Homeಅಂತರಾಷ್ಟ್ರೀಯಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ 'ಹ್ಯಾಂಡ್ಸ್ ಆಫ್' ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

- Advertisement -
- Advertisement -

ಅಮೆರಿಕದ ಹಲವಾರು ನಗರಗಳಲ್ಲಿ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್ ಮಸ್ಕ್ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ರ್‍ಯಾಲಿ ನಡೆಸಿದರು.

ಟ್ರಂಪ್ ದೇಶವನ್ನು ನಡೆಸುತ್ತಿರುವ ರೀತಿ ವಿರೋಧಿಸಿ ಜನರು ಗುಂಪುಗೂಡಿದ್ದಾರೆ. ‘ಹ್ಯಾಂಡ್ಸ್ ಆಫ್’ ಚಳವಳಿಯನ್ನು ಅಮೆರಿಕದ 50 ರಾಜ್ಯಗಳಲ್ಲಿ 1,200 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಾಗರಿಕ ಹಕ್ಕುಗಳ ಸಂಘಟನೆಗಳು, ಕಾರ್ಮಿಕ ಸಂಘಗಳು, ಎಲ್‌ಜಿಬಿಟಿಕ್ಯೂ+, ವಕೀಲರು, ಚುನಾವಣಾ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಹೆಚ್ಚು ಗುಂಪುಗಳು ಆಯೋಜಿಸಿದ್ದವು. ಇಲ್ಲಿಯವರೆಗೆ ಯಾವುದೇ ಬಂಧನಗಳ ವರದಿಗಳಿಲ್ಲದೆ ರ್‍ಯಾಲಿಗಳು ಶಾಂತಿಯುತವಾಗಿ ನಡೆಯುತ್ತಿವೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಿಂದ ಅಲಾಸ್ಕಾದ ಆಂಕಾರೇಜ್‌ವರೆಗೆ ಪ್ರತಿಭಟನಾಕಾರರು ಜಮಾಯಿಸಿದರು. ಸರ್ಕಾರದ ಉದ್ಯೋಗ ಕಡಿತ, ಆರ್ಥಿಕತೆ, ವಲಸೆ ಮತ್ತು ಮಾನವ ಹಕ್ಕುಗಳ ಕುರಿತು ಟ್ರಂಪ್ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಅವರ ಕ್ರಮಗಳನ್ನು ಟೀಕಿಸುತ್ತಾ ಅನೇಕ ರಾಜ್ಯ ರಾಜಧಾನಿಗಳಲ್ಲಿ ಸೇರಿದಂತೆ ಪ್ರತಿಭಟನಾಕಾರರು ಜಮಾಯಿಸಿದರು.

ಪ್ರತಿಭಟನಾಕಾರರಲ್ಲಿ ಒಬ್ಬರಾದ, ಓಹಿಯೋದ ಡೆಲವೇರ್ ಕೌಂಟಿಯಿಂದ ನಿವೃತ್ತರಾದ 66 ವರ್ಷದ ರೋಜರ್ ಬ್ರೂಮ್, “ತಾವು ರೇಗನ್ ರಿಪಬ್ಲಿಕನ್ ಆಗಿದ್ದೆ. ಆದರೆ, ಟ್ರಂಪ್ ಅವರಿಂದ ದೂರವಾಗಿದ್ದೇನೆ” ಎಂದು ಹೇಳಿದರು. “ಅವರು (ಟ್ರಂಪ್) ಈ ದೇಶವನ್ನು ಹರಿದು ಹಾಕುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಇದು ಕುಂದುಕೊರತೆಗಳ ಆಡಳಿತ

ಅಮೆರಿಕದ ಪಶ್ಚಿಮ ಕರಾವಳಿಯಲ್ಲಿ, ಪ್ರತಿಭಟನಾಕಾರರು “ಒಲಿಗಾರ್ಕಿ ವಿರುದ್ಧ ಹೋರಾಡಿ” ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದಿದ್ದರು. ಪೋರ್ಟ್ಲ್ಯಾಂಡ್, ಒರೆಗಾನ್ ಮತ್ತು ಲಾಸ್ ಏಂಜಲೀಸ್ ಸೇರಿದಂತೆ ಅಮೆರಿಕದ ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಅಲ್ಲಿ ಅವರು ಪರ್ಶಿಂಗ್ ಸ್ಕ್ವೇರ್‌ನಿಂದ ಸಿಟಿ ಹಾಲ್‌ಗೆ ಮೆರವಣಿಗೆ ನಡೆಸಿದರು.

