Homeಕರ್ನಾಟಕಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

ಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ರೈತರು ಇಂದು ಬೆಳಿಗ್ಗೆ ಭೂ ಸ್ವಾಧೀನವನ್ನು ಕೈ ಬಿಡುವಂತೆ ಒತ್ತಾಯಿಸಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಭೇಟಿ ಮಾಡಲು‌ ಹೊರಟಿದ್ದ ರೈತರ ವಾಹನಗಳನ್ನು ಪೋಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅನ್ನದಾತರು, ಚನ್ನರಾಯಪಟ್ಟಣ ದೇವನಹಳ್ಳಿ ಮಾರ್ಗ ಮಧ್ಯೆ ರಸ್ತೆಯಲ್ಲಿ ಕುಳಿತು ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವು ಭಾರಿ ಭೂಸ್ವಾಧೀನ ಹಿಂತೆಗೆದುಕೊಳ್ಳುವ ಭರವಸೆ ನೀಡಿದ್ದ ಸಚಿವರು, ಈಗ ರೈತರನ್ನು ಭೇಟಿ ಮಾಡಲು ಹೆದರಿಕೊಂಡಿದ್ದಾರೆ. ಸಾಲದ್ದಕ್ಕೆ ಭೇಟಿಗೆ ಹೊರಟ ರೈತರನ್ನು ಕಂಡ ಕಂಡಲ್ಲಿ ಪೋಲೀಸ್ ದಿಗ್ಬಂದನ ಹಾಕಿಸಿ ತಡೆಯುತ್ತಿದ್ದಾರೆ.

ಚನ್ನರಾಯಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾನಿರತ ರೈತರು ಮಾತಾನಾಡಿದರು.

ಚನ್ನರಾಯಪಟ್ಟಣದ 13 ಹಳ್ಳಿಗಳಲ್ಲಿ ನಡೆಯುತ್ತಿರುವ ಭೂ ಸ್ವಾದೀನವನ್ನು ವಿರೋಧಿಸಿ ಕಳೆದ ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರು ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಕೆಐಎಡಿಬಿ ಅಧಿಕಾರಿಗಳು ಶಿಫಾರಸ್ಸು ಮಾಡಿರುವುದರ ಕುರಿತಾಗಿ ಮಾತನಾಡಿ, ಈ ಪ್ರಕ್ರಿಯೆ ತಡೆಹಿಡಿಯುವಂತೆ ಒತ್ತಾಯಿಸಲು ಕಳೆದ ಸೋಮವಾರ ರೈತರು ದೇವನಹಳ್ಳಿ ಶಾಸಕ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪನವರನ್ನು 10ನೇ ತಾರೀಕು ಗುರುವಾರದಂದು ಬಂದು ಭೇಟಿ ಮಾಡುವಂತೆ ಮಾತುಕತೆಯಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸುತ್ತಿದ್ದ ರೈತರನ್ನು ಉದ್ದೇಶಿಸಿ, ನಾನು ರೈತರ ಪರವಾಗಿ ನಿಂತು ಭೂಸ್ವಾಧೀನ ಪ್ರಕ್ರಿಯೆಯನ್ನು ತಡೆಹಿಡುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದರು. ಅವರ ಮಾತಿನಂತೆ ನಾವು ಇಂದು ಮಂತ್ರಿಗಳನ್ನು ಭೇಟಿ ಮಾಡಲು ಹೊರಟರೆ ಪೊಲೀಸರು ನಮ್ಮನ್ನು ತಡೆಯುತ್ತಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದರು.

