Homeಮುಖಪುಟ'ಉದ್ಯೋಗ ಸಂಬಂಧಿತ ಪ್ರೋತ್ಸಾಹ' ಯೋಜನೆಯನ್ನು 'ಮತ್ತೊಂದು ಜುಮ್ಲಾ' ಎಂದ ರಾಹುಲ್ ಗಾಂಧಿ

‘ಉದ್ಯೋಗ ಸಂಬಂಧಿತ ಪ್ರೋತ್ಸಾಹ’ ಯೋಜನೆಯನ್ನು ‘ಮತ್ತೊಂದು ಜುಮ್ಲಾ’ ಎಂದ ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ‘ಉದ್ಯೋಗ ಸಂಬಂಧಿತ ಪ್ರೋತ್ಸಾಹ’ (Employment Linked Incentive) ಯೋಜನೆಯ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಪ್ರತಿದಿನ ಹೊಸ ಘೋಷಣೆಗಳನ್ನು ನೀಡುತ್ತಿದ್ದರೂ, ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದು, ಹೊಸ ಘೋಷಣೆಯನ್ನು “ಮತ್ತೊಂದು ಜುಮ್ಲಾ” ಎಂದು ಶುಕ್ರವಾರ ಕರೆದಿದ್ದಾರೆ.

“2024 ರ ಚುನಾವಣೆಯ ನಂತರ, ಪ್ರಧಾನಿ ಮೋದಿ “ಉದ್ಯೋಗ ಸಂಬಂಧಿತ ಪ್ರೋತ್ಸಾಹ” ಯೋಜನೆಯನ್ನು ಬಹಳ ಅಬ್ಬರದಿಂದ ಘೋಷಿಸಿದರು, ನಮ್ಮ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದರು. ಆದರೆ, ಯೋಜನೆಯನ್ನು ಘೋಷಿಸಿ ಸುಮಾರು ಒಂದು ವರ್ಷವಾಗಿದೆ. ಸರ್ಕಾರ ಇನ್ನೂ ಅದನ್ನು ವ್ಯಾಖ್ಯಾನಿಸಿಲ್ಲ ಮತ್ತು ಅದಕ್ಕೆ ನಿಗದಿಪಡಿಸಿದ 10,000 ಕೋಟಿ ರೂ.ಗಳನ್ನು ಹಿಂದಿರುಗಿಸಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ಕಾರದ ಈ ನಡೆಯೆ ಪ್ರಧಾನಿ ನಿರುದ್ಯೋಗದ ಬಗ್ಗೆ ಎಷ್ಟು ಗಂಭೀರವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ರಾಹುಲ್ ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

https://twitter.com/RahulGandhi/status/1910555339834949893

ದೊಡ್ಡ ಕಾರ್ಪೊರೇಟ್‌ಗಳ ಕಂಪೆನಿಗಳ ಮೇಲೆ ಮಾತ್ರ ಕೇಂದ್ರೀಕರಿಸುವ ಮೂಲಕ, ನ್ಯಾಯಯುತ ವ್ಯವಹಾರಗಳಿಗಿಂತ ಆಪ್ತಮಿತ್ರರನ್ನು ಉತ್ತೇಜಿಸುವ ಮೂಲಕ, ಉತ್ಪಾದನೆಗಿಂತ ಸಭೆಗಳಿಗೆ ಆದ್ಯತೆ ನೀಡುವ ಮೂಲಕ ಮತ್ತು ಭಾರತದ ಸ್ಥಳೀಯ ಕೌಶಲ್ಯಗಳನ್ನು ನಿರ್ಲಕ್ಷಿಸುವ ಮೂಲಕ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“MSME ಗಳಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಮಾಡುವುದು, ಸ್ಪರ್ಧೆ ಇರುವ ನ್ಯಾಯಯುತ ಮಾರುಕಟ್ಟೆಗಳ ನಿರ್ಮಾಣ, ಸ್ಥಳೀಯ ಉತ್ಪಾದನಾ ಜಾಲಗಳಿಗೆ ಬೆಂಬಲ ನೀಡುವುದು ಮತ್ತು ಸರಿಯಾದ ಕೌಶಲ್ಯಗಳನ್ನು ಹೊಂದಿರುವ ಯುವಕರಿಗೆ ಪ್ರೋತ್ಸಾಹ ನೀಡುವುದು ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸುವ ಮಾರ್ಗವಾಗಿದೆ” ಎಂದು ಅವರು ಹೇಳಿದ್ದಾರೆ.

“ಪ್ರಧಾನಿ ಈ ವಿಚಾರಗಳನ್ನು ಒಪ್ಪುವುದಿಲ್ಲ. ಆದರೆ ನಾನು ಅವರನ್ನು ನೇರವಾಗಿ ಕೇಳಬೇಕು: ಪ್ರಧಾನಿ ಅವರೇ, ನೀವು ಉತ್ತಮ ಪ್ರಚಾರದೊಂದಿಗೆ Employment Linked Incentive ಅನ್ನು ಘೋಷಿಸಿದ್ದೀರಿ – ಆದರೆ ಈ 10,000 ಕೋಟಿ ರೂ. ಯೋಜನೆ ಎಲ್ಲಿ ಕಣ್ಮರೆಯಾಯಿತು?. ನೀವು ನಿಮ್ಮ ಭರವಸೆಗಳ ಜೊತೆಗೆ ನಮ್ಮ ನಿರುದ್ಯೋಗಿ ಯುವಕರನ್ನು ಕೈಬಿಟ್ಟಿದ್ದೀರಾ?. ನೀವು ಪ್ರತಿದಿನ ಹೊಸ ಘೋಷಣೆಗಳನ್ನು ನೀಡುತ್ತಿದ್ದೀರಿ. ನಮ್ಮ ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಕೇಳಿದ್ದಾರೆ.

ಭಾರತಕ್ಕೆ ತೀರಾ ಅಗತ್ಯವಿರುವ ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸಲು ನಿಮ್ಮ ಯೋಜನೆ ಏನು, ಅಥವಾ ಇದು ಮತ್ತೊಂದು ಜುಮ್ಲಾವೆ? ಎಂದು ಅವರು ಕೇಳಿದ್ದಾರೆ. ಅದಾನಿ ಮತ್ತು ಅವರ ಬಿಲಿಯನೇರ್ ಸ್ನೇಹಿತರನ್ನು ಶ್ರೀಮಂತಗೊಳಿಸುವುದರಿಂದ ತಳಮಟ್ಟದಲ್ಲಿರುವ ಸಮುದಾಯಗಳ ಯುವಜನರಿಗೆ ಉದ್ಯೋಗದಲ್ಲಿ ಸಮಾನ ಪ್ರವೇಶವನ್ನು ಖಚಿತಪಡಿಸಿಕೊಳ್ಳುವತ್ತ ಪ್ರಧಾನಿ ಯಾವಾಗ ಗಮನ ಹರಿಸುತ್ತಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...