Homeಮುಖಪುಟಹಿಂದೆಂದೂ ಕಂಡರಿಯದ 'ವಂಚನೆ'ಯ ಮೂಲಕ ಮಹಾರಾಷ್ಟ್ರ ಚುನಾವಣೆ ಬಿಜೆಪಿ ಗೆದ್ದಿದೆ: ಮಲ್ಲಿಕಾರ್ಜುನ ಖರ್ಗೆ

ಹಿಂದೆಂದೂ ಕಂಡರಿಯದ ‘ವಂಚನೆ’ಯ ಮೂಲಕ ಮಹಾರಾಷ್ಟ್ರ ಚುನಾವಣೆ ಬಿಜೆಪಿ ಗೆದ್ದಿದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಹಿಂದೆಂದೂ ಕಂಡರಿಯದ ‘ಮೋಸ’ದ ಮೂಲಕ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆರೋಪಿಸಿದ್ದು, ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕೆಂದು ತೀವ್ರವಾಗಿ ವಾದ ಮಂಡಿಸಿದ್ದಾರೆ. ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಎಐಸಿಸಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಮೋದಿ ಸರ್ಕಾರವು ತನ್ನ ಆಪ್ತ ಬಂಡವಾಳಶಾಹಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಆಸ್ತಿಗಳನ್ನು ‘ಮಾರಾಟ’ ಮಾಡುತ್ತಿದ್ದು, ಪ್ರಜಾಪ್ರಭುತ್ವವನ್ನು ನಿಧಾನವಾಗಿ ಕೊನೆಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ಇಡೀ ಜಗತ್ತು ಇವಿಎಂಗಳಿಂದ ಬ್ಯಾಲೆಟ್ ಪೇಪರ್‌ಗೆ ಬದಲಾಗುತ್ತಿದೆ. ಆದರೆ ನಾವು ಇವಿಎಂಗಳನ್ನು ಬಳಸುತ್ತಿದ್ದೇವೆ. ಇದೆಲ್ಲವೂ ವಂಚನೆ. ಅವರು ಅದನ್ನು ಸಾಬೀತುಪಡಿಸಲು ನಮ್ಮನ್ನು ಕೇಳುತ್ತಾರೆ. ನೀವು ಆಡಳಿತ ಪಕ್ಷಕ್ಕೆ ಪ್ರಯೋಜನಕಾರಿಯಾಗುವ ಮತ್ತು ವಿರೋಧ ಪಕ್ಷವನ್ನು ಅನಾನುಕೂಲಕ್ಕೆ ಒಳಪಡಿಸುವ ತಂತ್ರಗಳನ್ನು ರೂಪಿಸಿದ್ದೀರಿ” ಎಂದು ಖರ್ಗೆ ಹೇಳಿದ್ದಾರೆ.

ಅದಾಗ್ಯೂ, ಈ ದೇಶದ ಯುವಕರು ಧ್ವನಿಯೆತ್ತಿ ‘ನಮಗೆ ಬ್ಯಾಲೆಟ್ ಪೇಪರ್ ಬೇಕು ಎಂದು ಹೇಳುತ್ತಾರೆ’ ಎಂದು ಅವರು ಸಬರಮತಿ ನದಿಯ ದಡದಲ್ಲಿ ನಡೆಯುತ್ತಿರುವ ಪಕ್ಷದ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಏನಾಯಿತು. ಈ ಬಗ್ಗೆ ನಾವು ಎಲ್ಲೆಡೆ ಈ ಧ್ವನಿ ಎತ್ತಿದ್ದೇವೆ. ರಾಹುಲ್ ಗಾಂಧಿ ಈ ವಿಷಯವನ್ನು ತೀವ್ರವಾಗಿ ಎತ್ತಿದ್ದೇವೆ. ಅವರು ಯಾವ ರೀತಿಯ ಮತದಾರರ ಪಟ್ಟಿಯನ್ನು ಮಾಡಿದ್ದಾರೆ? ಮಹಾರಾಷ್ಟ್ರ ಚುನಾವಣೆ ವಂಚನೆಯಾಗಿದ್ದು, ಹರಿಯಾಣದಲ್ಲೂ ಅದೇ ಸಂಭವಿಸಿದೆ” ಎಂದು ಖರ್ಗೆ ಹೇಳಿದ್ದಾರೆ.

