Homeಮುಖಪುಟಜಮ್ಮು ಕಾಶ್ಮೀರ | ವಕ್ಫ್ ಕಾಯ್ದೆ ಕುರಿತ ಸಭೆಗೆ ಅನುಮತಿ ನೀಡದ ಆಡಳಿತ; ಸಭೆ ನಡೆಯಲಿರುವ...

ಜಮ್ಮು ಕಾಶ್ಮೀರ | ವಕ್ಫ್ ಕಾಯ್ದೆ ಕುರಿತ ಸಭೆಗೆ ಅನುಮತಿ ನೀಡದ ಆಡಳಿತ; ಸಭೆ ನಡೆಯಲಿರುವ ಸ್ಥಳ ಸೀಲ್ ಮಾಡಿದ ಅಧಿಕಾರಿಗಳು!

- Advertisement -
- Advertisement -

ವಿವಾದಾತ್ಮಕ ವಕ್ಫ್ ಕಾಯ್ದೆಯ ಕುರಿತು ಸಭೆ ನಡೆಸಲು ಧಾರ್ಮಿಕ ಸಂಘಟನೆಗಳಿಗೆ ಜಮ್ಮು ಕಾಶ್ಮೀರ ಅಧಿಕಾರಿಗಳು ಅವಕಾಶ ನೀಡಲಿಲ್ಲ ಎಂದು ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷರಾದ ಮಿರ್ವೈಜ್ ಉಮರ್ ಫಾರೂಕ್ ಅವರ ಕಚೇರಿ ಬುಧವಾರ ತಿಳಿಸಿದೆ. ಹಲವಾರು ಧಾರ್ಮಿಕ ಸಂಘಟನೆಗಳ ಒಕ್ಕೂಟವಾದ ಮುತಾಹಿದಾ ಮಜ್ಲಿಸ್-ಎ-ಉಲೇಮಾ (ಎಂಎಂಯು) ಈ ಸಭೆ ನಡೆಸಿ ವಕ್ಫ್ ಕಾಯ್ದೆಯ ಬಗ್ಗೆ ಚರ್ಚಿಸಲು ತೀರ್ಮಾನಿಸಿದ್ದರು ಎಂದು ವರದಿ ಹೇಳಿದೆ.

ಮಿರ್ವೈಜ್ ಅವರು ಜಮ್ಮು ಕಾಶ್ಮೀರದ ಪ್ರಮುಖ ಧಾರ್ಮಿಕ ಮುಖಂಡ ಕೂಡಾ ಆಗಿದ್ದು, ಶ್ರೀನಗರದ ನೈಜೀನ್ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಎಂಎಂಯು ಸಭೆ ಸೇರಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಮಿರ್ವೈಜ್ ಅವರ ಕಚೇರಿ, “ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಮಿರ್ವೈಜ್ ಅವರ ನಿವಾಸದಲ್ಲಿ ಮುತಾಹಿದಾ ಮಜ್ಲಿಸ್-ಎ-ಉಲೇಮಾ (MMU) ನಡೆಸುವ ಮಹತ್ವದ ಸಭೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಅವರ ಕಚೇರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದೆ.

ಮಿರ್ವೈಜ್ ನಿವಾಸಕ್ಕೆ ಹೋಗುವ ಎಲ್ಲಾ ರಸ್ತೆಗಳು ಮತ್ತು ಒಳರಸ್ತೆಗಳನ್ನು “ಸೀಲ್ ಮಾಡಲಾಗಿದೆ” ಎಂದು ಅದು ಹೇಳಿದೆ. “ಇತ್ತೀಚೆಗೆ ಅಂಗೀಕರಿಸಲಾದ ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಗಂಭೀರ ಆತಂಕಗಳನ್ನು ಚರ್ಚಿಸುವ ಉದ್ದೇಶದಿಂದ ಲಡಾಖ್, ಕಾರ್ಗಿಲ್ ಮತ್ತು ಜಮ್ಮು ಪ್ರದೇಶ ಸೇರಿದಂತೆ ಜಮ್ಮು ಕಾಶ್ಮೀರದ ಎಲ್ಲಾ ಜಿಲ್ಲೆಗಳ ಧಾರ್ಮಿಕ ಪ್ರತಿನಿಧಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲು ತಲುಪಿದ್ದರು” ಎಂದು ಅದು ಹೇಳಿದೆ.

ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ, ಕಣಿವೆಯಲ್ಲಿರುವ ಮುಸ್ಲಿಂ ವಿದ್ವಾಂಸರಿಗೆ ಇಂತಹ ಗಂಭೀರ ವಿಷಯದ ಬಗ್ಗೆ ಚರ್ಚಿಸುವ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಮಿರ್ವೈಜ್ ಹೇಳಿದ್ದಾರೆ.

“ಈ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸ್ಲಿಂ ವಿದ್ವಾಂಸರು ಮತ್ತು ಧಾರ್ಮಿಕ ಸಂಸ್ಥೆಗಳು ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಲು ಮತ್ತು ಶಾಂತಿಯುತವಾಗಿ ಪ್ರತಿಕ್ರಿಯಿಸುವ ಚರ್ಚೆಯನ್ನು ಸಹ ನಿಷೇಧಿಸಲಾಗಿದೆ ಎಂಬುದು ವಿಚಿತ್ರವಾಗಿದೆ. ಪ್ರತಿಯೊಂದು ರಾಜಕೀಯ ಪಕ್ಷವು ಭಾರತೀಯ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿದೆ. ಇಂತಹದ್ದೆ ಹಕ್ಕನ್ನು ಜಮ್ಮು ಕಾಶ್ಮೀರದ ಮುಸ್ಲಿಂ ರಾಜಕೀಯ ಮತ್ತು ಧಾರ್ಮಿಕ ಪ್ರತಿನಿಧಿಗಳಿಗೂ ವಿಸ್ತರಿಸಬೇಕು” ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ.

“ಎಲ್ಲಾ ಸದಸ್ಯರೊಂದಿಗೆ ಸಮಾಲೋಚಿಸಿ ಸಿದ್ಧಪಡಿಸಲಾದ ಈ ವಿಷಯದ ಕುರಿತು ಜಂಟಿ ನಿರ್ಣಯವನ್ನು ಮಸೀದಿಗಳಲ್ಲಿ ಮತ್ತು ಎಲ್ಲಾ ಧಾರ್ಮಿಕ ಸಭೆಗಳಲ್ಲಿ ಬರುವ ಶುಕ್ರವಾರ ಓದಲಾಗುವುದು ಎಂದು MMU ನಿರ್ಧರಿಸಿದೆ. MMU ತನ್ನ ಸಂಪೂರ್ಣ ಬೆಂಬಲವನ್ನು ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ಗೆ ನೀಡುತ್ತದೆ. ಹೊಸ ಕಾನೂನಿನಿಂದ ಉದ್ಭವಿಸುವ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತವೆಂದು ಭಾವಿಸುವ ಯಾವುದೇ ಕ್ರಮಕೈಗೊಳ್ಳುವುದಿದ್ದರೆ ಎಂಎಂಯು ಅವರ ಪರವಾಗಿ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ (AIMPLB), ಇತರ ಮುಸ್ಲಿಂ ಸಂಘಟನೆಗಳು ಮತ್ತು ರಾಜಕಾರಣಿಗಳು ಈಗಾಗಲೆ ವಕ್ಫ್ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಏಪ್ರಿಲ್ 15 ರಂದು ಸುಪ್ರಿಂಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ. ಜಮ್ಮು ಕಾಶ್ಮೀರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...