Homeಮುಖಪುಟ'ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ': ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ...

‘ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ’: ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ ಬ್ಯಾನರ್ಜಿ

- Advertisement -
- Advertisement -

“ಜೈಲಿಗೆ ಹೋದರೂ ಸರಿ, ಅರ್ಹರು ಶಾಲಾ ಉದ್ಯೋಗ ಕಳೆದುಕೊಳ್ಳಲು ನಾನು ಬಿಡುವುದಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016ರಲ್ಲಿ ರಾಜ್ಯದ ಶಾಲೆಗಳಿಗೆ ನೇಮಕ ಮಾಡಿದ ಶಿಕ್ಷಕರೂ ಸೇರಿದಂತೆ 25,000ಕ್ಕೂ ಹೆಚ್ಚು ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎತ್ತಿಹಿಡಿದಿದೆ.

ಈ ಹಿನ್ನೆಲೆ, ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಕೆಲಸ ಕಳೆದುಕೊಂಡವರನ್ನು ಸೋಮವಾರ (ಏ.7) ಭೇಟಿ ಮಾಡಿದ ಸಿಎಂ ಮಮತಾ ಬ್ಯಾನರ್ಜಿ “ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಒಪ್ಪಿಕೊಂಡಿದ್ದೇವೆ ಎಂದು ದಯವಿಟ್ಟು ಭಾವಿಸಬೇಡಿ. ಅರ್ಹ ಅಭ್ಯರ್ಥಿಗಳು ಕೆಲಸ ಕಳೆದುಕೊಳ್ಳಲೋ, ವಿರಾಮ ಪಡೆಯಲೋ ನಾನು ಬಿಡುವುದಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನಿಂದ ಎದುರಾಗಿರುವ ಸವಾಲುಗಳ ಹೊರತಾಗಿಯೂ, ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ಕಾಳಜಿಯಿಂದ ಪರಿಹರಿಸಲು ರಾಜ್ಯ ಸರ್ಕಾರದ ಬಳಿ ಪ್ರತ್ಯೇಕ ಯೋಜನೆಯಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೆಲಸ ಕಳೆದುಕೊಂಡವರ ಘನತೆಯನ್ನು ಪುನಃಸ್ಥಾಪಿಸುವ ತನ್ನ ಅಚಲ ನಿಲುವನ್ನು ಒತ್ತಿ ಹೇಳಿದ ಮಮತಾ, ಸಮಸ್ಯೆಗೆ ಸಿಲುಕಿದವರ ಪರ ನಿಲ್ಲಲು ಯಾವುದೇ ಕಾನೂನು ಪರಿಣಾಮಗಳನ್ನು ಎದುರಿಸಲು ಸಿದ್ಧ ಎಂದು ಎಂದಿದ್ದಾರೆ.

“ನಾವು ಕಲ್ಲು ಹೃದಯಿಗಳಲ್ಲ… ಇದನ್ನು ಹೇಳಿದ್ದಕ್ಕಾಗಿ ನನ್ನನ್ನು ಜೈಲಿಗೆ ಹಾಕಬಹುದು, ಆದರೆ ನನಗೆ ಅದು ಮುಖ್ಯವಲ್ಲ. ನಾನು ನ್ಯಾಯಾಂಗವನ್ನು ಗೌರವಿಸುತ್ತೇನೆ. ಆದರೆ, ಈ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದ ಮಮತಾ ಬ್ಯಾನರ್ಜಿ ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಎಷ್ಟು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ? ಬಂಗಾಳವನ್ನು ಏಕೆ ಗುರಿಯಾಗಿಸಿಕೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮತ್ತು ಕೇಂದ್ರ ಸಂಸ್ಥೆಗಳು ಬಂಗಾಳದ ಶಿಕ್ಷಣ ವ್ಯವಸ್ಥೆಯನ್ನು ಹಾಳುಗಡೆವಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ, ಮಾನವೀಯತೆ ಆಧಾರದಲ್ಲಿ ಕೆಲಸ ಕಳೆದುಕೊಂಡ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದಾರೆ.

“ನೀವು ಸಿದ್ಧರಿದ್ದರೆ ನನ್ನನ್ನು ಹಿಡಿಯಿರಿ. ನಮ್ಮ ವಕೀಲರು ತೀರ್ಪನ್ನು ಪರಿಶೀಲಿಸುತ್ತಿದ್ದಾರೆ. ನಾನು ಅಭ್ಯರ್ಥಿಗಳೊಂದಿಗಿದ್ದೇನೆ… ಅದಕ್ಕಾಗಿ ಬಿಜೆಪಿ ನನ್ನನ್ನು ಜೈಲಿಗೆ ಹಾಕಲು ಬಯಸಿದರೆ, ಹಾಗೆಯೇ ಆಗಲಿ” ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಸಿಪಿಎಂ ಈ ಬಿಕ್ಕಟ್ಟನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

“ಪ್ರಚೋದಕರು ಮುಖ್ಯಮಂತ್ರಿ ಸಂಕಷ್ಟಕ್ಕೀಡಾದ ಜನರನ್ನು ಭೇಟಿಯಾಗದಂತೆ ತಡೆಯಬಹುದು ಎಂಬ ಮಾಹಿತಿ ಇದೆ. ಇದು ಜನರು ಬಿಕ್ಕಟ್ಟಿನಿಂದ ಹೊರಬರದಂತೆ ತಡೆಯುವ ಪಿತೂರಿಯಾಗಿದೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ. ಮಮತಾ ಬ್ಯಾನರ್ಜಿಯವರ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಭೇಟಿಯ ಸಮಯದಲ್ಲಿ ಇದೇ ರೀತಿಯ ಅಡೆತಡೆಗಳನ್ನು ಉಲ್ಲೇಖಿಸಿ ಘೋಷ್ ಹೇಳಿಕೆ ನೀಡಿದ್ದರು.

