Homeಮುಖಪುಟತಜ್ಞರನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಎಂದ ಎಬಿವಿಪಿ | ಕಾರ್ಯಕ್ರಮದಿಂದ ಹೆಸರು ಕೈಬಿಟ್ಟ ಐಐಎಸ್‌ಇಆರ್

ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದ ಎಬಿವಿಪಿ | ಕಾರ್ಯಕ್ರಮದಿಂದ ಹೆಸರು ಕೈಬಿಟ್ಟ ಐಐಎಸ್‌ಇಆರ್

- Advertisement -
- Advertisement -

ಎಬಿವಿಪಿ ನಡೆಸಿದ ಪ್ರತಿಭಟನೆಗಳ ಕಾರಣಕ್ಕೆ ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ(IISER) ಗುರುವಾರ ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಲು ಆಹ್ವಾನಿಸಲಾದ ಹಲವಾರು ತಜ್ಞರನ್ನು ಕೈಬಿಟ್ಟಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾರ್ಯಕ್ರಮದಲ್ಲಿ ಮಾತನಾಡಲು ಬರುವ ತಜ್ಞರು “ತುಕ್ಡೆ ತುಕ್ಡೆ ಗ್ಯಾಂಗ್‌ ಸದಸ್ಯರು” ಎಂದು ಆರೋಪಿಸಿ ಎಬಿವಿಪಿ ಪ್ರತಿಭಟನೆ ಮಾಡಿತ್ತು. ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’

ಎಬಿವಿಪಿಯು ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ. ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳ ನಾಯಕರು ತಮ್ಮ ವಿರೋಧಿಗಳು ಮತ್ತು ಭಿನ್ನಮತೀಯರನ್ನು “ತುಕ್ಡೆ ತುಕ್ಡೆ” ಗ್ಯಾಂಗ್ ಅಥವಾ ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ಗುಂಪಿನ ಸದಸ್ಯರು ಎಂದು ಆಗಾಗ್ಗೆ ಆರೋಪಿಸುತ್ತಾರೆ.

ಪತ್ರಿಕಾ ಹೇಳಿಕೆಯಲ್ಲಿ, ಅಂಬೇಡ್ಕರ್ ಅವರ ವಾರ್ಷಿಕೋತ್ಸವವನ್ನು ಆಚರಿಸಲು ಸರಣಿ ಮಾತುಕತೆಗಳನ್ನು ಆಯೋಜಿಸಲಾಗಿದೆ ಎಂದು IISER ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ವಿದ್ಯಾರ್ಥಿ ನೇತೃತ್ವದ ಮುಕ್ತಿಪರ್ವ ಕಾರ್ಯಕ್ರಮದ ಭಾಗವಾಗಿ, ಸಾಮಾಜಿಕ ಸಮಾನತೆ, ಜಾತಿ ಮತ್ತು ಲಿಂಗ ಚಲನಶೀಲತೆ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಶಿಕ್ಷಣ ತಜ್ಞರಿಂದ ಸಂಸ್ಥೆಯಲ್ಲಿ ಸಂವಾದಗಳನ್ನು ಯೋಜಿಸಲಾಗಿತ್ತು” ಎಂದು ಸಂಸ್ಥೆ ಹೇಳಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ದೀಪಾಲಿ ಸಾಳ್ವೆ, ನಜೀಮಾ ಪರ್ವೀನ್ ಮತ್ತು ಸ್ಮಿತಾ ಎಂ ಪಾಟೀಲ್ ಸೇರಿದಂತೆ ಹಲವಾರು ಶಿಕ್ಷಣ ತಜ್ಞರನ್ನು ಜಾತಿ, ಅರ್ಥಶಾಸ್ತ್ರ ಮತ್ತು ಲಿಂಗ ಚಲನಶೀಲತೆಯ ಬಗ್ಗೆ ಮಾತನಾಡಲು ಆಹ್ವಾನಿಸಲಾಗಿತ್ತು ಎಂದು ಅದು ಹೇಳಿದೆ. “ಆದಾಗ್ಯೂ, ವಿವಾದವನ್ನು ತಪ್ಪಿಸಲು, ಈ ಸಮಯದಲ್ಲಿ ಯೋಜಿತ ಭಾಷಣಕಾರರನ್ನು ಕೈಬಿಡಲು ನಾವು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಸಂಸ್ಥೆ ಹೇಳಿದೆ.

ಸಂಸ್ಥೆಯು ನಿರ್ಧಾರ ತೆಗೆದುಕೊಳ್ಳುವ ಒಂದು ದಿನದ ಮೊದಲು, ಎಬಿವಿಪಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಭಾಷಣಕಾರರ ವಿರುದ್ಧ ತಮ್ಮ ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಸಂಸ್ಥೆಯ ನಿರ್ದೇಶಕ ಸುನಿಲ್ ಭಾಗವತ್ ಅವರನ್ನು ಭೇಟಿಯಾಗಿದ್ದ ಎಬಿವಿಪಿ ಸದಸ್ಯರು, ಮಾತನಾಡಲು ಆಹ್ವಾನಿಸಲಾದ “ಕಟ್ಟರ್‌ ಮಾವೋವಾದಿಗಳ” ಉಪಸ್ಥಿತಿಯನ್ನು ಆಕ್ಷೇಪಿಸುವುದಾಗಿ ಹೇಳಿದ್ದರು.

“ಅವರ ಹೇಳಿಕೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆ ಉಂಟುಮಾಡುವ ಸಾಧ್ಯತೆಯಿದೆ. ಜೊತೆಗೆ ಅವರು ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಾರೆ. ಅಲ್ಲದೆ, ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ಎಡಪಂಥೀಯರ ಸಿದ್ಧಾಂತವನ್ನು ವಿರೋಧಿಸಿದ್ದರು ಎಂದು ಅದು ಹೇಳಿಕೊಂಡಿದೆ.

“ಐಐಎಸ್‌ಇಆರ್ ಅವರ ಜಯಂತಿಯ ಸಂದರ್ಭದಲ್ಲಿ ‘ತುಕ್ಡೆ ತುಕ್ಡೆ ಗ್ಯಾಂಗ್’ ಜೊತೆಗೆ ಗುರುತಿಸಿಕೊಂಡ ಸದಸ್ಯರ ಉಪಸ್ಥಿತಿಗೆ ಅವಕಾಶ ನೀಡಿದ್ದು ಏಕೆ?. ಕಳೆದ ವರ್ಷ ಮುಕ್ತಿಪರ್ವದ ಸಂದರ್ಭದಲ್ಲಿ, ಭಾಷಣಕಾರರು ಜನರ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಗಳನ್ನು ನೀಡಿದ್ದರು.” ಎಂದು ಎಬಿವಿಪಿ ಕೇಳಿದೆ. ಕಾರ್ಯಕ್ರಮದ ಬಗ್ಗೆ ಪುಣೆ ಪೊಲೀಸರಿಗೆ ಕೂಡಾ ಎಬಿವಿಪಿ ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ. ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...