ಫೆಡರಲ್ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವುದು, ಸಂಪೂರ್ಣ ಏಜೆನ್ಸಿಗಳನ್ನು ಮುಚ್ಚುವುದು, ಟ್ರಾನ್ಸ್‌ಜೆಂಡರ್ ಜನರಿಗೆ ರಕ್ಷಣೆಯನ್ನು ಕಡಿಮೆ ಮಾಡುವುದು, ಆರೋಗ್ಯ ನಿಧಿಯನ್ನು ಕಡಿತಗೊಳಿಸುವುದು, ಸಾಮಾಜಿಕ ಭದ್ರತಾ ಆಡಳಿತ ಕ್ಷೇತ್ರ ಕಚೇರಿಗಳನ್ನು ಮುಚ್ಚುವುದು ಸೇರಿದಂತೆ ಟ್ರಂಪ್ ಆಡಳಿತದ ನಿರ್ಧಾರವನ್ನು ವಿರೋಧಿಸುವುದು ಪ್ರತಿಭಟನೆಗಳ ಮುಖ್ಯ ಗುರಿಯಾಗಿತ್ತು.

ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ಶ್ವೇತಭವನವು, “ಅಧ್ಯಕ್ಷ ಟ್ರಂಪ್ ಅವರ ನಿಲುವು ಸ್ಪಷ್ಟವಾಗಿದೆ; ಅವರು ಯಾವಾಗಲೂ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ, ಮೆಡಿಕೇರ್ ಮತ್ತು ಮೆಡಿಕೈಡ್ ಅನ್ನು ರಕ್ಷಿಸುತ್ತಾರೆ” ಎಂದು ಹೇಳಿದೆ.

“ಈ ಮಧ್ಯೆ, ಡೆಮೋಕ್ರಾಟ್‌ಗಳ ನಿಲುವು ಅಕ್ರಮ ವಲಸಿಗರಿಗೆ ಸಾಮಾಜಿಕ ಭದ್ರತೆ, ಮೆಡಿಕೈಡ್ ಮತ್ತು ಮೆಡಿಕೇರ್ ಪ್ರಯೋಜನಗಳನ್ನು ನೀಡುತ್ತಿದೆ, ಇದು ಈ ಕಾರ್ಯಕ್ರಮಗಳನ್ನು ದಿವಾಳಿ ಮಾಡುತ್ತದೆ ಮತ್ತು ಅಮೇರಿಕನ್ ಹಿರಿಯ ನಾಗರಿಕರನ್ನು ಹತ್ತಿಕ್ಕುತ್ತದೆ” ಎಂದು ಹೇಳಿಕೆ ನೀಡುತ್ತಾ ಡೆಮೋಕ್ರಾಟ್‌ಗಳನ್ನು ನೇರವಾಗಿ ಟೀಕಿಸಲಾಗಿದೆ.

ಈ ಎಲ್ಲ ಪ್ರತಿಭಟನೆಗಳ ನಡುವೆ ಅಧ್ಯಕ್ಷರು ಟ್ರಂಪ್ ಶನಿವಾರ ಫ್ಲೋರಿಡಾದಲ್ಲಿ ಗಾಲ್ಫ್ ಆಡಿದರು. ಭಾನುವಾರ ಕೂಡ ಮತ್ತೆ ಹಾಗೇ ಮಾಡಲು ಯೋಜಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಮೊದಲ ಅವಧಿಯಲ್ಲಿ, ಟ್ರಂಪ್ 2017 ರಲ್ಲಿ ಮಹಿಳಾ ಮಾರ್ಚ್‌ನೊಂದಿಗೆ ದೇಶಾದ್ಯಂತ ಪ್ರತಿಭಟನೆಗಳನ್ನು ಎದುರಿಸಿದರು. ಇದು ಸಾವಿರಾರು ಮಹಿಳೆಯರನ್ನು ವಾಷಿಂಗ್ಟನ್‌ಗೆ ಕರೆತಂದಿತು. 2020 ರಲ್ಲಿ ಮಿನ್ನಿಯಾಪೋಲಿಸ್‌ನಲ್ಲಿ ಜಾರ್ಜ್ ಫ್ಲಾಯ್ಡ್ ಅವರನ್ನು ಪೊಲೀಸರು ಕೊಂದ ನಂತರ ನಡೆದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಪ್ರದರ್ಶನಗಳು ಸಹ ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ಎದುರಿಸಿದ ಪ್ರಮುಖ ವಿರೋಧಗಳಲ್ಲಿ ಸೇರಿವೆ.

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...