Homeಮುಖಪುಟ'ಫುಲೆ' ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

‘ಫುಲೆ’ ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

- Advertisement -
- Advertisement -

ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಅನಂತ್ ಮಹಾದೇವನ್ ನಿರ್ದೇಶನದ ‘ಫುಲೆ’ ಚಿತ್ರ ಬಿಡುಗಡೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

19 ನೇ ಶತಮಾನದಲ್ಲಿ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ಧ ಹೋರಾಡಿದ ಮಹಾನ್ ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಕಥೆ ಆಧರಿತ ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ಪತ್ರಲೇಖಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯದ ಒಂದು ವರ್ಗವು ಚಿತ್ರದಲ್ಲಿ ತಮ್ಮ ಚಿತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಕೆಲ ಸಂಸ್ಥೆಗಳು ಇದು ತಮ್ಮ ಸಮುದಾಯವನ್ನು ಅವಮಾನಿಸುತ್ತದೆ ಎಂದು ಆರೋಪಿಸಿದೆ. ಇದು ಚಿತ್ರ ಬಿಡುಗಡೆ ಮುಂದೂಡಿಕೆಯಾಗಲು ಕಾರಣ ಎನ್ನಲಾಗಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಚಿತ್ರದಲ್ಲಿ ಜಾತಿ ವ್ಯವಸ್ಥೆಯ ಕುರಿತು ಹೇಳುವ ಧ್ವನಿಮುದ್ರಿಕೆ ತೆಗೆದು ಹಾಕುವುದು ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲು ಸೂಚಿಸಿದೆ. ‘ಮಹರ್’, ‘ಮಾಂಗ್’, ‘ಪೇಶ್ವೆ’ ಮತ್ತು ‘ಮನು ಜಾತಿ ವ್ಯವಸ್ಥೆ’ ಮುಂತಾದ ಪದಗಳನ್ನು ತೆಗೆದು ಹಾಕಲು ಮತ್ತು ಚಿತ್ರದ ಕೆಲವು ಸಂಭಾಷಣೆಗಳನ್ನು ಬದಲಾಯಿಸಲು ನಿರ್ಮಾಪಕರಿಗೆ ಸೂಚನೆ ನೀಡಿದೆ ಎಂದು ವರದಿಗಳು ಹೇಳಿವೆ.

‘ಪೊರಕೆ ಹೊತ್ತ ವ್ಯಕ್ತಿ, ಸಾವಿತ್ರಿ ಬಾಯಿ ಮೇಲೆ ಸಗಣಿ ಎಸೆಯುವ ಹುಡುಗರು’ ಈ ದೃಶ್ಯಗಳು ಮತ್ತು ಚಿತ್ರದ ಕೆಲ ಡೈಲಾಗ್‌ಗಳಲ್ಲಿ ಬದಲಾವಣೆಗಳನ್ನು ಮಾಡಲು ಸಿಬಿಎಫ್‌ಸಿ ಸೂಚಿಸಿದೆ ಎಂದು ವರದಿಯಾಗಿದೆ.

ನಿರ್ದೇಶಕ ಅನಂತ್ ಮಹಾದೇವನ್ ಅವರಿಗೆ ಬ್ರಾಹ್ಮಣ ಸಮುದಾಯಗಳು ಚಿತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿ ಬರೆದ ಹಲವಾರು ಪತ್ರಗಳು ಬಂದಿವೆಯಂತೆ. ಮಿಡ್-ಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಹಾದೇವನ್, “ಟ್ರೇಲರ್ ಬಿಡುಗಡೆಯಾದ ನಂತರ ಕೆಲವು ತಪ್ಪು ತಿಳುವಳಿಕೆಗಳು ಉಂಟಾಗಿವೆ. ವೀಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ನಾವು ಗೊಂದಲಗಳನ್ನು ನಿವಾರಿಸುತ್ತೇವೆ ಎಂದು ಹೇಳಿದ್ದಾರೆ.

ಮಹಾದೇವನ್ ಮತ್ತು ಮುವಾಝಮ್ ಬೇಗ್ ಬರೆದ ಈ ಚಿತ್ರವು 19ನೇ ಶತಮಾನದಲ್ಲಿ ಜಾತೀಯತೆಯ ವಿರುದ್ಧ ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಮಾಡಿದ ಹೋರಾಟ ಮತ್ತು ಈ ವೇಳೆ ಅವರಿಗೆ ಎದುರಾದ ಸವಾಲುಗಳನ್ನು ವಿವರಿಸುತ್ತದೆ.

ಚಿತ್ರದ ಕುರಿತು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದ ಸಂಘಟನೆಗಳಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಸಮಾಜ ಮತ್ತು ಪರಶುರಾಮ ಆರ್ಥಿಕ ವಿಕಾಸ ಮಹಾಮಂಡಲಗಳು ಸೇರಿವೆ.

ಜ್ಯೋತಿ ಬಾ ಫುಲೆ ಅವರ 20 ಶಾಲೆಗಳ ಸ್ಥಾಪನೆ ಮತ್ತು ಸತ್ಯಶೋಧಕ ಸಮಾಜದಂತಹ ಉಪಕ್ರಮಗಳನ್ನು ಕೆಲವು ಬ್ರಾಹ್ಮಣರು ಹೇಗೆ ಬೆಂಬಲಿಸಿದರು ಎಂಬುದನ್ನು ವಿವರಿಸಲು ತಾವು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿರುವುದಾಗಿ ಮಹಾದೇವನ್ ಹೇಳಿಕೊಂಡಿದ್ದಾರೆ.
ಈ ಚಿತ್ರವು ಅಜೆಂಡಾ ಆಧಾರಿತವಲ್ಲ, ಸತ್ಯವನ್ನು ಮಾತ್ರ ಹೇಳಲಾಗಿದೆ ಎಂದಿದ್ದಾರೆ.

ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲು ಸೂಚಿಸುವ ಮುನ್ನ, ಆರಂಭದಲ್ಲಿ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯೂ ಪ್ರಮಾಣಪತ್ರವನ್ನು ನೀಡಿತ್ತು. ಚಿತ್ರದಲ್ಲಿ ಮಾಡಲಾದ ಕೆಲವು ಐತಿಹಾಸಿಕ ವಾದಗಳನ್ನು ಬೆಂಬಲಿಸುವ ಸರಿಯಾದ ದಾಖಲೆಗಳನ್ನು ಕೂಡ ನಿರ್ಮಾಪಕರು ಸಲ್ಲಿಸಿದ್ದಾರೆ.

ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...