Homeಅಂತರಾಷ್ಟ್ರೀಯಅಮೆರಿಕದ 'ಸುಂಕ ಹೇರಿಕೆ'ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

- Advertisement -
- Advertisement -

ಅಮೆರಿಕದ ಜೊತೆಗಿನ ವ್ಯಾಪಾರ ಯುದ್ದಕ್ಕೆ ಚೀನಾ ಭಾರತದ ಬೆಂಬಲ ಕೋರಿದೆ. ಅಮೆರಿಕದ ಪ್ರತಿ ಸುಂಕ ಹೇರಿಕೆಯನ್ನು ಭಾರತ ಮತ್ತು ಚೀನಾ ಜೊತೆಯಾಗಿ ವಿರೋಧಿಸಬೇಕು ಎಂದು ಹೇಳಿದೆ.

“ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಸಂಬಂಧವು ಪರಸ್ಪರ ಲಾಭದಾಯಕವಾಗಿ ಮತ್ತು ಪೂರಕ ವಾತಾವರಣವನ್ನು ಹೊಂದಿದೆ. ಜಾಗತಿಕ ದಕ್ಷಿಣ ದೇಶಗಳು, ವಿಶೇಷವಾಗಿ ಅಭಿವೃದ್ದಿ ಹೊಂದುತ್ತಿರುವ ಈ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡಿರುವ ಅಮೆರಿಕದ ವಿರುದ್ದ ಜಂಟಿಯಾಗಿ ಹೋರಾಡಬೇಕಿದೆ” ಎಂದು ನವದೆಹಲಿಯಲ್ಲಿರುವ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ರಾಯಭಾರ ಕಚೇರಿಯ ವಕ್ತಾರೆ ಯು ಜಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕದ ಮೇಲೆ ವಿಧಿಸಿರುವ ಶೇಕಡ 34ರಷ್ಟು ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಚೀನಾದ ರಫ್ತಿನ ಮೇಲೆ ಹೆಚ್ಚುವರಿಯಾಗಿ ಶೇಕಡ 50ರಷ್ಟು ಸುಂಕ ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದರು.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಕಳೆದ ವಾರ ಡೊನಾಲ್ಡ್ ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿದೆ. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿದೆ. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾ “ನಾವು ಸುಂಕ ವಿಧಿಸಿರುವುದನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ. ಕೊನೆವರೆಗೆ ಹೋರಾಡುತ್ತೇವೆ” ಎಂದಿತ್ತು. ಚೀನಾ ತನ್ನ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆ ಅಮೆರಿಕ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದೆ ಎಂದು ವರದಿಯಾಗಿದೆ. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ 20%+34%+50%=104% ಆಗಿದೆ.

“ಸ್ಥಿರ ಬೆಳವಣಿಗೆಯನ್ನು ಖಾತ್ರಿಪಡಿಸುವ ಮತ್ತು ಸಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡುವ ವ್ಯವಸ್ಥೆಯಿಂದ ಚೀನಾದ ಆರ್ಥಿಕತೆಯು ಬೆಂಬಲಿತವಾಗಿದೆ. ಚೀನಾದ ಉತ್ಪಾದನೆಯು ನಿರಂತರವಾಗಿ ನವೀಕರಿಸಲ್ಪಡುವ ಕೈಗಾರಿಕಾ ವ್ಯವಸ್ಥೆ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಿರಂತರ ಹೂಡಿಕೆ ಮತ್ತು ನಾವೀನ್ಯತೆಯನ್ನು ಆಧರಿಸಿದೆ” ಎಂದು ಯು ಜಿಂಗ್ ಹೇಳಿದ್ದಾರೆ.

“ಚೀನಾ ಆರ್ಥಿಕ ಜಾಗತೀಕರಣ ಮತ್ತು ಬಹುಪಕ್ಷೀಯತೆಯ ಹೊಂದಿದೆ. ವಿಶ್ವ ಆರ್ಥಿಕತೆಯ ಪಾಲುದಾರನಾಗಿದೆ. ವಾರ್ಷಿಕವಾಗಿ ಸರಾಸರಿ ಜಾಗತಿಕ ಬೆಳವಣಿಗೆಗೆ ಸುಮಾರು ಶೇ.30ರಷ್ಟು ಕೊಡುಗೆ ನೀಡುತ್ತಿದೆ. ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯನ್ನು ರಕ್ಷಿಸಲು ನಾವು ಪ್ರಪಂಚದ ಉಳಿದ ಭಾಗಗಳೊಂದಿಗೆ ಕೆಲಸ ಮಾಡುವುದನ್ನು ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮೂಲಕ ಮುಂದುವರೆಸುತ್ತೇವೆ” ಎಂದಿದ್ದಾರೆ.

ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಚೀನಾ ಮೇಲೆ ಶೇ.32ರಷ್ಟು ಪ್ರತಿ ಸುಂಕ ವಿಧಿಸಲಾಗಿದೆ. ಭಾರತ ಪ್ರತಿ ಸುಂಕವನ್ನು ಒಪ್ಪಿಕೊಂಡು ಸುಮ್ಮನಾಗಿದೆ. ಆದರೆ, ಚೀನಾ ಸೇರಿದಂತೆ ಕೆಲ ರಾಷ್ಟ್ರಗಳು ಅಮೆರಿಕದ ವಿರುದ್ಧ ವ್ಯಾಪಾರ ಸಮರ ಸಾರಿದೆ.

‘ಪ್ರತಿಭಟನಾಕಾರರಿಗೆ ಹಣ ನೀಡಲಾಗಿದೆ..’; ಅಮೆರಿಕದ ‘ಹ್ಯಾಂಡ್ಸ್ ಆಫ್’ ಬಗ್ಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...