Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ ಪ್ರಕರಣ

- Advertisement -
- Advertisement -

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ ಮಾಲೆಗಾಂವ್ ಸ್ಪೋಟ ಪ್ರಕರಣದ ವಿಚಾರಣೆಯ ನೇತೃತ್ವದ ವಹಿಸಿದ್ದ ಎನ್‌ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶರನ್ನು ವಿಚಾರಣೆಯ ಅಂತಿಮ ಹಂತದಲ್ಲಿ ವರ್ಗಾವಣೆ ಮಾಡಲಾಗಿದೆ.

ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಾರ್ಷಿಕ ನಿಯಮಿತ ವರ್ಗಾವಣೆಯ ಭಾಗವಾಗಿ ಈ ವರ್ಗಾವಣೆ ನಡೆದಿದೆ ಎಂದು ವರದಿಗಳು ಹೇಳಿವೆ.

ಏಪ್ರಿಲ್ 5ರಂದು ಹೊರಡಿಸಲಾದ ವರ್ಗಾವಣೆ ಆದೇಶದಲ್ಲಿ, ವಿಚಾರಣೆ ಮುಗಿದಿರುವ ಎಲ್ಲಾ ಪ್ರಕರಣಗಳ ತೀರ್ಪುಗಳನ್ನು ಅಧಿಕಾರ ಹಸ್ತಾಂತರಿಸುವ ಮುನ್ನ ಪ್ರಕಟಿಸುವಂತೆ ನಿರ್ದೇಶಿಸಲಾಗಿದೆ.

ಮಾಲೆಗಾಂವ್ ಸ್ಟೋಟ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಎ.ಕೆ. ಲಹೋಟಿ ಅವರು, ಏಪ್ರಿಲ್ 15 ರೊಳಗೆ ಉಳಿದ ವಾದಗಳನ್ನು ಪೂರ್ಣಗೊಳಿಸುವಂತೆ ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳಿಗೆ ಕಳೆದ ಶನಿವಾರ ನಿರ್ದೇಶನ ನೀಡಿದ್ದರು.

ಲಹೋಟಿ ಅವರು 17 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದ ವಿಚಾರಣೆ ನೇತೃತ್ವ ವಹಿಸಿರುವ ಐದನೇ ನ್ಯಾಯಾಧೀರಾಗಿದ್ದಾರೆ.

ನ್ಯಾಯಾಧೀಶರ ವರ್ಗಾವಣೆಯನ್ನು ನಿರೀಕ್ಷಿಸಿದ್ದ ಪ್ರಕರಣದ ಸಂತ್ರಸ್ತರು, ಕಳೆದ ವಾರ ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ವಿಳಂಬವಿಲ್ಲದೆ ತೀರ್ಪು ಪ್ರಕಟವಾಗುವಂತೆ ನೋಡಿಕೊಳ್ಳಲು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಕೋರಿದ್ದರು.

“ಪ್ರಕರಣವು ಸಂಕೀರ್ಣವಾದ ದಾವೆ ಪ್ರಕ್ರಿಯೆಗಳ ಮೂಲಕ ಸಾಗುತ್ತಿದೆ. ನ್ಯಾಯಾಧೀಶ ಎ.ಕೆ ಲಹೋಟಿ ಅವರು ಪ್ರಕರಣದ ಪ್ರತಿಯೊಂದು ಅಂಶಗಳ ಬಗ್ಗೆಯೂ ಸೂಕ್ಷ್ಮವಾಗಿ ತಿಳಿದಿದ್ದಾರೆ. ನ್ಯಾಯದ ಹಿತದೃಷ್ಟಿಯಿಂದ, ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಶಿಫಾರಸು ಮಾಡುವಂತೆ ನಾವು ನಿಮ್ಮನ್ನು ಕೋರುತ್ತೇವೆ” ಎಂದು ಪತ್ರದಲ್ಲಿ ಹೇಳಲಾಗಿತ್ತು.

ನ್ಯಾಯಾಧೀಶರ ವರ್ಗಾವಣೆ ತಡೆಯುವಂತೆ ಹೈಕೋರ್ಟ್‌ ಮೊರೆ ಹೋಗುವ ಬಗ್ಗೆ ಯೋಚಿಸುತ್ತಿದ್ದೇವೆ. ಪ್ರಕರಣದ ವಿಚಾರಣೆ ಈಗಾಗಲೇ ವಿಳಂಬವಾಗಿದೆ. ನ್ಯಾಯಾಧೀಶರನ್ನು ವರ್ಗಾಯಿಸಿದರೆ ಇನ್ನಷ್ಟು ವಿಳಂಬವಾಗಲಿದೆ. ಹಾಗಾಗಿ, ನಾವು ಹಿರಿಯ ವಕೀಲರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಂತ್ರಸ್ತರ ಪರ ವಕೀಲ ಶಾಹಿದ್ ನದೀಮ್ ಹೇಳಿದ್ದಾರೆ.

ಮಾಲೆಗಾಂವ್ ಸ್ಪೋಟ ಪ್ರಕರಣ

ಸೆಪ್ಟೆಂಬರ್ 29,2008ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಮಸೀದಿಯ ಬಳಿ ಬೈಕ್‌ನಲ್ಲಿ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರಂಭದಲ್ಲಿ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ನಂತರ 2011ರಲ್ಲಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸಲಾಯಿತು.

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಹಾಗೂ ಇನ್ನಿತರ ಐವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ಮೇಲೆ ಯುಎಪಿಎ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ದೂರು ದಾಖಲಾಗಿತ್ತು.

ಈವರೆಗೆ ಪ್ರಾಸಿಕ್ಯೂಷನ್‌ 323 ಹಾಗೂ ಸಂತ್ರಸ್ತರ ಪರ ವಕೀಲರು 8 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಲಯ ಪ್ರಕರಣಲ್ಲಿ ಅಂತಿಮ ವಾದ-ಪ್ರತಿವಾದ ಆಲಿಸುತ್ತಿದೆ ಎಂದು ವರದಿಯಾಗಿದೆ.

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...