Homeಮುಖಪುಟಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

- Advertisement -
- Advertisement -

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರಕ್ಕೆ ಅವರೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಘಾತಕಾರಿ ತೀರ್ಪೊಂದನ್ನು ನೀಡಿದೆ. 2024 ರಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಬಗ್ಗೆ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಆರೋಪಿಗೆ ಜಾಮೀನು ನೀಡುವಾಗ ತೀರ್ಪು ನೀಡಿದೆ.

ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು ಮಾರ್ಚ್ 11 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಿಶ್ಚಲ್ ಚಂದಕ್‌ಗೆ ಜಾಮೀನು ಮಂಜೂರು ಮಾಡುವ ತಮ್ಮ ಆದೇಶದಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 2024 ರಲ್ಲಿ ಈ ಪ್ರಕರಣದಲ್ಲಿ ನಿಶ್ಚಲ್‌ನನ್ನು ಬಂಧಿಸಲಾಗಿತ್ತು.

“ಸಂತ್ರಸ್ತೆಯ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಅವಳೆ ಸಮಸ್ಯೆಯನ್ನು ಸ್ವತಃ ಮೈಗೆಳೆದುಕೊಂಡಿದ್ದಾರೆ ಮತ್ತು ಅಪರಾಧಕ್ಕೆ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಸಂಜಯ್ ಸಿಂಗ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ನೋಯ್ಡಾ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದ ಯುವತಿ, ಸೆಪ್ಟೆಂಬರ್ 2024 ರಲ್ಲಿ ತನ್ನ ಮೂವರು ಮಹಿಳಾ ಸ್ನೇಹಿತರೊಂದಿಗೆ ದೆಹಲಿಯ ಬಾರ್‌ಗೆ ಹೋಗಿದ್ದೆ ಎಂದು ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಯುವತಿ ಬಾರ್‌ನಲ್ಲಿ ಕೆಲವು ಪುರುಷ ಪರಿಚಯಸ್ಥರನ್ನು ಭೇಟಿಯಾದಳು ಮತ್ತು ಚಂದಕ್ ಕೂಡ ಈ ಗುಂಪಿನ ಭಾಗವಾಗಿದ್ದನು ಎಂದು ಯುವತಿ ನೀಡಿದ್ದ ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಮದ್ಯ ಸೇವಿಸಿ ಬೆಳಗಿನ ಜಾವ 3 ಗಂಟೆಯವರೆಗೆ ಬಾರ್‌ನಲ್ಲಿಯೇ ಇದ್ದರು ಎಂದು ದೂರಿನಲ್ಲಿ ಯುವತಿ ಹೇಳಿದ್ದಾರೆ.

ಈ ವೇಳೆ ಚಂದಕ್ ತನ್ನೊಂದಿಗೆ ಬರುವಂತೆ ಕೇಳುತ್ತಲೇ ಇದ್ದನು ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಚಂದಕ್‌ನ ಒತ್ತಾಯದ ಮೇರೆಗೆ ತಾನು ಕೊನೆಗೆ ಅವನೊಂದಿಗೆ ಅವನ ಮನೆಗೆ ವಿಶ್ರಾಂತಿ ಪಡೆಯಲು ಹೋಗಲು ಒಪ್ಪಿಕೊಂಡೆ ಎಂದು ಯುವತಿ ಹೇಳಿದ್ದಾರೆ.

ಮನೆಗೆ ಹೋಗುವ ದಾರಿಯಲ್ಲಿ ಚಂದಕ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಲೇ ಇದ್ದನು ಮತ್ತು ನೋಯ್ಡಾದಲ್ಲಿರುವ ತನ್ನ ಮನೆಗೆ ಕರೆದೊಯ್ಯುವ ಬದಲು, ಗುರ್ಗಾಂವ್‌ನಲ್ಲಿರುವ ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಮಾಡಿದನು ಎಂದು ಯುವತಿ ದೂರಿದ್ದಾರೆ.

ಯುವತಿ ಸಲ್ಲಿಸಿದ ದೂರಿನ ಆಧಾರದ ಮೇಲೆ ನೋಯ್ಡಾದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಡಿಸೆಂಬರ್ 11, 2024 ರಂದು ಚಂದಕ್ ಅವರನ್ನು ಬಂಧಿಸಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಚಂದಕ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಯುವತಿಯನ್ನು ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮಿಬ್ಬರ ನಡುವೆ ನಡೆದದ್ದು ಸಮ್ಮತಿಯ ಲೈಂಗಿಕತೆಯೆ ಹೊರತು, ಅತ್ಯಾಚಾರವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಯುವತಿಯೆ ಸ್ವತಃ ತಮ್ಮ ಮನೆಗೆ ಬಂದು ವಿಶ್ರಾಂತಿ ಪಡೆಯಲು ಒಪ್ಪಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಸಿಂಗ್ ತನ್ನ ಆದೇಶದಲ್ಲಿ, ಮಹಿಳೆ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಎಫ್‌ಐಆರ್‌ನಲ್ಲಿ ಬಹಿರಂಗಪಡಿಸಿದಂತೆ ಆಕೆಯ ಕೃತ್ಯದ ನೈತಿಕತೆ ಮತ್ತು ಮಹತ್ವವನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥಳಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಆಕೆಯ ಕನ್ಯಾಪೊರೆ ಹರಿದಿರುವುದು ಕಂಡುಬಂದಿದೆ ಆದರೆ ವೈದ್ಯರು ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಆದೇಶದಲ್ಲಿ ಹೇಳಿದ್ದಾರೆ.

“ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಹಾಗೂ ಅಪರಾಧದ ಸ್ವರೂಪ, ಸಾಕ್ಷ್ಯಗಳು, ಆರೋಪಿಗಳ ಶಾಮೀಲುದಾರಿಕೆ ಮತ್ತು ಎರಡು ಕಡೆಯವರ ವಕೀಲರ ವಾದಗಳನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರು ಜಾಮೀನಿಗೆ ಸೂಕ್ತವಾದ ಪ್ರಕರಣವನ್ನು ಮಂಡಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ.” ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅತ್ಯಾಚಾರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...