Homeಮುಖಪುಟವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

- Advertisement -
- Advertisement -

ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆ -2025ರ ಕುರಿತ ಚರ್ಚೆಗೆ ಜಮ್ಮು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಅವಕಾಶ ನಿರಾಕರಿಸಿದ್ದು, ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ. ಇದರಿಂದ ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿದೆ.

12 ದಿನಗಳ ವಿರಾಮದ ನಂತರ ಸೋಮವಾರ ವಿಧಾನಸಭೆಯಲ್ಲಿ ಕಲಾಪಗಳು ಪುನರಾರಂಭವಾದಾಗ, ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಎಎಪಿ ಮತ್ತು ಸ್ವತಂತ್ರರು ಸೇರಿದಂತೆ ಎಲ್ಲಾ ಶಾಸಕರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚಿಸಲು 10 ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು.

“ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಸಲು ನಾವು (ಕನಿಷ್ಠ 10-12 ಸದಸ್ಯರು) ನಿಲುವಳಿ ಸೂಚನೆಯನ್ನು ಮಂಡಿಸಿದ್ದೇವೆ. ನಾವು ಸಂಸತ್ತಿನ ಅಧಿಕಾರವನ್ನು ಪ್ರಶ್ನಿಸುತ್ತಿಲ್ಲ. ಆದರೆ, 56ನೇ ವಿಧಿಯ ಅಡಿಯಲ್ಲಿ, ಸಂಸತ್ತು ಅಂಗೀಕರಿಸಲ್ಪಟ್ಟ ವಿಷಯದ ಬಗ್ಗೆ ಮಾತನಾಡಲು ನಮಗೆ ಹಕ್ಕಿದೆ” ಎಂದು ಎನ್‌ಸಿಯ ಹಿರಿಯ ನಾಯಕ ಮತ್ತು ಶಾಸಕ ತನ್ವೀರ್ ಸಾದಿಕ್ ಹೇಳಿದರು.

ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳ ಬಗ್ಗೆ ವಿಧಾನಸಭೆ ಚರ್ಚಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೂ, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆಗಳು ಜಿಎಸ್‌ಟಿ ಮತ್ತು ಕೃಷಿ ಕಾನೂನುಗಳಂತಹ ಕೇಂದ್ರ ಕಾನೂನುಗಳ ಬಗ್ಗೆ ಈ ಹಿಂದೆ ಚರ್ಚಿಸಿದ್ದವು ಎಂದು ಸಾದಿಕ್ ಹಿಂದಿನ ಉದಾಹರಣೆಗಳನ್ನು ಉಲ್ಲೇಖಿಸಿದರು.

“ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಕೇಂದ್ರದ ಕಾನೂನುಗಳನ್ನು ಈ ಹಿಂದೆ ಚರ್ಚಿಸಲಾಗಿದೆ ಎಂದು ಸಾದಿಕ್ ಒತ್ತಿ ಹೇಳಿದರು. ಜಮ್ಮು ಕಾಶ್ಮೀರ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಿರುವುದರಿಂದ, ಸಂಸತ್ತು ಅಂಗೀಕರಿಸಿದ ವಕ್ಫ್ ಮಸೂದೆಯ ಚರ್ಚೆ ಇಲ್ಲಿ ಬಹಳ ಮುಖ್ಯ. ಅದು ಜಮ್ಮು ಕಾಶ್ಮೀರದ ಜನರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ, ನಾವು ಅದರ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗುವಂತೆ ನಿಲುವಳಿ ಸೂಚನೆ ಅಂಗೀಕರಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಸಾದಿಕ್ ಹೇಳಿದರು.

ಈ ನಡುವೆ, ಬಿಜೆಪಿ ಸದಸ್ಯರು ತಮ್ಮ ಆಸನಗಳಿಂದ ಎದ್ದು ನಿಂತು ವಕ್ಫ್‌ ಮಸೂದೆ ಕುರಿತ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು. ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ವಿಧಾನಸಭೆಯಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದರು. ಆಡಳಿತ ಮೈತ್ರಿಕೂಟ ಮತ್ತು ಬಿಜೆಪಿ ಸದಸ್ಯರು ಇಬ್ಬರೂ ತಮ್ಮ ನಿಲುವುಗಳಿಗೆ ಅಂಟಿಕೊಂಡಿದ್ದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು.

ಗದ್ದಲದ ನಡುವೆಯೇ, ರಾಷ್ಟ್ರಪತಿಗಳ ಸಹಿ ಬಿದ್ದು ಕಾನೂನಾಗಿ ಮಾರ್ಪಟ್ಟಿರುವ ಮಸೂದೆಯ ಕುರಿತು ಚರ್ಚೆ ಕೋರಿ ಒಂಬತ್ತು ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಗಳನ್ನು ತಾನು ಸ್ವೀಕರಿಸಿರುವುದಾಗಿ ಸ್ಪೀಕರ್ ರಾಥರ್ ಸ್ಪಷ್ಟಪಡಿಸಿದರು.

ಆದರೆ, ಚರ್ಚೆಗೆ ಅವಕಾಶ ನೀಡ ಸ್ಪೀಕರ್, “ನಿಯಮ 58 ಉಪ-ನಿಯಮ 7ರ ಪ್ರಕಾರ, ನ್ಯಾಯಾಲಯದಲ್ಲಿರುವ ವಿಷಯದ ಕುರಿತ ಚರ್ಚೆಯನ್ನು ನಿಲುವಳಿ ಸೂಚನೆ ಮೂಲಕ ಕೈಗೆತ್ತಿಕೊಳ್ಳಲಯ ಸಾಧ್ಯವಿಲ್ಲ” ಎಂದರು. ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಗಳ ಪ್ರತಿಗಳು ನನ್ನ ಬಳಿ ಇವೆ ಎಂದು ತಿಳಿಸಿದರು.

ಕಾನೂನು ಆಗಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಾಂವಿಧಾನಿಕವಾಗಿದೆಯೇ ಎಂಬುದನ್ನು ನಿರ್ಧರಿಸುವುದು ಸುಪ್ರೀಂ ಕೋರ್ಟ್‌ಗೆ ಬಿಟ್ಟದ್ದು ಎಂದು ಅವರು ಒತ್ತಿ ಹೇಳಿದರು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...