ವಿಷ ಸೇವಿಸಲು ಮುಂದಾದ ರೈತ

ಈ ಮಧ್ಯೆ, ಕಳೆದ ಮೂರು ವರ್ಷಗಳಿಂದ ಬೀದಿಯಲ್ಲಿ ಕುಳಿತಿದ್ದರು ಸರ್ಕಾರಗಳು ನಮ್ಮನ್ನು ಗಮನಿಸುತ್ತಿಲ್ಲ ಎಂದು ಆಕ್ರೋಶಬರಿತವಾಗಿ ಮಾತನಾಡುತ್ತಿದ್ದ ರೈತರ ಗುಂಪು ಊಟದಲ್ಲಿ ವಿಷ ಬೆರೆಸಿ ತಿನ್ನಲು ಮುಂದಾಗಿತ್ತು. ಆದರೆ, ಅಲ್ಲಿನ ರೈತರು ನಿಂದವರನ್ನು ತಡೆದು ಸಮಾಧಾನಪಡಿಸಿದರು. ಈ ಮಧ್ಯೆ ನೂಕುನುಗ್ಗಲು ಉಂಟಾಗಿ ವಿಷ ಸೇವನೆಗೆ ಮುಂದಾಗಿದ್ದ ರೈತ ವೆಂಕಟೇಶ್ ರವರು ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ರೈತರು ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

‘ಪ್ರಾಣ ಬಿಟ್ಟರೂ ಸರಿ ಭೂಮಿ ಬಿಡುವುದಿಲ್ಲ’ ಎಂದು ಹಠ ಹಿಡಿದು ಕುಳಿತಿರುವ ರೈತರು, ನಾವು ಮಂತ್ರಿಗಳು ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೆ ವಿಶ್ವಾಸವನ್ನು ಕಳೆದುಕೊಂಡಿದ್ದು, ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿ ನಮ್ಮ ಸಮಸ್ಯೆಯನ್ನು ಬಗೆಹರಿಸುವವರಿಗೆ ನಾವು ವಾಪಸ್ಸು ಹೋಗುವುದಿಲ್ಲ ಎಂದು ಹೇಳುವ ಮೂಲಕ ರಸ್ತೆ ತಡೆಗೆ ಮುಂದಾಗಿದ್ದಾರೆ.

ಪೊಲೀಸ್ ಇಲಾಖೆ ಮಂತ್ರಿಗಳನ್ನು ಸಂಪರ್ಕಿಸಲು ಪ್ರಯತ್ನ ಪಡುತ್ತಿದೆಯಾದರೂ ಸಂಜೆಯವರೆಗೂ ಮುಖ್ಯಮಂತ್ರಿಗಳ ಭೇಟಿಯ ಕುರಿತಾಗಿ ಯಾವುದೇ ಮಾಹಿತಿ ಬಂದಿಲ್ಲ. ಆದ್ದರಿಂದ, ತಕ್ಷಣ ಭೂಸ್ವಾಧೀನಕ್ಕೆ ಉದ್ದೇಶಿಸಿ ನಡೆಸುತ್ತಿರುವ ಎಲ್ಲ ಪ್ರಕ್ರಿಯೆಗಳು ನಿಲ್ಲಿಸಬೇಕು ಮತ್ತು ಮುಖ್ಯಮಂತ್ರಿಗಳ ಭೇಟಿಗೆ ದಿನ ನಿಗದಿ ಮಾಡಲೇಬೇಕೆಂದು ಒತ್ತಾಯಿಸಿ ರೈತರು ರಸ್ತೆಯಲ್ಲಿ ಅಹೋರಾತ್ರಿ ಧರಣಿಗೆ  ಮುಂದಾಗಿದ್ದಾರೆ.

ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಚಂದ್ರ ತೇಜಸ್ವಿ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರೈತರಾದ ಜಯರಾಮೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಪ್ರಮೋದ್, ಮೋಹನ್, ಮಾರೇಗೌಡ, ಗೋಪಿನಾತ್, ಬೈರೇಗೌಡ, ನಂದನ್, ಮುಕುಂದ, ಅಶ್ವತ್ಥಪ್ಪ, ವೆಂಕಟರಮಣಪ್ಪ, ಸುಶೀಲಮ್ಮ, ನಾರಾಯಣಮ್ಮ, ವೆಂಕಟೇಶ್ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಕರ್ನಾಟಕದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ: ಗೃಹ ಸಚಿವ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...