Homeಮುಖಪುಟಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

ಚೀನಾ ಮೇಲಿನ ಸುಂಕ ಶೇ.125ಕ್ಕೆ ಏರಿಸಿದ ಟ್ರಂಪ್: ಇತರ ದೇಶಗಳಿಗೆ 90 ದಿನಗಳ ವಿನಾಯಿತಿ

- Advertisement -
- Advertisement -

ಜಾಗತಿಕ ವ್ಯಾಪಾರ ಸಮರಕ್ಕೆ ಕಾರಣವಾಗಿರುವ ‘ಪ್ರತಿ ಸುಂಕ’ ಜಾರಿಗೆ ಬಂದ 24 ಗಂಟೆಯೊಳಗೆ ಚೀನಾ ಹೊರತುಪಡಿಸಿ, ಇತರ ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ಸುಂಕ ವಿನಾಯಿತಿ ಘೋಷಿಸಿದ್ದಾರೆ.

ಇದೇ ವೇಳೆ ಚೀನಾ ಮೇಲಿನ ಸುಂಕವನ್ನು ಶೇಕಡ 125ರಷ್ಟು ಹೆಚ್ಚಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಚೀನಾ ಮೇಲೆ ಪ್ರತೀಕಾರ ತೀರಿಸಲು ಟ್ರಂಪ್ ಮುಂದಾಗಿದ್ದಾರೆ.

“ನಮ್ಮ ಪ್ರತಿಸುಂಕ ನೀತಿಗೆ ಪ್ರತೀಕಾರ ತೀರಿಸದ ದೇಶಗಳಿಗೆ ನಾವು 90 ದಿನಗಳ ವಿನಾಯಿತಿ ನೀಡಿದ್ದೇವೆ. ಪ್ರತೀಕಾರಕ್ಕೆ ಮುಂದಾದವರ ಮೇಲಿನ ಸುಂಕವನ್ನು ದ್ವಿಗುಣಗೊಳಿಸಿದ್ದೇವೆ”ಎಂದು ಚೀನಾ ಮೇಲೆ ಹೆಚ್ಚುವರಿ ಸುಂಕ ಘೋಷಣೆ ಮಾಡುವಾಗ ಟ್ರಂಪ್ ಹೇಳಿದ್ದಾರೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಏಪ್ರಿಲ್ 2ರಂದು ಟ್ರಂಪ್ ಪ್ರತಿ ಸುಂಕ ಘೋಷಣೆ ಮಾಡಿದ್ದರು. ಭಾರತದ ಮೇಲೆ ಶೇ.26 ಮತ್ತು ಚೀನಾ ಮೇಲೆ ಶೇ.34 ಪ್ರತಿಸುಂಕ ವಿಧಿಸಿದ್ದಾರೆ. ಹೊಸ ಸುಂಕ ನೀತಿ ಏಪ್ರಿಲ್ 9ರಿಂದ ಜಾರಿಗೆ ಬಂದಿದೆ.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿತ್ತು. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿತ್ತು. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಚೀನಾ ಅಮೆರಿಕದ ಬೆದರಿಕೆಗೆ ಸೊಪ್ಪು ಹಾಕದ ಕಾರಣ ಟ್ರಂಪ್ ಚೀನಾ ಮೇಲೆ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದ್ದರು. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ ಶೇ.104 ಆಗಿತ್ತು. ಚೀನಾ ಜೊತೆ ಪ್ರತೀಕಾರಕ್ಕೆ ಮುಂದಾಗಿರುವ ಟ್ರಂಪ್ ಸುಂಕವನ್ನು ಬುಧವಾರ ಶೇ.125ಕ್ಕೆ ಏರಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಚೀನಾ ಮೇಲೆ ಭಾರೀ ಪ್ರಮಾಣದ ಸುಂಕ ವಿಧಿಸಿದ ಬಳಿಕ “ಪ್ರತೀಕಾರಕ್ಕೆ ಮುಂದಾಗಬೇಡಿ, ಪ್ರತಿಫಲ ಸಿಗುತ್ತದೆ” ಎಂದು ಶ್ವೇತ ಭವನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟ್ರಂಪ್ ಸುಂಕ ವಿನಾಯಿತಿ ಘೋಷಿಸಿದ್ದು ಏಕೆ?

