Homeಮುಖಪುಟಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

- Advertisement -
- Advertisement -

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರಕ್ಕೆ ಅವರೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಘಾತಕಾರಿ ತೀರ್ಪೊಂದನ್ನು ನೀಡಿದೆ. 2024 ರಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಬಗ್ಗೆ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಆರೋಪಿಗೆ ಜಾಮೀನು ನೀಡುವಾಗ ತೀರ್ಪು ನೀಡಿದೆ.

ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು ಮಾರ್ಚ್ 11 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಿಶ್ಚಲ್ ಚಂದಕ್‌ಗೆ ಜಾಮೀನು ಮಂಜೂರು ಮಾಡುವ ತಮ್ಮ ಆದೇಶದಲ್ಲಿ ಈ ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 2024 ರಲ್ಲಿ ಈ ಪ್ರಕರಣದಲ್ಲಿ ನಿಶ್ಚಲ್‌ನನ್ನು ಬಂಧಿಸಲಾಗಿತ್ತು.

“ಸಂತ್ರಸ್ತೆಯ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಅವಳೆ ಸಮಸ್ಯೆಯನ್ನು ಸ್ವತಃ ಮೈಗೆಳೆದುಕೊಂಡಿದ್ದಾರೆ ಮತ್ತು ಅಪರಾಧಕ್ಕೆ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿದೆ” ಎಂದು ಸಂಜಯ್ ಸಿಂಗ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ನೋಯ್ಡಾ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದ ಯುವತಿ, ಸೆಪ್ಟೆಂಬರ್ 2024 ರಲ್ಲಿ ತನ್ನ ಮೂವರು ಮಹಿಳಾ ಸ್ನೇಹಿತರೊಂದಿಗೆ ದೆಹಲಿಯ ಬಾರ್‌ಗೆ ಹೋಗಿದ್ದೆ ಎಂದು ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಯುವತಿ ಬಾರ್‌ನಲ್ಲಿ ಕೆಲವು ಪುರುಷ ಪರಿಚಯಸ್ಥರನ್ನು ಭೇಟಿಯಾದಳು ಮತ್ತು ಚಂದಕ್ ಕೂಡ ಈ ಗುಂಪಿನ ಭಾಗವಾಗಿದ್ದನು ಎಂದು ಯುವತಿ ನೀಡಿದ್ದ ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಮದ್ಯ ಸೇವಿಸಿ ಬೆಳಗಿನ ಜಾವ 3 ಗಂಟೆಯವರೆಗೆ ಬಾರ್‌ನಲ್ಲಿಯೇ ಇದ್ದರು ಎಂದು ದೂರಿನಲ್ಲಿ ಯುವತಿ ಹೇಳಿದ್ದಾರೆ.

ಈ ವೇಳೆ ಚಂದಕ್ ತನ್ನೊಂದಿಗೆ ಬರುವಂತೆ ಕೇಳುತ್ತಲೇ ಇದ್ದನು ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಚಂದಕ್‌ನ ಒತ್ತಾಯದ ಮೇರೆಗೆ ತಾನು ಕೊನೆಗೆ ಅವನೊಂದಿಗೆ ಅವನ ಮನೆಗೆ ವಿಶ್ರಾಂತಿ ಪಡೆಯಲು ಹೋಗಲು ಒಪ್ಪಿಕೊಂಡೆ ಎಂದು ಯುವತಿ ಹೇಳಿದ್ದಾರೆ.

ಮನೆಗೆ ಹೋಗುವ ದಾರಿಯಲ್ಲಿ ಚಂದಕ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಲೇ ಇದ್ದನು ಮತ್ತು ನೋಯ್ಡಾದಲ್ಲಿರುವ ತನ್ನ ಮನೆಗೆ ಕರೆದೊಯ್ಯುವ ಬದಲು, ಗುರ್ಗಾಂವ್‌ನಲ್ಲಿರುವ ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಮಾಡಿದನು ಎಂದು ಯುವತಿ ದೂರಿದ್ದಾರೆ.

ಯುವತಿ ಸಲ್ಲಿಸಿದ ದೂರಿನ ಆಧಾರದ ಮೇಲೆ ನೋಯ್ಡಾದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಡಿಸೆಂಬರ್ 11, 2024 ರಂದು ಚಂದಕ್ ಅವರನ್ನು ಬಂಧಿಸಲಾಗಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಚಂದಕ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಯುವತಿಯನ್ನು ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮಿಬ್ಬರ ನಡುವೆ ನಡೆದದ್ದು ಸಮ್ಮತಿಯ ಲೈಂಗಿಕತೆಯೆ ಹೊರತು, ಅತ್ಯಾಚಾರವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಯುವತಿಯೆ ಸ್ವತಃ ತಮ್ಮ ಮನೆಗೆ ಬಂದು ವಿಶ್ರಾಂತಿ ಪಡೆಯಲು ಒಪ್ಪಿಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಸಿಂಗ್ ತನ್ನ ಆದೇಶದಲ್ಲಿ, ಮಹಿಳೆ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಎಫ್‌ಐಆರ್‌ನಲ್ಲಿ ಬಹಿರಂಗಪಡಿಸಿದಂತೆ ಆಕೆಯ ಕೃತ್ಯದ ನೈತಿಕತೆ ಮತ್ತು ಮಹತ್ವವನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥಳಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಆಕೆಯ ಕನ್ಯಾಪೊರೆ ಹರಿದಿರುವುದು ಕಂಡುಬಂದಿದೆ ಆದರೆ ವೈದ್ಯರು ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಆದೇಶದಲ್ಲಿ ಹೇಳಿದ್ದಾರೆ.

“ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಹಾಗೂ ಅಪರಾಧದ ಸ್ವರೂಪ, ಸಾಕ್ಷ್ಯಗಳು, ಆರೋಪಿಗಳ ಶಾಮೀಲುದಾರಿಕೆ ಮತ್ತು ಎರಡು ಕಡೆಯವರ ವಕೀಲರ ವಾದಗಳನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರು ಜಾಮೀನಿಗೆ ಸೂಕ್ತವಾದ ಪ್ರಕರಣವನ್ನು ಮಂಡಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ.” ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅತ್ಯಾಚಾರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...