Homeಮುಖಪುಟಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ತಾಳಮುತ್ತು ನಗರ ಪೊಲೀಸ್ ಠಾಣೆಯಲ್ಲಿ 1999ರಲ್ಲಿ ಸಂಭವಿಸಿದ ಕಸ್ಟಡಿ ಸಾವು ಪ್ರಕರಣದಲ್ಲಿ ಡಿಎಸ್‌ಪಿ ಸೇರಿ 9 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಾಸಿಕ್ಯೂಷನ್ ಪ್ರಕಾರ, ತೂತುಕುಡಿ ಜಿಲ್ಲೆಯ ಮೇಳ ಅಲಂಗರತಟ್ಟು ನಿವಾಸಿ, ಉಪ್ಪು ತಯಾರಿಕೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಿ. ವಿನ್ಸೆಂಟ್ ಅವರನ್ನು ಸೆಪ್ಟೆಂಬರ್ 17, 1999ರಂದು ವಿಚಾರಣೆಗಾಗಿ ತಾಳಮುತ್ತು ನಗರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಆಗಿನ ಸಬ್-ಇನ್ಸ್‌ಪೆಕ್ಟರ್ ಆಗಿದ್ದ ರಾಮಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಅವರನ್ನು ಲಾಕಪ್‌ನಲ್ಲಿ ಬಂಧಿಸಿಟ್ಟಿತ್ತು. ಮರುದಿನ ವಿನ್ಸೆಂಟ್ ಅನುಮಾನಾಸ್ಪದ ರೀತಿಯಲ್ಲಿ ಲಾಕಪ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು.

ವಿನ್ಸೆಂಟ್ ಸಾವಿನ ಸಂಬಂಧ ಅವರ ಪತ್ನಿ ಕೃಷ್ಣಮ್ಮಾಳ್ ಅದೇ ಪೊಲೀಸ್ ಠಾಣೆಯಲ್ಲಿ ತನ್ನ ಪತಿಯನ್ನು ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಸಂಬಂಧ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್, ಪೊಲೀಸ್‌ ಸಿಬ್ಬಂದಿ ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಶಿವಸುಬ್ರಮಣಿಯನ್, ಸುಬ್ಬಯ್ಯ, ರತಿನಸಾಮಿ ಮತ್ತು ಬಾಲಸುಬ್ರಮಣಿಯನ್ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಯನ್ನು ತೂತುಕುಡಿಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ನ್ಯಾಯಮೂರ್ತಿ ಎಂ. ತಾಂಡವನ್ ಅವರು ಪ್ರಕರಣದ ಅಪರಾಧಿಗಳಾದ ರಾಮಕೃಷ್ಣನ್, ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಸುಬ್ಬಯ್ಯ ಮತ್ತು ಬಾಲಸುಬ್ರಮಣಿಯನ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10,000 ರೂಪಾಯಿ ದಂಡ ವಿಧಿಸಿದ್ದಾರೆ.

ಆರೋಪಿಗಳಾದ ರತಿನಸಾಮಿ ಮತ್ತು ಶಿವಸುಬ್ರಮಣಿಯನ್ ಇಬ್ಬರೂ ಈಗ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ. ಸರ್ಕಾರಿ ವಕೀಲ ಎಸ್.ಪಿ ಆನಂದ್ ಗೇಬ್ರಿಯಲ್ ರಾಜ್ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದಾರೆ.

ಶಿಕ್ಷೆಗೊಳಗಾದವರಲ್ಲಿ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್ ಈಗ ಶ್ರೀವೈಕುಂಠಂ ಡಿಎಸ್‌ಪಿ ಆಗಿದ್ದಾರೆ. ಸೋಮಸುಂದರಂ ಪ್ರಸ್ತುತ ಇನ್ಸ್‌ಪೆಕ್ಟರ್ ಆಗಿ ಮತ್ತು ಪಿಚಯ್ಯ ಭೂಕಬಳಿಕೆ ತಡೆ ವಿಭಾಗದಲ್ಲಿ ವಿಶೇಷ ಸಬ್-ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಇತರರು ಸೇವೆಯಿಂದ ನಿವೃತ್ತರಾಗಿದ್ದಾರೆ.

ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ವಿನ್ಸೆಂಟ್ ಸಾವು 1999, ಸೆ.18ರಂದು ಮಧ್ಯಾಹ್ನ 1:30ರಿಂದ ಸಂಜೆ 7:30ರ ನಡುವೆ ಸಂಭವಿಸಿತ್ತು. ವಿನ್ಸೆಂಟ್ ಮುನ್ನಾದಿನ ತೀವ್ರವಾಗಿ ಗಾಯಗೊಂಡಿದ್ದರು ಎಂದು ವೈದ್ಯಕೀಯ ಸಾಕ್ಷ್ಯವು ದೃಢಪಡಿಸಿದೆ. ಹೀಗಾಗಿ, ಇದು ಕಸ್ಟಡಿ ಸಾವು ಅಲ್ಲದೆ ಬೇರೇನೂ ಅಲ್ಲ ಎಂದು ಶನಿವಾರ ವಿಚಾರಣೆ ಸಂದರ್ಭದಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ತಾಂಡವನ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತಾಗುವವರೆಗೂ ಪೋಲಿಸರ ಮೇಲೆಯೇ ಶಂಕೆಯಿರುತ್ತದೆ. ಇಲ್ಲಿ ಆರೋಪಿ ಪೋಲಿಸರು ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತುಗೊಳಿಸಿಲ್ಲ. ಹೀಗಾಗಿ, ಇದು ಕಸ್ಟಡಿ ಸಾವು ಎಂದು ಭಾವಿಸಲೇಬೇಕು ಎಂದಿದ್ದಾರೆ.

ಪೋಲಿಸರು ಲಾಠಿಗಳಿಂದ ವಿನ್ಸೆಂಟ್‌ರನ್ನು ಥಳಿಸಿದ್ದರು ಎನ್ನುವುದನ್ನು ಸಾಕ್ಷ್ಯಾಧಾರಗಳು ಸ್ಪಷ್ಟಪಡಿಸಿವೆ. ತಮ್ಮ ಹಲ್ಲೆಯಿಂದ ಆತ ಸಾಯಬಹುದು ಎನ್ನುವುದು ಗೊತ್ತಿದ್ದರೂ ಪೋಲಿಸರು ಅವರ ಮೇಲೆ ದಾಳಿ ನಡೆಸಿದ್ದರು ಎಂದೂ ನ್ಯಾ.ತಾಂಡವನ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...