Homeಮುಖಪುಟಜಮ್ಮು ಕಾಶ್ಮೀರ | ವಕ್ಫ್ ಕಾಯ್ದೆ ಕುರಿತ ಸಭೆಗೆ ಅನುಮತಿ ನೀಡದ ಆಡಳಿತ; ಸಭೆ ನಡೆಯಲಿರುವ...

ಜಮ್ಮು ಕಾಶ್ಮೀರ | ವಕ್ಫ್ ಕಾಯ್ದೆ ಕುರಿತ ಸಭೆಗೆ ಅನುಮತಿ ನೀಡದ ಆಡಳಿತ; ಸಭೆ ನಡೆಯಲಿರುವ ಸ್ಥಳ ಸೀಲ್ ಮಾಡಿದ ಅಧಿಕಾರಿಗಳು!

- Advertisement -
- Advertisement -

ವಿವಾದಾತ್ಮಕ ವಕ್ಫ್ ಕಾಯ್ದೆಯ ಕುರಿತು ಸಭೆ ನಡೆಸಲು ಧಾರ್ಮಿಕ ಸಂಘಟನೆಗಳಿಗೆ ಜಮ್ಮು ಕಾಶ್ಮೀರ ಅಧಿಕಾರಿಗಳು ಅವಕಾಶ ನೀಡಲಿಲ್ಲ ಎಂದು ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷರಾದ ಮಿರ್ವೈಜ್ ಉಮರ್ ಫಾರೂಕ್ ಅವರ ಕಚೇರಿ ಬುಧವಾರ ತಿಳಿಸಿದೆ. ಹಲವಾರು ಧಾರ್ಮಿಕ ಸಂಘಟನೆಗಳ ಒಕ್ಕೂಟವಾದ ಮುತಾಹಿದಾ ಮಜ್ಲಿಸ್-ಎ-ಉಲೇಮಾ (ಎಂಎಂಯು) ಈ ಸಭೆ ನಡೆಸಿ ವಕ್ಫ್ ಕಾಯ್ದೆಯ ಬಗ್ಗೆ ಚರ್ಚಿಸಲು ತೀರ್ಮಾನಿಸಿದ್ದರು ಎಂದು ವರದಿ ಹೇಳಿದೆ.

ಮಿರ್ವೈಜ್ ಅವರು ಜಮ್ಮು ಕಾಶ್ಮೀರದ ಪ್ರಮುಖ ಧಾರ್ಮಿಕ ಮುಖಂಡ ಕೂಡಾ ಆಗಿದ್ದು, ಶ್ರೀನಗರದ ನೈಜೀನ್ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಎಂಎಂಯು ಸಭೆ ಸೇರಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಮಿರ್ವೈಜ್ ಅವರ ಕಚೇರಿ, “ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಮಿರ್ವೈಜ್ ಅವರ ನಿವಾಸದಲ್ಲಿ ಮುತಾಹಿದಾ ಮಜ್ಲಿಸ್-ಎ-ಉಲೇಮಾ (MMU) ನಡೆಸುವ ಮಹತ್ವದ ಸಭೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಅವರ ಕಚೇರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ” ಎಂದು ಹೇಳಿದೆ.

ಮಿರ್ವೈಜ್ ನಿವಾಸಕ್ಕೆ ಹೋಗುವ ಎಲ್ಲಾ ರಸ್ತೆಗಳು ಮತ್ತು ಒಳರಸ್ತೆಗಳನ್ನು “ಸೀಲ್ ಮಾಡಲಾಗಿದೆ” ಎಂದು ಅದು ಹೇಳಿದೆ. “ಇತ್ತೀಚೆಗೆ ಅಂಗೀಕರಿಸಲಾದ ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಗಂಭೀರ ಆತಂಕಗಳನ್ನು ಚರ್ಚಿಸುವ ಉದ್ದೇಶದಿಂದ ಲಡಾಖ್, ಕಾರ್ಗಿಲ್ ಮತ್ತು ಜಮ್ಮು ಪ್ರದೇಶ ಸೇರಿದಂತೆ ಜಮ್ಮು ಕಾಶ್ಮೀರದ ಎಲ್ಲಾ ಜಿಲ್ಲೆಗಳ ಧಾರ್ಮಿಕ ಪ್ರತಿನಿಧಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲು ತಲುಪಿದ್ದರು” ಎಂದು ಅದು ಹೇಳಿದೆ.

ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ, ಕಣಿವೆಯಲ್ಲಿರುವ ಮುಸ್ಲಿಂ ವಿದ್ವಾಂಸರಿಗೆ ಇಂತಹ ಗಂಭೀರ ವಿಷಯದ ಬಗ್ಗೆ ಚರ್ಚಿಸುವ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಮಿರ್ವೈಜ್ ಹೇಳಿದ್ದಾರೆ.

“ಈ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಮುಸ್ಲಿಂ ವಿದ್ವಾಂಸರು ಮತ್ತು ಧಾರ್ಮಿಕ ಸಂಸ್ಥೆಗಳು ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಲು ಮತ್ತು ಶಾಂತಿಯುತವಾಗಿ ಪ್ರತಿಕ್ರಿಯಿಸುವ ಚರ್ಚೆಯನ್ನು ಸಹ ನಿಷೇಧಿಸಲಾಗಿದೆ ಎಂಬುದು ವಿಚಿತ್ರವಾಗಿದೆ. ಪ್ರತಿಯೊಂದು ರಾಜಕೀಯ ಪಕ್ಷವು ಭಾರತೀಯ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿದೆ. ಇಂತಹದ್ದೆ ಹಕ್ಕನ್ನು ಜಮ್ಮು ಕಾಶ್ಮೀರದ ಮುಸ್ಲಿಂ ರಾಜಕೀಯ ಮತ್ತು ಧಾರ್ಮಿಕ ಪ್ರತಿನಿಧಿಗಳಿಗೂ ವಿಸ್ತರಿಸಬೇಕು” ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ.

“ಎಲ್ಲಾ ಸದಸ್ಯರೊಂದಿಗೆ ಸಮಾಲೋಚಿಸಿ ಸಿದ್ಧಪಡಿಸಲಾದ ಈ ವಿಷಯದ ಕುರಿತು ಜಂಟಿ ನಿರ್ಣಯವನ್ನು ಮಸೀದಿಗಳಲ್ಲಿ ಮತ್ತು ಎಲ್ಲಾ ಧಾರ್ಮಿಕ ಸಭೆಗಳಲ್ಲಿ ಬರುವ ಶುಕ್ರವಾರ ಓದಲಾಗುವುದು ಎಂದು MMU ನಿರ್ಧರಿಸಿದೆ. MMU ತನ್ನ ಸಂಪೂರ್ಣ ಬೆಂಬಲವನ್ನು ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ಗೆ ನೀಡುತ್ತದೆ. ಹೊಸ ಕಾನೂನಿನಿಂದ ಉದ್ಭವಿಸುವ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತವೆಂದು ಭಾವಿಸುವ ಯಾವುದೇ ಕ್ರಮಕೈಗೊಳ್ಳುವುದಿದ್ದರೆ ಎಂಎಂಯು ಅವರ ಪರವಾಗಿ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ (AIMPLB), ಇತರ ಮುಸ್ಲಿಂ ಸಂಘಟನೆಗಳು ಮತ್ತು ರಾಜಕಾರಣಿಗಳು ಈಗಾಗಲೆ ವಕ್ಫ್ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಏಪ್ರಿಲ್ 15 ರಂದು ಸುಪ್ರಿಂಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ. ಜಮ್ಮು ಕಾಶ್ಮೀರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...