Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ ಪ್ರಕರಣ

- Advertisement -
- Advertisement -

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ ಮಾಲೆಗಾಂವ್ ಸ್ಪೋಟ ಪ್ರಕರಣದ ವಿಚಾರಣೆಯ ನೇತೃತ್ವದ ವಹಿಸಿದ್ದ ಎನ್‌ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶರನ್ನು ವಿಚಾರಣೆಯ ಅಂತಿಮ ಹಂತದಲ್ಲಿ ವರ್ಗಾವಣೆ ಮಾಡಲಾಗಿದೆ.

ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಾರ್ಷಿಕ ನಿಯಮಿತ ವರ್ಗಾವಣೆಯ ಭಾಗವಾಗಿ ಈ ವರ್ಗಾವಣೆ ನಡೆದಿದೆ ಎಂದು ವರದಿಗಳು ಹೇಳಿವೆ.

ಏಪ್ರಿಲ್ 5ರಂದು ಹೊರಡಿಸಲಾದ ವರ್ಗಾವಣೆ ಆದೇಶದಲ್ಲಿ, ವಿಚಾರಣೆ ಮುಗಿದಿರುವ ಎಲ್ಲಾ ಪ್ರಕರಣಗಳ ತೀರ್ಪುಗಳನ್ನು ಅಧಿಕಾರ ಹಸ್ತಾಂತರಿಸುವ ಮುನ್ನ ಪ್ರಕಟಿಸುವಂತೆ ನಿರ್ದೇಶಿಸಲಾಗಿದೆ.

ಮಾಲೆಗಾಂವ್ ಸ್ಟೋಟ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಎ.ಕೆ. ಲಹೋಟಿ ಅವರು, ಏಪ್ರಿಲ್ 15 ರೊಳಗೆ ಉಳಿದ ವಾದಗಳನ್ನು ಪೂರ್ಣಗೊಳಿಸುವಂತೆ ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳಿಗೆ ಕಳೆದ ಶನಿವಾರ ನಿರ್ದೇಶನ ನೀಡಿದ್ದರು.

ಲಹೋಟಿ ಅವರು 17 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದ ವಿಚಾರಣೆ ನೇತೃತ್ವ ವಹಿಸಿರುವ ಐದನೇ ನ್ಯಾಯಾಧೀರಾಗಿದ್ದಾರೆ.

ನ್ಯಾಯಾಧೀಶರ ವರ್ಗಾವಣೆಯನ್ನು ನಿರೀಕ್ಷಿಸಿದ್ದ ಪ್ರಕರಣದ ಸಂತ್ರಸ್ತರು, ಕಳೆದ ವಾರ ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ವಿಳಂಬವಿಲ್ಲದೆ ತೀರ್ಪು ಪ್ರಕಟವಾಗುವಂತೆ ನೋಡಿಕೊಳ್ಳಲು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಕೋರಿದ್ದರು.

“ಪ್ರಕರಣವು ಸಂಕೀರ್ಣವಾದ ದಾವೆ ಪ್ರಕ್ರಿಯೆಗಳ ಮೂಲಕ ಸಾಗುತ್ತಿದೆ. ನ್ಯಾಯಾಧೀಶ ಎ.ಕೆ ಲಹೋಟಿ ಅವರು ಪ್ರಕರಣದ ಪ್ರತಿಯೊಂದು ಅಂಶಗಳ ಬಗ್ಗೆಯೂ ಸೂಕ್ಷ್ಮವಾಗಿ ತಿಳಿದಿದ್ದಾರೆ. ನ್ಯಾಯದ ಹಿತದೃಷ್ಟಿಯಿಂದ, ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಶಿಫಾರಸು ಮಾಡುವಂತೆ ನಾವು ನಿಮ್ಮನ್ನು ಕೋರುತ್ತೇವೆ” ಎಂದು ಪತ್ರದಲ್ಲಿ ಹೇಳಲಾಗಿತ್ತು.

ನ್ಯಾಯಾಧೀಶರ ವರ್ಗಾವಣೆ ತಡೆಯುವಂತೆ ಹೈಕೋರ್ಟ್‌ ಮೊರೆ ಹೋಗುವ ಬಗ್ಗೆ ಯೋಚಿಸುತ್ತಿದ್ದೇವೆ. ಪ್ರಕರಣದ ವಿಚಾರಣೆ ಈಗಾಗಲೇ ವಿಳಂಬವಾಗಿದೆ. ನ್ಯಾಯಾಧೀಶರನ್ನು ವರ್ಗಾಯಿಸಿದರೆ ಇನ್ನಷ್ಟು ವಿಳಂಬವಾಗಲಿದೆ. ಹಾಗಾಗಿ, ನಾವು ಹಿರಿಯ ವಕೀಲರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಂತ್ರಸ್ತರ ಪರ ವಕೀಲ ಶಾಹಿದ್ ನದೀಮ್ ಹೇಳಿದ್ದಾರೆ.

ಮಾಲೆಗಾಂವ್ ಸ್ಪೋಟ ಪ್ರಕರಣ

ಸೆಪ್ಟೆಂಬರ್ 29,2008ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಮಸೀದಿಯ ಬಳಿ ಬೈಕ್‌ನಲ್ಲಿ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರಂಭದಲ್ಲಿ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ನಂತರ 2011ರಲ್ಲಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸಲಾಯಿತು.

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಹಾಗೂ ಇನ್ನಿತರ ಐವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ಮೇಲೆ ಯುಎಪಿಎ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ದೂರು ದಾಖಲಾಗಿತ್ತು.

ಈವರೆಗೆ ಪ್ರಾಸಿಕ್ಯೂಷನ್‌ 323 ಹಾಗೂ ಸಂತ್ರಸ್ತರ ಪರ ವಕೀಲರು 8 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಲಯ ಪ್ರಕರಣಲ್ಲಿ ಅಂತಿಮ ವಾದ-ಪ್ರತಿವಾದ ಆಲಿಸುತ್ತಿದೆ ಎಂದು ವರದಿಯಾಗಿದೆ.

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...