Homeಮುಖಪುಟಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

- Advertisement -
- Advertisement -

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರಕ್ಕೆ ಅವರೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಘಾತಕಾರಿ ತೀರ್ಪೊಂದನ್ನು ನೀಡಿದೆ. 2024 ರಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಬಗ್ಗೆ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಆರೋಪಿಗೆ ಜಾಮೀನು ನೀಡುವಾಗ ತೀರ್ಪು ನೀಡಿದೆ.

ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು ಮಾರ್ಚ್ 11 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಿಶ್ಚಲ್ ಚಂದಕ್‌ಗೆ ಜಾಮೀನು ಮಂಜೂರು ಮಾಡುವ ತಮ್ಮ ಆದೇಶದಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 2024 ರಲ್ಲಿ ಈ ಪ್ರಕರಣದಲ್ಲಿ ನಿಶ್ಚಲ್‌ನನ್ನು ಬಂಧಿಸಲಾಗಿತ್ತು.

“ಸಂತ್ರಸ್ತೆಯ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಅವಳೆ ಸಮಸ್ಯೆಯನ್ನು ಸ್ವತಃ ಮೈಗೆಳೆದುಕೊಂಡಿದ್ದಾರೆ ಮತ್ತು ಅಪರಾಧಕ್ಕೆ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಸಂಜಯ್ ಸಿಂಗ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ನೋಯ್ಡಾ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದ ಯುವತಿ, ಸೆಪ್ಟೆಂಬರ್ 2024 ರಲ್ಲಿ ತನ್ನ ಮೂವರು ಮಹಿಳಾ ಸ್ನೇಹಿತರೊಂದಿಗೆ ದೆಹಲಿಯ ಬಾರ್‌ಗೆ ಹೋಗಿದ್ದೆ ಎಂದು ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಯುವತಿ ಬಾರ್‌ನಲ್ಲಿ ಕೆಲವು ಪುರುಷ ಪರಿಚಯಸ್ಥರನ್ನು ಭೇಟಿಯಾದಳು ಮತ್ತು ಚಂದಕ್ ಕೂಡ ಈ ಗುಂಪಿನ ಭಾಗವಾಗಿದ್ದನು ಎಂದು ಯುವತಿ ನೀಡಿದ್ದ ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಮದ್ಯ ಸೇವಿಸಿ ಬೆಳಗಿನ ಜಾವ 3 ಗಂಟೆಯವರೆಗೆ ಬಾರ್‌ನಲ್ಲಿಯೇ ಇದ್ದರು ಎಂದು ದೂರಿನಲ್ಲಿ ಯುವತಿ ಹೇಳಿದ್ದಾರೆ.

ಈ ವೇಳೆ ಚಂದಕ್ ತನ್ನೊಂದಿಗೆ ಬರುವಂತೆ ಕೇಳುತ್ತಲೇ ಇದ್ದನು ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಚಂದಕ್‌ನ ಒತ್ತಾಯದ ಮೇರೆಗೆ ತಾನು ಕೊನೆಗೆ ಅವನೊಂದಿಗೆ ಅವನ ಮನೆಗೆ ವಿಶ್ರಾಂತಿ ಪಡೆಯಲು ಹೋಗಲು ಒಪ್ಪಿಕೊಂಡೆ ಎಂದು ಯುವತಿ ಹೇಳಿದ್ದಾರೆ.

ಮನೆಗೆ ಹೋಗುವ ದಾರಿಯಲ್ಲಿ ಚಂದಕ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಲೇ ಇದ್ದನು ಮತ್ತು ನೋಯ್ಡಾದಲ್ಲಿರುವ ತನ್ನ ಮನೆಗೆ ಕರೆದೊಯ್ಯುವ ಬದಲು, ಗುರ್ಗಾಂವ್‌ನಲ್ಲಿರುವ ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಮಾಡಿದನು ಎಂದು ಯುವತಿ ದೂರಿದ್ದಾರೆ.

ಯುವತಿ ಸಲ್ಲಿಸಿದ ದೂರಿನ ಆಧಾರದ ಮೇಲೆ ನೋಯ್ಡಾದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಡಿಸೆಂಬರ್ 11, 2024 ರಂದು ಚಂದಕ್ ಅವರನ್ನು ಬಂಧಿಸಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಚಂದಕ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಯುವತಿಯನ್ನು ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮಿಬ್ಬರ ನಡುವೆ ನಡೆದದ್ದು ಸಮ್ಮತಿಯ ಲೈಂಗಿಕತೆಯೆ ಹೊರತು, ಅತ್ಯಾಚಾರವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಯುವತಿಯೆ ಸ್ವತಃ ತಮ್ಮ ಮನೆಗೆ ಬಂದು ವಿಶ್ರಾಂತಿ ಪಡೆಯಲು ಒಪ್ಪಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಸಿಂಗ್ ತನ್ನ ಆದೇಶದಲ್ಲಿ, ಮಹಿಳೆ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಎಫ್‌ಐಆರ್‌ನಲ್ಲಿ ಬಹಿರಂಗಪಡಿಸಿದಂತೆ ಆಕೆಯ ಕೃತ್ಯದ ನೈತಿಕತೆ ಮತ್ತು ಮಹತ್ವವನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥಳಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಆಕೆಯ ಕನ್ಯಾಪೊರೆ ಹರಿದಿರುವುದು ಕಂಡುಬಂದಿದೆ ಆದರೆ ವೈದ್ಯರು ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಆದೇಶದಲ್ಲಿ ಹೇಳಿದ್ದಾರೆ.

“ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಹಾಗೂ ಅಪರಾಧದ ಸ್ವರೂಪ, ಸಾಕ್ಷ್ಯಗಳು, ಆರೋಪಿಗಳ ಶಾಮೀಲುದಾರಿಕೆ ಮತ್ತು ಎರಡು ಕಡೆಯವರ ವಕೀಲರ ವಾದಗಳನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರು ಜಾಮೀನಿಗೆ ಸೂಕ್ತವಾದ ಪ್ರಕರಣವನ್ನು ಮಂಡಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ.” ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅತ್ಯಾಚಾರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...