“ನಾವು ಪ್ರತಿ ಸುಂಕ ವಿಧಿಸಿದರೂ ಸುಮಾರು 75 ರಾಷ್ಟ್ರಗಳು ಪ್ರತಿಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿನಾಯಿತಿ ನೀಡಲಾಗಿದೆ. ಅಮೆರಿಕದ ಜೊತೆಗಿನ ವ್ಯಾಪಾರದ ಅಸಮತೋಲನ ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಪ್ರತಿ ಸುಂಕ ವಿಧಿಸಿದ ಬಳಿಕ 75 ರಾಷ್ಟ್ರಗಳು ಯುಎಸ್‌ ಪ್ರತಿನಿಧಿಗಳೊಂದಿಗೆ ವ್ಯಾಪಾರ ಅಡೆತಡೆಗಳು, ಕರೆನ್ಸಿ ಮೌಲ್ಯ, ಹೊಸ ಸುಂಕ ನೀತಿಯಿಂದ ಆದ ವ್ಯತ್ಯಾಸಗಳ ಬಗ್ಗೆ ಚರ್ಚಿಸಿವೆ. ಯಾವುದೇ ರಾಷ್ಟ್ರಗಳು ನಮ್ಮೊಂದಿಗೆ ಪ್ರತೀಕಾರಕ್ಕೆ ಮುಂದಾಗಿಲ್ಲ. ಹಾಗಾಗಿ, ಅವರಿಗೆ 90 ದಿನಗಳ ವಿರಾಮ ನೀಡಿದ್ದೇನೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುತ್‌ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಜಾಗತಿಕ ಮಾರುಕಟ್ಟೆಗೆ ಚೀನಾ ಅಗೌರವ ತೋರಿದೆ. ಅದಕ್ಕಾಗಿ ಅವರಿಗೆ ನಾವು ಶೇ. 125 ಸುಂಕ ವಿಧಿಸುತ್ತಿದ್ದೇವೆ. ಅಮೆರಿಕ ಸೇರಿದಂತೆ ಇತರ ದೇಶಗಳನ್ನು ಎದುರು ಹಾಕಿಕೊಂಡು ಮಾರುಕಟ್ಟೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂಬುವುದನ್ನು ಚೀನಾಕ್ಕೆ ಅರಿವಾಗಲಿದೆ” ಎಂದು ಟ್ರಂಪ್ ಹೇಳಿದ್ದಾರೆ.

ತಾನು ವಿಧಿಸಿದ ಪ್ರತಿ ಸುಂಕಕ್ಕೆ ಪ್ರತೀಕಾರ ತೋರದ ದೇಶಗಳಿಗೆ 90 ದಿನಗಳ ಸುಂಕ ವಿನಾಯಿತಿ ನೀಡಿದ್ದೇನೆ ಎಂದು ಟ್ರಂಪ್ ಹೇಳಿದ್ದರೂ, ತನ್ನ ವಿರುದ್ದ ಸಮರ ಸಾರಿರುವ ಚೀನಾಗೆ ಬುದ್ದಿ ಕಲಿಸಲು, ಇತರ ದೇಶಗಳಿಂದ ಅದನ್ನು ಒಬ್ಬಂಟಿಯಾಗಿಸಲು ಅಥವಾ ಅಮೆರಿಕ ವಿರುದ್ದದ ಹೋರಾಟಕ್ಕೆ ಚೀನಾಗೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಂತೆ ತಡೆಯಲು ಇತರ ದೇಶಗಳಿಗೆ ಟ್ರಂಪ್ ಸುಂಕ ವಿರಾಮ ಘೋಷಿಸಿದಂತೆ ಕಾಣುತ್ತಿದೆ.

ಏಕೆಂದರೆ, ಅಮೆರಿಕ ಚೀನಾ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಬಳಿಕ, “ಅಮೆರಿಕದ ಸುಂಕ ಹೇರಿಕೆ ವಿರುದ್ದ ಜೊತೆಯಾಗಿ ಹೋರಾಡೋಣ” ಎಂದು ಚೀನಾ ಭಾರತಕ್ಕೆ ಹೇಳಿತ್ತು.

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...