ವಂಚನೆಯ ಮೂಲಕ ಉದ್ಯೋಗ ಗಳಿಸಿದ್ದಾರೆಂದು ಸಾಬೀತಾದ ಅಭ್ಯರ್ಥಿಗಳನ್ನು ಮಾತ್ರ ವಜಾಗೊಳಿಸಬೇಕು ಮತ್ತು ಅವರ ಸಂಬಳವನ್ನು ವಾಪಸ್ ಪಡೆಯಬೇಕು. ಆದರೆ, ಕಳಂಕವಿಲ್ಲದವರು ತಮ್ಮ ಸಂಬಳವನ್ನು ಉಳಿಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅರ್ಹ ವ್ಯಕ್ತಿಗಳು ಈ ಹಿಂದಿನ ಸರ್ಕಾರಿ ಹುದ್ದೆಗಳನ್ನು ಹೊಂದಿದ್ದರೆ ಅವುಗಳಿಗೆ ಮರಳಲು ಸಹ ಅವಕಾಶವಿದೆ ಎಂದಿದೆ.

ಬಂಗಾಳ ಸರ್ಕಾರದ್ದು ಸೇರಿದಂತೆ 120ಕ್ಕೂ ಹೆಚ್ಚು ಅರ್ಜಿಗಳನ್ನು ವಿಚಾರಣೆ ನಡೆಸಿದ ನಂತರ ತೀರ್ಪು ಬಂದಿದೆ. ಒಎಂಆರ್ ಹಾಳೆಗಳನ್ನು ತಿರುಚುವುದು, ಮಂಜೂರಾದ ಖಾಲಿ ಹುದ್ದೆಗಳನ್ನು ಮೀರಿದ ನೇಮಕಾತಿಗಳು ಮತ್ತು ಇತರ ಅಕ್ರಮಗಳನ್ನು ನ್ಯಾಯಾಲಯ ಗಮನಿಸಿದೆ. 24,640 ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರೆ, 25,700ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಾಗಿದೆ.

ತ್ರಿಪುರಾದಲ್ಲಿ ಸಿಪಿಎಂ ಆಡಳಿತದ ಅವಧಿಯಲ್ಲಿ 10,323 ಶಿಕ್ಷಕರು ಉದ್ಯೋಗ ಕಳೆದುಕೊಂಡಾಗ, ಕೆಲವರ ತಪ್ಪಿಗೆ ಎಲ್ಲರನ್ನೂ ಶಿಕ್ಷಿಸಬೇಡಿ ಎಂದು ಪಕ್ಷವು ನ್ಯಾಯಾಲಯಗಳನ್ನು ಒತ್ತಾಯಿಸಿತ್ತು. ಈಗ ಬಂಗಾಳದಲ್ಲಿ ಅವರು ಇದಕ್ಕೆ ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದಾರೆ. ನಾವು ಅನರ್ಹರನ್ನು ರಕ್ಷಿಸುವುದಿಲ್ಲ, ಆದರೆ ನ್ಯಾಯಯುತವಾಗಿ ನೇಮಕಗೊಂಡ 20,000ಕ್ಕೂ ಹೆಚ್ಚು ಶಿಕ್ಷಕರ ಪರವಾಗಿ ನಾವು ಯಾವಾಗಲೂ ನಿಲ್ಲುತ್ತೇವೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016 ರಲ್ಲಿ ನೇಮಕ ಮಾಡಿದ್ದ ಸುಮಾರು 25,000 ( 25,753) ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಅಮಾನ್ಯಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 3ರಂದು ಎತ್ತಿಹಿಡಿದಿದೆ.

ಶಾಲೆಗಳಲ್ಲಿನ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ.

“ಇಡೀ ನೇಮಕಾತಿ ಪ್ರಕ್ರಿಯೆ ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ. ನೇಮಕಾತಿಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ. ಅದನ್ನು ಮುಚ್ಚಿ ಹಾಕಲು ಇಡೀ ಆಯ್ಕೆ ಪ್ರಕ್ರಿಯೆಯನ್ನು ಹಾಳುಗೆಡವಲಾಗಿದೆ. ಆಯ್ಕೆ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ನಗ್ನಗೊಳಿಸಿದೆ” ಎಂದು ತೀರ್ಪು ಪ್ರಕಟಿಸುತ್ತಾ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

ತನ್ನ ಮೇಲಿನ ಎಫ್‌ಐಆರ್ ವಿರುದ್ಧ ಬಾಂಬೆ ಹೈಕೋರ್ಟ್‌ ಮೊರೆ ಹೋದ ಕುನಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...