Homeಮುಖಪುಟಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

ಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

- Advertisement -
- Advertisement -

ಜಾಗತಿಕ ವ್ಯಾಪಾರ ಸಮರಕ್ಕೆ ಕಾರಣವಾಗಿರುವ ‘ಪ್ರತಿ ಸುಂಕ’ ಜಾರಿಗೆ ಬಂದ 24 ಗಂಟೆಯೊಳಗೆ ಚೀನಾ ಹೊರತುಪಡಿಸಿ, ಇತರ ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ಸುಂಕ ವಿನಾಯಿತಿ ಘೋಷಿಸಿದ್ದಾರೆ.

ಇದೇ ವೇಳೆ ಚೀನಾ ಮೇಲಿನ ಸುಂಕವನ್ನು ಶೇಕಡ 125ರಷ್ಟು ಹೆಚ್ಚಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಚೀನಾ ಮೇಲೆ ಪ್ರತೀಕಾರ ತೀರಿಸಲು ಟ್ರಂಪ್ ಮುಂದಾಗಿದ್ದಾರೆ.

“ನಮ್ಮ ಪ್ರತಿಸುಂಕ ನೀತಿಗೆ ಪ್ರತೀಕಾರ ತೀರಿಸದ ದೇಶಗಳಿಗೆ ನಾವು 90 ದಿನಗಳ ವಿನಾಯಿತಿ ನೀಡಿದ್ದೇವೆ. ಪ್ರತೀಕಾರಕ್ಕೆ ಮುಂದಾದವರ ಮೇಲಿನ ಸುಂಕವನ್ನು ದ್ವಿಗುಣಗೊಳಿಸಿದ್ದೇವೆ”ಎಂದು ಚೀನಾ ಮೇಲೆ ಹೆಚ್ಚುವರಿ ಸುಂಕ ಘೋಷಣೆ ಮಾಡುವಾಗ ಟ್ರಂಪ್ ಹೇಳಿದ್ದಾರೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಏಪ್ರಿಲ್ 2ರಂದು ಟ್ರಂಪ್ ಪ್ರತಿ ಸುಂಕ ಘೋಷಣೆ ಮಾಡಿದ್ದರು. ಭಾರತದ ಮೇಲೆ ಶೇ.26 ಮತ್ತು ಚೀನಾ ಮೇಲೆ ಶೇ.34 ಪ್ರತಿಸುಂಕ ವಿಧಿಸಿದ್ದಾರೆ. ಹೊಸ ಸುಂಕ ನೀತಿ ಏಪ್ರಿಲ್ 9ರಿಂದ ಜಾರಿಗೆ ಬಂದಿದೆ.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿತ್ತು. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿತ್ತು. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಚೀನಾ ಅಮೆರಿಕದ ಬೆದರಿಕೆಗೆ ಸೊಪ್ಪು ಹಾಕದ ಕಾರಣ ಟ್ರಂಪ್ ಚೀನಾ ಮೇಲೆ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದ್ದರು. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ ಶೇ.104 ಆಗಿತ್ತು. ಚೀನಾ ಜೊತೆ ಪ್ರತೀಕಾರಕ್ಕೆ ಮುಂದಾಗಿರುವ ಟ್ರಂಪ್ ಸುಂಕವನ್ನು ಬುಧವಾರ ಶೇ.125ಕ್ಕೆ ಏರಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಚೀನಾ ಮೇಲೆ ಭಾರೀ ಪ್ರಮಾಣದ ಸುಂಕ ವಿಧಿಸಿದ ಬಳಿಕ “ಪ್ರತೀಕಾರಕ್ಕೆ ಮುಂದಾಗಬೇಡಿ, ಪ್ರತಿಫಲ ಸಿಗುತ್ತದೆ” ಎಂದು ಶ್ವೇತ ಭವನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟ್ರಂಪ್ ಸುಂಕ ವಿನಾಯಿತಿ ಘೋಷಿಸಿದ್ದು ಏಕೆ?

