Homeಮುಖಪುಟ'ಉದ್ಯೋಗ ಸಂಬಂಧಿತ ಪ್ರೋತ್ಸಾಹ' ಯೋಜನೆಯನ್ನು 'ಮತ್ತೊಂದು ಜುಮ್ಲಾ' ಎಂದ ರಾಹುಲ್ ಗಾಂಧಿ

‘ಉದ್ಯೋಗ ಸಂಬಂಧಿತ ಪ್ರೋತ್ಸಾಹ’ ಯೋಜನೆಯನ್ನು ‘ಮತ್ತೊಂದು ಜುಮ್ಲಾ’ ಎಂದ ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ‘ಉದ್ಯೋಗ ಸಂಬಂಧಿತ ಪ್ರೋತ್ಸಾಹ’ (Employment Linked Incentive) ಯೋಜನೆಯ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಪ್ರತಿದಿನ ಹೊಸ ಘೋಷಣೆಗಳನ್ನು ನೀಡುತ್ತಿದ್ದರೂ, ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದು, ಹೊಸ ಘೋಷಣೆಯನ್ನು “ಮತ್ತೊಂದು ಜುಮ್ಲಾ” ಎಂದು ಶುಕ್ರವಾರ ಕರೆದಿದ್ದಾರೆ.

“2024 ರ ಚುನಾವಣೆಯ ನಂತರ, ಪ್ರಧಾನಿ ಮೋದಿ “ಉದ್ಯೋಗ ಸಂಬಂಧಿತ ಪ್ರೋತ್ಸಾಹ” ಯೋಜನೆಯನ್ನು ಬಹಳ ಅಬ್ಬರದಿಂದ ಘೋಷಿಸಿದರು, ನಮ್ಮ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದರು. ಆದರೆ, ಯೋಜನೆಯನ್ನು ಘೋಷಿಸಿ ಸುಮಾರು ಒಂದು ವರ್ಷವಾಗಿದೆ. ಸರ್ಕಾರ ಇನ್ನೂ ಅದನ್ನು ವ್ಯಾಖ್ಯಾನಿಸಿಲ್ಲ ಮತ್ತು ಅದಕ್ಕೆ ನಿಗದಿಪಡಿಸಿದ 10,000 ಕೋಟಿ ರೂ.ಗಳನ್ನು ಹಿಂದಿರುಗಿಸಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ಕಾರದ ಈ ನಡೆಯೆ ಪ್ರಧಾನಿ ನಿರುದ್ಯೋಗದ ಬಗ್ಗೆ ಎಷ್ಟು ಗಂಭೀರವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ರಾಹುಲ್ ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

https://twitter.com/RahulGandhi/status/1910555339834949893

ದೊಡ್ಡ ಕಾರ್ಪೊರೇಟ್‌ಗಳ ಕಂಪೆನಿಗಳ ಮೇಲೆ ಮಾತ್ರ ಕೇಂದ್ರೀಕರಿಸುವ ಮೂಲಕ, ನ್ಯಾಯಯುತ ವ್ಯವಹಾರಗಳಿಗಿಂತ ಆಪ್ತಮಿತ್ರರನ್ನು ಉತ್ತೇಜಿಸುವ ಮೂಲಕ, ಉತ್ಪಾದನೆಗಿಂತ ಸಭೆಗಳಿಗೆ ಆದ್ಯತೆ ನೀಡುವ ಮೂಲಕ ಮತ್ತು ಭಾರತದ ಸ್ಥಳೀಯ ಕೌಶಲ್ಯಗಳನ್ನು ನಿರ್ಲಕ್ಷಿಸುವ ಮೂಲಕ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“MSME ಗಳಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಮಾಡುವುದು, ಸ್ಪರ್ಧೆ ಇರುವ ನ್ಯಾಯಯುತ ಮಾರುಕಟ್ಟೆಗಳ ನಿರ್ಮಾಣ, ಸ್ಥಳೀಯ ಉತ್ಪಾದನಾ ಜಾಲಗಳಿಗೆ ಬೆಂಬಲ ನೀಡುವುದು ಮತ್ತು ಸರಿಯಾದ ಕೌಶಲ್ಯಗಳನ್ನು ಹೊಂದಿರುವ ಯುವಕರಿಗೆ ಪ್ರೋತ್ಸಾಹ ನೀಡುವುದು ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸುವ ಮಾರ್ಗವಾಗಿದೆ” ಎಂದು ಅವರು ಹೇಳಿದ್ದಾರೆ.

“ಪ್ರಧಾನಿ ಈ ವಿಚಾರಗಳನ್ನು ಒಪ್ಪುವುದಿಲ್ಲ. ಆದರೆ ನಾನು ಅವರನ್ನು ನೇರವಾಗಿ ಕೇಳಬೇಕು: ಪ್ರಧಾನಿ ಅವರೇ, ನೀವು ಉತ್ತಮ ಪ್ರಚಾರದೊಂದಿಗೆ Employment Linked Incentive ಅನ್ನು ಘೋಷಿಸಿದ್ದೀರಿ – ಆದರೆ ಈ 10,000 ಕೋಟಿ ರೂ. ಯೋಜನೆ ಎಲ್ಲಿ ಕಣ್ಮರೆಯಾಯಿತು?. ನೀವು ನಿಮ್ಮ ಭರವಸೆಗಳ ಜೊತೆಗೆ ನಮ್ಮ ನಿರುದ್ಯೋಗಿ ಯುವಕರನ್ನು ಕೈಬಿಟ್ಟಿದ್ದೀರಾ?. ನೀವು ಪ್ರತಿದಿನ ಹೊಸ ಘೋಷಣೆಗಳನ್ನು ನೀಡುತ್ತಿದ್ದೀರಿ. ನಮ್ಮ ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಕೇಳಿದ್ದಾರೆ.

ಭಾರತಕ್ಕೆ ತೀರಾ ಅಗತ್ಯವಿರುವ ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸಲು ನಿಮ್ಮ ಯೋಜನೆ ಏನು, ಅಥವಾ ಇದು ಮತ್ತೊಂದು ಜುಮ್ಲಾವೆ? ಎಂದು ಅವರು ಕೇಳಿದ್ದಾರೆ. ಅದಾನಿ ಮತ್ತು ಅವರ ಬಿಲಿಯನೇರ್ ಸ್ನೇಹಿತರನ್ನು ಶ್ರೀಮಂತಗೊಳಿಸುವುದರಿಂದ ತಳಮಟ್ಟದಲ್ಲಿರುವ ಸಮುದಾಯಗಳ ಯುವಜನರಿಗೆ ಉದ್ಯೋಗದಲ್ಲಿ ಸಮಾನ ಪ್ರವೇಶವನ್ನು ಖಚಿತಪಡಿಸಿಕೊಳ್ಳುವತ್ತ ಪ್ರಧಾನಿ ಯಾವಾಗ ಗಮನ ಹರಿಸುತ್ತಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...