Homeಅಂತರಾಷ್ಟ್ರೀಯತಾರಕಕ್ಕೇರಿದ ವ್ಯಾಪಾರ ಸಮರ: ಅಮೆರಿಕ ಮೇಲೆ ಶೇ.125 ಸುಂಕ ಹೇರಿದ ಚೀನಾ

ತಾರಕಕ್ಕೇರಿದ ವ್ಯಾಪಾರ ಸಮರ: ಅಮೆರಿಕ ಮೇಲೆ ಶೇ.125 ಸುಂಕ ಹೇರಿದ ಚೀನಾ

- Advertisement -
- Advertisement -

ಟ್ರಂಪ್ ಪ್ರತಿ ಸುಂಕದಿಂದ ಪ್ರಾರಂಭಗೊಂಡಿರುವ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧ ತಾರಕಕ್ಕೇರಿದ್ದು, ಅಮೆರಿಕ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ.84 ರಿಂದ 125ಕ್ಕೆ ಹೆಚ್ಚಿಸುವುದಾಗಿ ಚೀನಾ ಘೋಷಿಸಿದೆ. ಶನಿವಾರದಿಂದಲೇ (ಏ.12) ಹೆಚ್ಚುವರಿ ಸುಂಕ ಜಾರಿಗೆ ಬರಲಿದೆ ಎಂದಿದೆ.

ಅಮೆರಿಕದ ಏಕಪಕ್ಷೀಯ ಬೆದರಿಕೆಯನ್ನು ಎದುರಿಸಲು ಕೈ ಜೋಡಿಸುವಂತೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಅವರು ಶುಕ್ರವಾರ ಯುರೋಪಿಯನ್ ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ.

ವರದಿಗಳ ಪ್ರಕಾರ, ಗುರುವಾರ (ಏ.10) ಚೀನಾ ಮೇಲಿನ ಪ್ರತಿ ಸುಂಕವನ್ನು ಅಮೆರಿಕ ಶೇ.125ಕ್ಕೆ ಹೆಚ್ಚಿಸಿತ್ತು. ಶುಕ್ರವಾರ ಅದನ್ನು ಶೇ.145ಕ್ಕೆ ಹೆಚ್ಚಿಸಲಾಗಿದೆ. ಈ ಬೆನ್ನಲ್ಲೇ ಅಮೆರಿಕ ಮೇಲಿನ ಸುಂಕವನ್ನು ಶೇ.125ಕ್ಕೆ ಹೆಚ್ಚಿಸುವುದಾಗಿ ಚೀನಾ ಘೋಷಿಸಿದೆ.

“ನಾವು ಪ್ರತಿ ಸುಂಕ ವಿಧಿಸಿದ್ದಕ್ಕೆ ನಮ್ಮ ಮೇಲಿನ ಸುಂಕ ಹೆಚ್ಚಿಸಿ ಚೀನಾ ಪ್ರತೀಕಾರ ತೀರಿಸಿಕೊಂಡಿದೆ. ಅದಕ್ಕೆ ನಾವು ಅವರಿಗೆ ಹೆಚ್ಚುವರಿ ಸುಂಕ ವಿಧಿಸಿದ್ದೇವೆ. ನಮ್ಮೊಂದಿಗೆ ಪ್ರತೀಕಾರಕ್ಕೆ ಮುಂದಾಗದ 75 ದೇಶಗಳಿಗೆ 90 ದಿನಗಳ ಸುಂಕ ವಿನಾಯಿತಿ ಘೋಷಿಸಿದ್ದೇವೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದರು.

“ಅಮೆರಿಕ ಈಗ ವಿಧಿಸಿರುವ ಸುಂಕವನ್ನು ಒಪ್ಪಿಕೊಂಡು ಅವರು ರಪ್ತು ಮಾಡಿರುವ ಸರಕುಗಳನ್ನು ಸ್ಪೀಕರಿಸಲು ಸಾಧ್ಯವಿಲ್ಲ” ಎಂದು ಚೀನಾದ ಹಣಕಾಸು ಸಚಿವಾಲಯ ಹೇಳಿದೆ. ಅಮೆರಿಕದ ಮುಂದಿನ ಕ್ರಮವನ್ನು ನಿರ್ಲಕ್ಷಿಸಲಾಗುವುದು ಎಂದಿದೆ.

“ಚೀನಾದ ಮೇಲೆ ಅಮೆರಿಕ ಅಸಹಜವಾಗಿ ಹೆಚ್ಚಿನ ಸುಂಕಗಳನ್ನು ಹೇರುತ್ತಿರುವುದು ಅರ್ಥಶಾಸ್ತ್ರದಲ್ಲಿ ಪ್ರಾಯೋಗಿಕ ಮಹತ್ವವಿಲ್ಲದ ಸಂಖ್ಯಾ ಆಟವಾಗಿದೆ. ಅಮೆರಿಕ ಈ ಆಟವನ್ನು ಮುಂದುವರಿಸಿದರೆ, ಚೀನಾ ಅದನ್ನು ನಿರ್ಲಕ್ಷಿಸುತ್ತದೆ” ಎಂದು ಹಣಕಾಸು ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಟ್ರಂಪ್ ಅವರ ಸುಂಕ ಹೇರಿಕೆಯಿಂದ ಉಂಟಾದ ಜಾಗತಿಕ ಆರ್ಥಿಕ ಪ್ರಕ್ಷುಬ್ಧತೆಗೆ ಅಮೆರಿಕ ಸಂಪೂರ್ಣ ಹೊಣೆ ಹೊರಬೇಕು ಎಂದಿದೆ.

ಅಮೆರಿಕದ ಸುಂಕ ಹೇರಿಕೆಯಿಂದ ವಿಶ್ವ ಆರ್ಥಿಕತೆ, ಜಾಗತಿಕ ಮಾರುಕಟ್ಟೆಗಳು ಮತ್ತು ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಗಳ ಮೇಲೆ ಗಂಭೀರ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಚೀನಾ ವಾಣಿಜ್ಯ ಸಚಿವಾಲಯದ ವಕ್ತಾರರು ಆರೋಪಿಸಿದ್ದಾರೆ.

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...