Homeಕರ್ನಾಟಕಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

ಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

- Advertisement -
- Advertisement -

ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ ಎಂದು ಅವರು ಹೇಳಿದ್ದಾರೆ. ಮಂಡ್ಯದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಕರ್ನಾಟಕದ ಆರ್ಥಿಕ ಸ್ಥಿತಿ

“ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2,000 ರೂ., ಗೃಹ ಜ್ಯೋತಿ ಅಡಿಯಲ್ಲಿ 200 ಉಚಿತ ಯೂನಿಟ್ ವಿದ್ಯುತ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ ನೀಡುತ್ತಿದೆ. ಇಷ್ಟೆಲ್ಲಾ ಸವಲತ್ತುಗಳನ್ನು ನೀಡಿದ ನಂತರ ಜನರು ಆಕ್ರೋಶಗೊಳ್ಳುತ್ತಾರೆಯೆ? ಯಾವುದೇ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆಯೇ? ಇದು ಬಿಜೆಪಿಯ ‘ಆಕ್ರೋಶ'” ಎಂದು ಬಿಜೆಪಿಯ ಜನಾಕ್ರೋಶ ಯಾತ್ರೆಯ ಬಗ್ಗೆ ಹೇಳಿದ್ದಾರೆ.

ಸೋಮವಾರ ಮೈಸೂರಿನಲ್ಲಿ ಬಿಜೆಪಿ ಜನಕ್ರೋಶ ಯಾತ್ರೆಯನ್ನು ಪ್ರಾರಂಭಿಸಿತ್ತು. ಈ ಯಾತ್ರೆಯನ್ನು ಉಲ್ಲೇಖಿಸಿ ಅವರು ಮಾತನಾಡುತ್ತಿದ್ದರು. “ಜನರು ಕೋಪಗೊಂಡಿದ್ದರೆ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಿದ್ದರು. ಆದರೆ, ಅವರು ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗನನ್ನು ಸೋಲಿಸಿದರು. ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ವಿಪರ್ಯಾಸ” ಎಂದು ಅವರು ಹೇಳಿದ್ದಾರೆ.

“ದಲಿತರ ಕಲ್ಯಾಣಕ್ಕಾಗಿ ನಾವು ಮೀಸಲಾದ ಹಣವನ್ನು ಬಳಸುತ್ತಿದ್ದೇವೆ. ಗ್ಯಾರೆಂಟಿ ಯೋಜನೆಗಳಿಗಾಗಿ ನಾವು ಸುಮಾರು 51,000 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಕೇಂದ್ರ ಸರ್ಕಾರವು ಜಿಎಸ್‌ಟಿಯಲ್ಲಿ ನಮ್ಮ ಪಾಲನ್ನು ನಮಗೆ ನೀಡಿಲ್ಲ ಎಂಬ ಕಾರಣಕ್ಕೆ, ನಾವು ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ರಾಜ್ಯದ ಜನರಿಗೆ ದ್ರೋಹ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ತಿಂಗಳೊಳಗೆ ಸುಮಾರು 59 ಜನರು ಸಾವನ್ನಪ್ಪಿದ್ದರು. ರಾಜ್ಯ ಪೊಲೀಸ್ ಮತ್ತು ಸಾರಿಗೆ ಇಲಾಖೆ ತ್ವರಿತವಾಗಿ ಕಾರ್ಯನಿರ್ವಹಿಸಿದ್ದು, ಇದರಿಂದಾಗಿ ಇಂತಹ ಅಪಘಾತಗಳು ಕಡಿಮೆಯಾಗಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಕರ್ನಾಟಕದ ಆರ್ಥಿಕ ಸ್ಥಿತಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....