“ನಾವು ಪ್ರತಿ ಸುಂಕ ವಿಧಿಸಿದರೂ ಸುಮಾರು 75 ರಾಷ್ಟ್ರಗಳು ಪ್ರತಿಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿನಾಯಿತಿ ನೀಡಲಾಗಿದೆ. ಅಮೆರಿಕದ ಜೊತೆಗಿನ ವ್ಯಾಪಾರದ ಅಸಮತೋಲನ ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಪ್ರತಿ ಸುಂಕ ವಿಧಿಸಿದ ಬಳಿಕ 75 ರಾಷ್ಟ್ರಗಳು ಯುಎಸ್‌ ಪ್ರತಿನಿಧಿಗಳೊಂದಿಗೆ ವ್ಯಾಪಾರ ಅಡೆತಡೆಗಳು, ಕರೆನ್ಸಿ ಮೌಲ್ಯ, ಹೊಸ ಸುಂಕ ನೀತಿಯಿಂದ ಆದ ವ್ಯತ್ಯಾಸಗಳ ಬಗ್ಗೆ ಚರ್ಚಿಸಿವೆ. ಯಾವುದೇ ರಾಷ್ಟ್ರಗಳು ನಮ್ಮೊಂದಿಗೆ ಪ್ರತೀಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿರಾಮ ನೀಡಿದ್ದೇನೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುತ್‌ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಜಾಗತಿಕ ಮಾರುಕಟ್ಟೆಗೆ ಚೀನಾ ಅಗೌರವ ತೋರಿದೆ. ಅದಕ್ಕಾಗಿ ಅವರಿಗೆ ನಾವು ಶೇ. 125 ಸುಂಕ ವಿಧಿಸುತ್ತಿದ್ದೇವೆ. ಅಮೆರಿಕ ಸೇರಿದಂತೆ ಇತರ ದೇಶಗಳನ್ನು ಎದುರು ಹಾಕಿಕೊಂಡು ಮಾರುಕಟ್ಟೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂಬುವುದನ್ನು ಚೀನಾಕ್ಕೆ ಅರಿವಾಗಲಿದೆ” ಎಂದು ಟ್ರಂಪ್ ಹೇಳಿದ್ದಾರೆ.

ತಾನು ವಿಧಿಸಿದ ಪ್ರತಿ ಸುಂಕಕ್ಕೆ ಪ್ರತೀಕಾರ ತೋರದ ದೇಶಗಳಿಗೆ 90 ದಿನಗಳ ಸುಂಕ ವಿನಾಯಿತಿ ನೀಡಿದ್ದೇನೆ ಎಂದು ಟ್ರಂಪ್ ಹೇಳಿದ್ದರೂ, ತನ್ನ ವಿರುದ್ದ ಸಮರ ಸಾರಿರುವ ಚೀನಾಗೆ ಬುದ್ದಿ ಕಲಿಸಲು, ಇತರ ದೇಶಗಳಿಂದ ಅದನ್ನು ಒಬ್ಬಂಟಿಯಾಗಿಸಲು ಅಥವಾ ಅಮೆರಿಕ ವಿರುದ್ದದ ಹೋರಾಟಕ್ಕೆ ಚೀನಾಗೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಂತೆ ತಡೆಯಲು ಇತರ ದೇಶಗಳಿಗೆ ಟ್ರಂಪ್ ಸುಂಕ ವಿರಾಮ ಘೋಷಿಸಿದಂತೆ ಕಾಣುತ್ತಿದೆ.

ಏಕೆಂದರೆ, ಅಮೆರಿಕ ಚೀನಾ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಬಳಿಕ, “ಅಮೆರಿಕದ ಸುಂಕ ಹೇರಿಕೆ ವಿರುದ್ದ ಜೊತೆಯಾಗಿ ಹೋರಾಡೋಣ” ಎಂದು ಚೀನಾ ಭಾರತಕ್ಕೆ ಹೇಳಿತ್ತು.

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...