ಬಿಜೆಪಿ 90% ರಷ್ಟು ಸ್ಥಾನಗಳನ್ನು ಗೆದ್ದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಇದು ಹಿಂದೆಂದೂ ನಡೆದಿಲ್ಲ ಎಂದು ಅವರು ಹೇಳಿದ್ದಾರೆ. “ಮಹಾರಾಷ್ಟ್ರ ಚುನಾವಣೆಯಲ್ಲಿ ನಡೆದಂತಹ ವಂಚನೆ ಪ್ರಜಾಪ್ರಭುತ್ವವನ್ನು ನಾಶಮಾಡುವ ಗುರಿಯನ್ನು ಹೊಂದಿದೆ. ನಾವು ಅನ್ನು ಕಂಡುಹಿಡಿಯಲಿದ್ದು, ಕಳ್ಳ ಯಾವತ್ತಿದ್ದರೂ ಸಿಕ್ಕಿಬೀಳುತ್ತಾನೆ. ನಮ್ಮ ವಕೀಲರು ಮತ್ತು ನಾಯಕರು ಅದಕ್ಕಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಳೆದ 11 ವರ್ಷಗಳಲ್ಲಿ ಆಡಳಿತ ಪಕ್ಷವು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ, ಸರ್ಕಾರವು ಸಂಸತ್ತಿನ ಬಜೆಟ್ ಅಧಿವೇಶನವನ್ನು ತಮ್ಮ ಇಚ್ಛೆಯಂತೆ ನಡೆಸಿದೆ ಎಂದು ಅವರು ಆರೋಪಿಸಿದ್ದಾರೆ. “ಸಾಂವಿಧಾನಿಕ ಸಂಸ್ಥೆಗಳು ಮತ್ತು ತತ್ವಗಳ ಮೇಲೆ ದಾಳಿ ನಡೆಯುತ್ತಿದ್ದು, ಅವುಗಳನ್ನು ರಕ್ಷಿಸಲು ನಾವು ಹೋರಾಡಬೇಕಾಗಿದೆ” ಎಂದು ಖರ್ಗೆ ಹೇಳಿದ್ದಾರೆ.

“ಸ್ಪೀಕರ್ ಪ್ರತಿಪಕ್ಷ ನಾಯಕನ ಹೆಸರನ್ನು ಉಲ್ಲೇಖಿಸುತ್ತಾರೆ, ಆದರೆ ಅವರನ್ನು ಮಾತನಾಡಲು ಬಿಡಲಿಲ್ಲ. ಇದು ಪ್ರಜಾಪ್ರಭುತ್ವದಲ್ಲಿ ನಾಚಿಕೆಗೇಡಿನ ಸಂಗತಿ. ಪ್ರತಿಪಕ್ಷ ನಾಯಕರನ್ನು ಮಾತನಾಡಲು ಬಿಡದ ನೀವು ಜನರು ಧ್ವನಿ ಎತ್ತಲು ಹೇಗೆ ಬಿಡುತ್ತೀರಿ” ಎಂದು ಖರ್ಗೆ ಹೇಳಿದ್ದಾರೆ. ಜನರ ಸಮಸ್ಯೆಗಳನ್ನು ಚರ್ಚಿಸುವ ಬದಲು, ಸರ್ಕಾರವು ತನ್ನ ಕೋಮು ಧ್ರುವೀಕರಣದ ಕಾರ್ಯಸೂಚಿಗಾಗಿ ತಡರಾತ್ರಿಯವರೆಗೆ ಚರ್ಚೆ ನಡೆಸಿತು ಎಂದು ವಕ್ಫ್ (ತಿದ್ದುಪಡಿ) ಮಸೂದೆಯ ಮೇಲಿನ ಚರ್ಚೆಯನ್ನು ಉಲ್ಲೇಖಿಸಿ ಖರ್ಗೆ ಹೇಳಿದ್ದಾರೆ.

ಮಣಿಪುರದ ಕುರಿತು ಚರ್ಚೆ ಬೆಳಿಗ್ಗೆ 4 ಗಂಟೆಗೆ ನಡೆಯಿತು ಮತ್ತು ಮರುದಿನ ಅದನ್ನು ನಡೆಸಬೇಕೆಂದು ತಾವು ವಿನಂತಿಸಿದರು ಸರ್ಕಾರ ಅದಕ್ಕೆ ಒಪ್ಪಲಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರವು ಏನನ್ನೊ ಮರೆಮಾಡಲು ಬಯಸುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ. “ಪ್ರಜಾಪ್ರಭುತ್ವವನ್ನು ನಿಧಾನ-ನಿಧಾನವಾಗಿ ಮುಗಿಸಲಾಗುತ್ತಿದೆ” ಎಂದು ಖರ್ಗೆ ಆರೋಪಿಸಿದ್ದಾರೆ. ಹಿಂದೆಂದೂ ಕಂಡರಿಯದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...