಲು ಕರ್ನಾಟಕದಲ್ಲಿ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಬೇಕೆಂದು ಒತ್ತಾಯಿಸಿ, ರಾಜ್ಯದ ಹಲವು ವಿವಿಗಳ ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, “ರೋಹಿತ್ ಕಾಯ್ದೆಗಾಗಿ ಈ ಆಂದೋಲನ ಒಂದು ಜನಾಂದೋಲನವಾಗಬೇಕು. ದೇಶದ ವಿಶ್ವವಿದ್ಯಾನಿಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಅವರ ಜೀವ ಕಳೆದಕೊಳ್ಳುತ್ತಲೇ ಇದ್ದಾರೆ. ಸಮಾನತೆ ಬಗ್ಗೆ ಮಾತನಾಡುವ ನಮ್ಮ ಪ್ರಧಾನಮಂತ್ರಿಗಳು ಈ ಬಗ್ಗೆ ಮಾತನಾಡುವುದಿಲ್ಲ. ಅವರ ಸಂಘಟನೆಯವರು (ಆರ್‌ಎಸ್‌ಎಸ್‌) ದಲಿತ ವಿದ್ಯಾರ್ಥಿಗಳ ಸಾವಿಗೆ ಕಾರಣವಾದಾಗ ಅವರು ಖಂಡಿಸುವುದೇ ಇಲ್ಲ. ಕರ್ನಾಟಕದಾದ್ಯಂತ ವಿಶ್ವವಿದ್ಯಾನಿಲಯಗಳನ್ನು ಈಗ ವ್ಯವಸ್ಥಿತವಾಗಿ ಕೇಸರಿಕರಣ ಮಾಡಲಾಗುತ್ತಿದೆ; ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆಸಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

ದಲಿತ ಹೋರಾಟಗಾರರರಾದ ಬಸವರಾಜ್ ಕೌತಾಳ್ ಮಾತನಾಡಿ, ಈ ಆಂದೋಲನದಲ್ಲಿ ಎಲ್ಲ ದಲಿತ ಸಂಘಟನೆಗಳು ಕೈಜೋಡಿಸಬೇಕು ಎಂದು ಕರೆ ಕೊಟ್ಟರು. “2014 ರಿಂದ 2024 ರವರೆಗೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಕ್ರೌರ್ಯ ಮತ್ತು ದಬ್ಬಾಳಿಕೆಯಿಂದಾಗಿ ಸುಮಾರು 122 ದಲಿತ, ಆದಿವಾಸಿ ಒಬಿಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸಾವುಗಳನ್ನು ತಡೆಯಲು ರಾಜ್ಯದಲ್ಲಿ ರೋಹಿತ್ ಕಾಯ್ದೆ ಜಾರಿಯಾಗಲೇಬೇಕು” ಎಂದರು.

ಕೆ.ಪಿ. ಅಶ್ವಿನಿ ಮಾತನಾಡಿ “ರೋಹಿತ್ ವೇಮುಲಾ ಅವರ ಸಾಂಸ್ಥಿಕ ಹತ್ಯೆಯನ್ನು ಸಾಧ್ಯವಾದಷ್ಟು ಕಠಿಣವಾಗಿ ಖಂಡಿಸಬೇಕು. ರಾಜ್ಯ ಮತ್ತು ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ, ವಿದ್ಯಾರ್ಥಿಗಳು ಹೇಳಲಾಗದ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳಲ್ಲಿರಲಿ, ಜಾತಿ ತಾರತಮ್ಯದ ಬಗ್ಗೆ ಮಾತನಾಡಲು ಅವಕಾಶವೇ ಇಲ್ಲ . ಜಾತಿ ತಾರತಮ್ಯವು ಹಿಂದಿನಕಾಲದ ಸಮಸ್ಯೆ ಎಂಬ ಅಭಿಪ್ರಾಯದಲ್ಲಿ ಜನರು ಬದುಕುತ್ತಿದ್ದಾರೆ. ಆದರೆ, ಅದು ನಿಜವಲ್ಲ. ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ, ಸಾಮಾಜಿಕ ಮತ್ತು ಆರ್ಥಿಕ ಚಲನಶೀಲತೆಯನ್ನು ಪಡೆಯಲು ಶಿಕ್ಷಣವು ಏಕೈಕ ಮಾರ್ಗವಾಗಿದೆ. ಅದನ್ನು ಸಹ ನಮ್ಮಿಂದ ಕಸಿದುಕೊಳ್ಳಲಾಗುತ್ತಿದೆ. ದೌರ್ಜನ್ಯ ತಡೆ ಕಾಯ್ದೆಯು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ಪರಿಹರಿಸಲು ಯಾವುದೇ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊಂದಿಲ್ಲದ ಕಾರಣ ನಾವು ಪ್ರತ್ಯೇಕ ಕಾನೂನಿಗೆ ಒತ್ತಾಯಿಸುತ್ತಿದ್ದೇವೆ. ಶಿಕ್ಷಣವು ಪ್ರಗತಿಪರ ಸ್ಥಳವಾಗಿರಬೇಕು. ಏಪ್ರಿಲ್ 14 ರ ಮೊದಲು, ರಾಜ್ಯ ಸರ್ಕಾರವು ರೋಹಿತ್ ಕಾಯ್ದೆಯ ಬಗ್ಗೆ ಚರ್ಚಿಸಲು ಕನಿಷ್ಠ ಒಂದು ಸಮಿತಿಯನ್ನು ರಚಿಸಬೇಕು” ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ಶ್ರೀಪಾದ್ ಭಟ್ ಮಾತನಾಡಿ, “ರಾಜ್ಯ ಸರ್ಕಾರವು ಎಸ್‌ಸಿ/ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವ ಮೂಲಕ ಅಂಚಿನಲ್ಲಿರುವ ವರ್ಗಗಳಿಗೆ ತನ್ನ ಬದ್ಧತೆಯನ್ನು ತೋರಿಸಬೇಕು. ಇತ್ತೀಚೆಗೆ, ಯುಜಿಸಿ ಕರಡು ತಾರತಮ್ಯ ವಿರೋಧಿ ನಿಯಂತ್ರಣವನ್ನು ಮಂಡಿಸಿತು. ಆದರೆ, ಈ ಕರಡು ಜಾತಿ, ಲಿಂಗ, ಧರ್ಮದ ತಾರತಮ್ಯವನ್ನು ಒಟ್ಟಿಗೆ ನೋಡುತ್ತದೆ. ಈ ಎಲ್ಲ ತಾರತಮ್ಯಗಳನ್ನು ನಿಯಂತ್ರಿಸಬೇಕು. ಆದರೆ, ಜಾತಿ ತಾರತಮ್ಯವನ್ನು ನಿರ್ದಿಷ್ಟ ಗಮನದಿಂದ ನೋಡಬೇಕು ಮತ್ತು ನಿರ್ದಿಷ್ಟವಾಗಿ ಪರಿಹರಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಯುಜಿಸಿ ಕರಡು ಈ ದೃಷ್ಟಿಕೋನವನ್ನು ದುರ್ಬಲಗೊಳಿಸುತ್ತದೆ. ಈ ಕಾಯ್ದೆಯ ಜೊತೆಗೆ, ನಾವು ವಿಶ್ವವಿದ್ಯಾಲಯಗಳಲ್ಲಿನ ರೋಸ್ಟರ್ ಪಾಯಿಂಟ್ ವ್ಯವಸ್ಥೆಯನ್ನು ಗಂಭೀರವಾಗಿ ಮರುಪರಿಶೀಲಿಸಬೇಕು. ನಾವು ಕಾಯ್ದೆಯ ಮೇಲೆ ಮಾತ್ರ ಗಮನಹರಿಸಲು ಸಾಧ್ಯವಿಲ್ಲ. ಆದರೆ, ಯುಜಿಸಿ ಏನು ಮಾಡುತ್ತಿದೆ ಎಂಬುದನ್ನು ನೋಡಲು ಮತ್ತು ಅದಕ್ಕೆ ಪ್ರತಿಕ್ರಿಯಿಸುತ್ತಲೇ ಇರಲು ಸಾಧ್ಯವಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...