Homeಮುಖಪುಟಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ತಾಳಮುತ್ತು ನಗರ ಪೊಲೀಸ್ ಠಾಣೆಯಲ್ಲಿ 1999ರಲ್ಲಿ ಸಂಭವಿಸಿದ ಕಸ್ಟಡಿ ಸಾವು ಪ್ರಕರಣದಲ್ಲಿ ಡಿಎಸ್‌ಪಿ ಸೇರಿ 9 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಾಸಿಕ್ಯೂಷನ್ ಪ್ರಕಾರ, ತೂತುಕುಡಿ ಜಿಲ್ಲೆಯ ಮೇಳ ಅಲಂಗರತಟ್ಟು ನಿವಾಸಿ, ಉಪ್ಪು ತಯಾರಿಕೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಿ. ವಿನ್ಸೆಂಟ್ ಅವರನ್ನು ಸೆಪ್ಟೆಂಬರ್ 17, 1999ರಂದು ವಿಚಾರಣೆಗಾಗಿ ತಾಳಮುತ್ತು ನಗರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಆಗಿನ ಸಬ್-ಇನ್ಸ್‌ಪೆಕ್ಟರ್ ಆಗಿದ್ದ ರಾಮಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಅವರನ್ನು ಲಾಕಪ್‌ನಲ್ಲಿ ಬಂಧಿಸಿಟ್ಟಿತ್ತು. ಮರುದಿನ ವಿನ್ಸೆಂಟ್ ಅನುಮಾನಾಸ್ಪದ ರೀತಿಯಲ್ಲಿ ಲಾಕಪ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು.

ವಿನ್ಸೆಂಟ್ ಸಾವಿನ ಸಂಬಂಧ ಅವರ ಪತ್ನಿ ಕೃಷ್ಣಮ್ಮಾಳ್ ಅದೇ ಪೊಲೀಸ್ ಠಾಣೆಯಲ್ಲಿ ತನ್ನ ಪತಿಯನ್ನು ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಸಂಬಂಧ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್, ಪೊಲೀಸ್‌ ಸಿಬ್ಬಂದಿ ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಶಿವಸುಬ್ರಮಣಿಯನ್, ಸುಬ್ಬಯ್ಯ, ರತಿನಸಾಮಿ ಮತ್ತು ಬಾಲಸುಬ್ರಮಣಿಯನ್ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಯನ್ನು ತೂತುಕುಡಿಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದೆ. ನ್ಯಾಯಮೂರ್ತಿ ಎಂ. ತಾಂಡವನ್ ಅವರು ಪ್ರಕರಣದ ಅಪರಾಧಿಗಳಾದ ರಾಮಕೃಷ್ಣನ್, ಸೋಮಸುಂದರಂ, ಜಯಶೇಖರನ್, ಜೋಸೆಫ್ ರಾಜ್, ಪಿಚಯ್ಯ, ಚೆಲ್ಲಾತುರೈ, ವೀರಬಾಹು, ಸುಬ್ಬಯ್ಯ ಮತ್ತು ಬಾಲಸುಬ್ರಮಣಿಯನ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10,000 ರೂಪಾಯಿ ದಂಡ ವಿಧಿಸಿದ್ದಾರೆ.

ಆರೋಪಿಗಳಾದ ರತಿನಸಾಮಿ ಮತ್ತು ಶಿವಸುಬ್ರಮಣಿಯನ್ ಇಬ್ಬರೂ ಈಗ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ. ಸರ್ಕಾರಿ ವಕೀಲ ಎಸ್.ಪಿ ಆನಂದ್ ಗೇಬ್ರಿಯಲ್ ರಾಜ್ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದ್ದಾರೆ.

ಶಿಕ್ಷೆಗೊಳಗಾದವರಲ್ಲಿ ಸಬ್-ಇನ್ಸ್‌ಪೆಕ್ಟರ್ ರಾಮಕೃಷ್ಣನ್ ಈಗ ಶ್ರೀವೈಕುಂಠಂ ಡಿಎಸ್‌ಪಿ ಆಗಿದ್ದಾರೆ. ಸೋಮಸುಂದರಂ ಪ್ರಸ್ತುತ ಇನ್ಸ್‌ಪೆಕ್ಟರ್ ಆಗಿ ಮತ್ತು ಪಿಚಯ್ಯ ಭೂಕಬಳಿಕೆ ತಡೆ ವಿಭಾಗದಲ್ಲಿ ವಿಶೇಷ ಸಬ್-ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಇತರರು ಸೇವೆಯಿಂದ ನಿವೃತ್ತರಾಗಿದ್ದಾರೆ.

ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ವಿನ್ಸೆಂಟ್ ಸಾವು 1999, ಸೆ.18ರಂದು ಮಧ್ಯಾಹ್ನ 1:30ರಿಂದ ಸಂಜೆ 7:30ರ ನಡುವೆ ಸಂಭವಿಸಿತ್ತು. ವಿನ್ಸೆಂಟ್ ಮುನ್ನಾದಿನ ತೀವ್ರವಾಗಿ ಗಾಯಗೊಂಡಿದ್ದರು ಎಂದು ವೈದ್ಯಕೀಯ ಸಾಕ್ಷ್ಯವು ದೃಢಪಡಿಸಿದೆ. ಹೀಗಾಗಿ, ಇದು ಕಸ್ಟಡಿ ಸಾವು ಅಲ್ಲದೆ ಬೇರೇನೂ ಅಲ್ಲ ಎಂದು ಶನಿವಾರ ವಿಚಾರಣೆ ಸಂದರ್ಭದಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ತಾಂಡವನ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತಾಗುವವರೆಗೂ ಪೋಲಿಸರ ಮೇಲೆಯೇ ಶಂಕೆಯಿರುತ್ತದೆ. ಇಲ್ಲಿ ಆರೋಪಿ ಪೋಲಿಸರು ಅದು ಕಸ್ಟಡಿ ಸಾವು ಅಲ್ಲ ಎಂದು ಸಾಬೀತುಗೊಳಿಸಿಲ್ಲ. ಹೀಗಾಗಿ, ಇದು ಕಸ್ಟಡಿ ಸಾವು ಎಂದು ಭಾವಿಸಲೇಬೇಕು ಎಂದಿದ್ದಾರೆ.

ಪೋಲಿಸರು ಲಾಠಿಗಳಿಂದ ವಿನ್ಸೆಂಟ್‌ರನ್ನು ಥಳಿಸಿದ್ದರು ಎನ್ನುವುದನ್ನು ಸಾಕ್ಷ್ಯಾಧಾರಗಳು ಸ್ಪಷ್ಟಪಡಿಸಿವೆ. ತಮ್ಮ ಹಲ್ಲೆಯಿಂದ ಆತ ಸಾಯಬಹುದು ಎನ್ನುವುದು ಗೊತ್ತಿದ್ದರೂ ಪೋಲಿಸರು ಅವರ ಮೇಲೆ ದಾಳಿ ನಡೆಸಿದ್ದರು ಎಂದೂ ನ್ಯಾ.ತಾಂಡವನ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...