Homeಮುಖಪುಟಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಹೇಳಿಕೆ; ಮಮತಾ ಬ್ಯಾನರ್ಜಿಗೆ ನ್ಯಾಯಾಂಗ ನಿಂದನೆ ನೋಟಿಸ್

ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಹೇಳಿಕೆ; ಮಮತಾ ಬ್ಯಾನರ್ಜಿಗೆ ನ್ಯಾಯಾಂಗ ನಿಂದನೆ ನೋಟಿಸ್

- Advertisement -
- Advertisement -

ರಾಜ್ಯದ ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ನೇಮಕಾತಿ ಹಗರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಗಿದೆ. ಏಪ್ರಿಲ್ 10 ರಂದು ಎನ್‌ಜಿಒ ಆತ್ಮದೀಪ್ ಪರವಾಗಿ ವಕೀಲ ಸಿದ್ಧಾರ್ಥ್ ದತ್ತಾ ಈ ನೋಟಿಸ್ ನೀಡಿದ್ದಾರೆ.

ರಾಜ್ಯದ ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ನೇಮಕಾತಿಯ ಸಮಯದಲ್ಲಿ ಸುಮಾರು 26,000 ಅಕ್ರಮ ನೇಮಕಾತಿಗಳನ್ನು ರದ್ದುಗೊಳಿಸುವ ಕಲ್ಕತ್ತಾ ಹೈಕೋರ್ಟ್‌ನ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 3 ರ ತೀರ್ಪಿನ ನಂತರ ಈ ಬೆಳವಣಿಗೆ ಸಂಭವಿಸಿದೆ. ಇದನ್ನು ‘ಎಸ್‌ಎಸ್‌ಸಿ ಉದ್ಯೋಗ ಹಗರಣ’ ಎಂದು ವ್ಯಾಪಕವಾಗಿ ಕರೆಯಲಾಗುತ್ತದೆ.

ಏಪ್ರಿಲ್ 8 ರಂದು ಸಾರ್ವಜನಿಕ ಭಾಷಣದಲ್ಲಿ ಬ್ಯಾನರ್ಜಿ ಅವರು ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ನೇರವಾಗಿ ದುರ್ಬಲಗೊಳಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ. ತಮ್ಮ ಹೇಳಿಕೆಗಳಲ್ಲಿ, ಮುಖ್ಯಮಂತ್ರಿಗಳು ಉದ್ಯೋಗಗಳನ್ನು ವಜಾಗೊಳಿಸುವುದನ್ನು ಪ್ರಶ್ನಿಸಿ, “ಯಾರ ಕೆಲಸವನ್ನು ತೆಗೆದುಕೊಳ್ಳುವ ಹಕ್ಕು ಯಾರಿಗಿದೆ? ಯಾರೂ ಇಲ್ಲ.. ನಮ್ಮ ಯೋಜನೆ ಎ ಸಿದ್ಧವಾಗಿದೆ, ಬಿ ಸಿದ್ಧವಾಗಿದೆ, ಸಿ ಸಿದ್ಧವಾಗಿದೆ, ಡಿ ಸಿದ್ಧವಾಗಿದೆ ಮತ್ತು ಇ ಸಿದ್ಧವಾಗಿದೆ… ಇದನ್ನು ಹೇಳಿದ್ದಕ್ಕಾಗಿ ನೀವು ನನ್ನನ್ನು ಜೈಲಿಗೆ ಹಾಕಬಹುದು. ಆದರೆ, ನನಗೆ ಅದು ಮುಖ್ಯವಲ್ಲ” ಎಂದು ಹೇಳಿದರು.

ನ್ಯಾಯಾಲಯದ ನಿರ್ಧಾರದ ಹಿಂದೆ ಪಿತೂರಿ ಇದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ. “ಈ ತೀರ್ಪು ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡುವ, ಅರ್ಹ ಶಿಕ್ಷಕರನ್ನು ಕಳ್ಳರು ಮತ್ತು ಅನರ್ಹರು ಎಂದು ಬ್ರಾಂಡ್ ಮಾಡುವ ಗುರಿಯನ್ನು ಹೊಂದಿದೆ” ಎಂದು ಹೇಳಿದ್ದಾರೆ.

ಬ್ಯಾನರ್ಜಿಯವರ ಹೇಳಿಕೆಗಳು ಸುಪ್ರೀಂ ಕೋರ್ಟ್‌ನ ಅಧಿಕಾರದ ಮೇಲೆ ಉದ್ದೇಶಪೂರ್ವಕ, ಯೋಜಿತ ಮತ್ತು ಚೆನ್ನಾಗಿ ಯೋಚಿಸಿದ ದಾಳಿಯಾಗಿದೆ. ನ್ಯಾಯಾಂಗ ಪ್ರಕ್ರಿಯೆಯ ಸ್ಪಷ್ಟ ತಿರಸ್ಕಾರ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಅವರು ಉನ್ನತ ನ್ಯಾಯಾಲಯದ ತೀರ್ಪನ್ನು ಪಾಲಿಸದಿರುವುದನ್ನು ಪ್ರೋತ್ಸಾಹಿಸುತ್ತಿದ್ದಾರೆ ಮತ್ತು ತೀರ್ಪಿನ ವಿರುದ್ಧ ಸಾರ್ವಜನಿಕ ಅಭಿಪ್ರಾಯವನ್ನು ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನೋಟಿಸ್‌ನಲ್ಲಿ ಆರೋಪಿಸಿದೆ.

1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Didi is getting big for her boots & breeches?
    Some norms/regard should be observed about SC judgements before commenting on it negatively?
    One can disagree without being offensive?
    Or may be she has immunity?

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...