Homeಮುಖಪುಟಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ತಾಳಮುತ್ತು ನಗರ ಪೊಲೀಸ್ ಠಾಣೆಯಲ್ಲಿ 1999ರಲ್ಲಿ ಸಂಭವಿಸಿದ ಕಸ್ಟಡಿ ಸಾವು ಪ್ರಕರಣದಲ್ಲಿ ಡಿಎಸ್‌ಪಿ ಸೇರಿ 9 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಾಸಿಕ್ಯೂಷನ್ ಪ್ರಕಾರ, ತೂತುಕುಡಿ ಜಿಲ್ಲೆಯ ಮೇಳ ಅಲಂಗರತಟ್ಟು ನಿವಾಸಿ, ಉಪ್ಪು ತಯಾರಿಕೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಿ. ವಿನ್ಸೆಂಟ್ ಅವರನ್ನು ಸೆಪ್ಟೆಂಬರ್ 17, 1999ರಂದು ವಿಚಾರಣೆಗಾಗಿ ತಾಳಮುತ್ತು ನಗರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಆಗಿನ ಸಬ್-ಇನ್ಸ್‌ಪೆಕ್ಟರ್ ಆಗಿದ್ದ ರಾಮಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಅವರನ್ನು ಲಾಕಪ್‌ನಲ್ಲಿ ಬಂಧಿಸಿಟ್ಟಿತ್ತು. ಮರುದಿನ ವಿನ್ಸೆಂಟ್ ಅನುಮಾನಾಸ್ಪದ ರೀತಿಯಲ್ಲಿ ಲಾಕಪ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು.

ವಿನ್ಸೆಂಟ್ ಸಾವಿನ ಸಂಬಂಧ ಅವರ ಪತ್ನಿ ಕೃಷ್ಣಮ್ಮಾಳ್ ಅದೇ ಪೊಲೀಸ್ ಠಾಣೆಯಲ್ಲಿ ತನ್ನ ಪತಿಯನ್ನು ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಸಂಬಂಧ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್, ಪೊಲೀಸ್‌ ಸಿಬ್ಬಂದಿ ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಶಿವಸುಬ್ರಮಣಿಯನ್, ಸುಬ್ಬಯ್ಯ, ರತಿನಸಾಮಿ ಮತ್ತು ಬಾಲಸುಬ್ರಮಣಿಯನ್ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಯನ್ನು ತೂತುಕುಡಿಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ನ್ಯಾಯಮೂರ್ತಿ ಎಂ. ತಾಂಡವನ್ ಅವರು ಪ್ರಕರಣದ ಅಪರಾಧಿಗಳಾದ ರಾಮಕೃಷ್ಣನ್, ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಸುಬ್ಬಯ್ಯ ಮತ್ತು ಬಾಲಸುಬ್ರಮಣಿಯನ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10,000 ರೂಪಾಯಿ ದಂಡ ವಿಧಿಸಿದ್ದಾರೆ.

ಆರೋಪಿಗಳಾದ ರತಿನಸಾಮಿ ಮತ್ತು ಶಿವಸುಬ್ರಮಣಿಯನ್ ಇಬ್ಬರೂ ಈಗ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ. ಸರ್ಕಾರಿ ವಕೀಲ ಎಸ್.ಪಿ ಆನಂದ್ ಗೇಬ್ರಿಯಲ್ ರಾಜ್ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದಾರೆ.

ಶಿಕ್ಷೆಗೊಳಗಾದವರಲ್ಲಿ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್ ಈಗ ಶ್ರೀವೈಕುಂಠಂ ಡಿಎಸ್‌ಪಿ ಆಗಿದ್ದಾರೆ. ಸೋಮಸುಂದರಂ ಪ್ರಸ್ತುತ ಇನ್ಸ್‌ಪೆಕ್ಟರ್ ಆಗಿ ಮತ್ತು ಪಿಚಯ್ಯ ಭೂಕಬಳಿಕೆ ತಡೆ ವಿಭಾಗದಲ್ಲಿ ವಿಶೇಷ ಸಬ್-ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಇತರರು ಸೇವೆಯಿಂದ ನಿವೃತ್ತರಾಗಿದ್ದಾರೆ.

ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ವಿನ್ಸೆಂಟ್ ಸಾವು 1999, ಸೆ.18ರಂದು ಮಧ್ಯಾಹ್ನ 1:30ರಿಂದ ಸಂಜೆ 7:30ರ ನಡುವೆ ಸಂಭವಿಸಿತ್ತು. ವಿನ್ಸೆಂಟ್ ಮುನ್ನಾದಿನ ತೀವ್ರವಾಗಿ ಗಾಯಗೊಂಡಿದ್ದರು ಎಂದು ವೈದ್ಯಕೀಯ ಸಾಕ್ಷ್ಯವು ದೃಢಪಡಿಸಿದೆ. ಹೀಗಾಗಿ, ಇದು ಕಸ್ಟಡಿ ಸಾವು ಅಲ್ಲದೆ ಬೇರೇನೂ ಅಲ್ಲ ಎಂದು ಶನಿವಾರ ವಿಚಾರಣೆ ಸಂದರ್ಭದಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ತಾಂಡವನ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತಾಗುವವರೆಗೂ ಪೋಲಿಸರ ಮೇಲೆಯೇ ಶಂಕೆಯಿರುತ್ತದೆ. ಇಲ್ಲಿ ಆರೋಪಿ ಪೋಲಿಸರು ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತುಗೊಳಿಸಿಲ್ಲ. ಹೀಗಾಗಿ, ಇದು ಕಸ್ಟಡಿ ಸಾವು ಎಂದು ಭಾವಿಸಲೇಬೇಕು ಎಂದಿದ್ದಾರೆ.

ಪೋಲಿಸರು ಲಾಠಿಗಳಿಂದ ವಿನ್ಸೆಂಟ್‌ರನ್ನು ಥಳಿಸಿದ್ದರು ಎನ್ನುವುದನ್ನು ಸಾಕ್ಷ್ಯಾಧಾರಗಳು ಸ್ಪಷ್ಟಪಡಿಸಿವೆ. ತಮ್ಮ ಹಲ್ಲೆಯಿಂದ ಆತ ಸಾಯಬಹುದು ಎನ್ನುವುದು ಗೊತ್ತಿದ್ದರೂ ಪೋಲಿಸರು ಅವರ ಮೇಲೆ ದಾಳಿ ನಡೆಸಿದ್ದರು ಎಂದೂ ನ್ಯಾ.ತಾಂಡವನ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...