Homeಮುಖಪುಟಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

- Advertisement -
- Advertisement -

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆ (ಡಿಪಿಡಿಪಿ)ಯ ಸೆಕ್ಷನ್ 44 (3) ಅನ್ನು ರದ್ದುಗೊಳಿಸುವಂತೆ ಇಂಡಿಯಾ ಮೈತ್ರಿಕೂಟ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದು, ಇದು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯನ್ನು ನಾಶಪಡಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆರ್‌ಟಿಐ ಕಾಯ್ದೆ

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿ ಪಕ್ಷಗಳ 120 ಕ್ಕೂ ಹೆಚ್ಚು ಸಂಸದರು ಈ ಸೆಕ್ಷನ್ ಅನ್ನು ರದ್ದುಗೊಳಿಸಲು ಜಂಟಿ ಜ್ಞಾಪಕ ಪತ್ರಕ್ಕೆ ಸಹಿ ಹಾಕಿದ್ದಾರೆ ಮತ್ತು ಅದನ್ನು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಂಎಂ ಅಬ್ದುಲ್ಲಾ (ಡಿಎಂಕೆ), ಪ್ರಿಯಾಂಕಾ ಚತುರ್ವೇದಿ (ಶಿವಸೇನೆ-ಯುಬಿಟಿ), ಜಾನ್ ಬ್ರಿಟ್ಟಾಸ್, (ಸಿಪಿಐ-ಎಂ), ಜಾವೇದ್ ಅಲಿ ಖಾನ್, (ಎಸ್‌ಪಿ) ಮತ್ತು ನವಲ್ ಕಿಶೋರ್ (ಆರ್‌ಜೆಡಿ) ಭಾಗವಹಿಸಿದ್ದರು.

ಡಿಪಿಡಿಪಿ ಕಾಯ್ದೆಯ ಸೆಕ್ಷನ್ 44 (3) ಅನ್ನು ನಾಗರಿಕ ಹಕ್ಕುಗಳ ಹೋರಾಟಗಾರರು ವಿರೋಧಿಸಿದ್ದು, ಇದು 2005 ರ ಆರ್‌ಟಿಐ ಕಾಯ್ದೆಯ ಸೆಕ್ಷನ್ 8 (1) (ಜೆ) ಅನ್ನು ಬದಲಾಯಿಸಲು ಪ್ರಯತ್ನಿಸುತ್ತದೆ ಎಂದು ಗೊಗೊಯ್ ಹೇಳಿದ್ದಾರೆ.

ವೈಯಕ್ತಿಕ ಮಾಹಿತಿಯ ಬಹಿರಂಗಪಡಿಸುವಿಕೆಯು ಯಾವುದೇ ಸಾರ್ವಜನಿಕ ಚಟುವಟಿಕೆ ಅಥವಾ ಹಿತಾಸಕ್ತಿಗೆ ಸಂಬಂಧಿಸದಿದ್ದರೆ ಅಥವಾ ಗೌಪ್ಯ ಮಾಹಿತಿ  ಆಗಿದ್ದರೆ ಅದನ್ನು ತಡೆಹಿಡಿಯಲು ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅವಕಾಶ ನೀಡುತ್ತದೆ. ಅದಾಗ್ಯೂ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಮೇಲ್ಮನವಿ ಪ್ರಾಧಿಕಾರವು ಈ ಮಾಹಿತಿಯು ಜನರ ಒಳಿತಿಗೆ ಉಪಯೋಗವಾಗುತ್ತದೆ ಎಂದು ನಿರ್ಧರಿಸಿ, ಅದನ್ನು ಸಾರ್ವಜನಿಕವಾಗುವಂತೆ ಮಾಡಬಹುದಾಗಿದೆ.

ಡಿಪಿಡಿಪಿ ಕಾಯ್ದೆಯ ಸೆಕ್ಷನ್ 44 (3) ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅನ್ನು ತಿದ್ದುಪಡಿ ಮಾಡುತ್ತದೆ. ಇದು ಸರ್ಕಾರಿ ಸಂಸ್ಥೆಗಳು ಸಾರ್ವಜನಿಕ ಹಿತಾಸಕ್ತಿ ಅಥವಾ ಯಾವುದೇ ಇತರ ವಿನಾಯಿತಿಗಳನ್ನು ಪರಿಗಣಿಸದೆ “ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ ಮಾಹಿತಿಯನ್ನು” ತಡೆಹಿಡಿಯಲು ಅನುಮತಿ ನೀಡುತ್ತದೆ. ಹಾಗಾಗಿ ಸರ್ಕಾರಿ ಅಧಿಕಾರಿಗಳು ಅಥವಾ ರಾಜಕಾರಣಿಗಳ ಮಾಹಿತಿಯು ‘ವೈಯಕ್ತಿಕ ಮಾಹಿತಿ’ ಎಂಬ ಕಾರಣ ನೀಡಿ ಇನ್ನು ಮುಂದಕ್ಕೆ ಮಾಹಿತಿ ಕೇಳುವವರಿಗೆ ಲಭ್ಯವಾಗದಂತೆ ಮಾಡುವ ಅಪಾಯವಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...