Homeಕರ್ನಾಟಕಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

- Advertisement -
- Advertisement -

ಗಿಗ್ ಕಾರ್ಮಿಕರ ಉದ್ಯೋಗ ಅಭದ್ರತೆ, ಸೌಲಭ್ಯಗಳ ಕೊರತೆ ಮತ್ತು ಸಮರ್ಪಕ ದೂರು ನಿವಾರಣಾ ವ್ಯವಸ್ಥೆಯ ಕೊರತೆಯನ್ನು ನೀಗಿಸಲು ರಾಜ್ಯ ಸಚಿವ ಸಂಪುಟವು ಶುಕ್ರವಾರ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮಸೂದೆಯನ್ನು ಅನುಮೋದಿಸಿದೆ. ಮಸೂದೆಯು ರಾಜ್ಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಒಂದು ಮಂಡಳಿಯನ್ನು ಸ್ಥಾಪಿಸಲು ಇ-ಕಾಮರ್ಸ್ ವೇದಿಕೆಗಳ ಮೇಲೆ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಗಿಗ್ ಕಾರ್ಮಿಕರ ಕಲ್ಯಾಣ

ಕರ್ನಾಟಕ ಫ್ಲಾಟ್‌ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ-2024 ಎಂಬ ಹೆಸರಿನ ಈ ಮಸೂದೆಯು ಫ್ಲಾಟ್‌ಫಾರ್ಮ್‌ ಕಂಪೆನಿಗಳು ಗಿಗ್ ಕಾರ್ಮಿಕರಿಗೆ ಮಾಡುವ ಪ್ರತಿ ವಹಿವಾಟು ಅಥವಾ ಪಾವತಿಯ ಮೇಲೆ 1% ಕ್ಕಿಂತ ಕಡಿಮೆಯಿಲ್ಲದ ಮತ್ತು 5% ಕ್ಕಿಂತ ಹೆಚ್ಚಿಲ್ಲದ ಕಲ್ಯಾಣ ಸೆಸ್ ಅನ್ನು ಪ್ರಸ್ತಾಪಿಸಿದೆ.

ಪ್ರಸ್ತಾವಿತ ಮಸೂದೆಯ ಪ್ರಕಾರ, ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸಹ ಸ್ಥಾಪಿಸಲಾಗುವುದು. ಇದನ್ನು ಸಂಗ್ರಹಿಸಿದ ಸೆಸ್‌ನಿಂದ ಭಾಗಶಃ ಹಣವನ್ನು ನೀಡಲಾಗುತ್ತದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಇದರ ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರದ ಪ್ರತಿನಿಧಿಗಳು, ಗಿಗ್ ಕಾರ್ಮಿಕರು, ಸಂಗ್ರಾಹಕರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಒಳಗೊಂಡಿರುತ್ತದೆ.

ಈ ತಿಂಗಳ ಆರಂಭದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಲಾಡ್ ಹಾಜರಿದ್ದ ಸಭೆಯಲ್ಲಿ ಮಂಡಳಿಯನ್ನು ಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

“ಮಂಡಳಿಯ ಪ್ರಮುಖ ಜವಾಬ್ದಾರಿಗಳಲ್ಲಿ ಗಿಗ್ ಕಾರ್ಮಿಕರ ನೋಂದಣಿಯನ್ನು ಖಚಿತಪಡಿಸಿಕೊಳ್ಳುವುದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಗ್ರಾಹಕರು ಅಥವಾ ವೇದಿಕೆಗಳ ನೋಂದಣಿಯನ್ನು ಪರಿಶೀಲಿಸುವುದು, ಕಲ್ಯಾಣ ಸೆಸ್‌ನ ಸರಿಯಾದ ಸಂಗ್ರಹವನ್ನು ಪ್ರಮಾಣೀಕರಿಸುವುದು ಮತ್ತು ಸಾಮಾನ್ಯ ಮತ್ತು ನಿರ್ದಿಷ್ಟ ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವುದು ಸೇರಿವೆ” ಎಂದು ಸಂತೋಷ್‌ ಲಾಡ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳಿಂದ ಪ್ರಯೋಜನಗಳು ಗಿಗ್ ಕೆಲಸಗಾರರನ್ನು ಪರಿಣಾಮಕಾರಿಯಾಗಿ ತಲುಪುವುದನ್ನು ಮಂಡಳಿಯು ಖಚಿತಪಡಿಸುತ್ತದೆ ಮತ್ತು ಫ್ಲಾಟ್‌ಫಾರ್ಮ್‌ ಆಧಾರಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳ ವಿತರಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ಆಂತರಿಕ ವಿವಾದ ಪರಿಹಾರ ಸಮಿತಿ ಅಥವಾ 14 ದಿನಗಳ ಪರಿಹಾರದ ಸಮಯಾವಧಿಯನ್ನು ಹೊಂದಿರುವ ವೆಬ್-ಪೋರ್ಟಲ್ ಮೂಲಕ ಕಾರ್ಮಿಕರು ಕುಂದುಕೊರತೆಗಳನ್ನು ಸಲ್ಲಿಸಲು ಮಸೂದೆಯು ಅವಕಾಶ ನೀಡುತ್ತದೆ.

ಕಾರ್ಮಿಕರು ಕೆಲಸಗಳನ್ನು ನಿರಾಕರಿಸಲು ಅನುಮತಿಸುವ ನಿಬಂಧನೆಯನ್ನು ಮಸೂದೆ ಒಳಗೊಂಡಿದ್ದು, ಫ್ಲಾಟ್‌ಫಾರ್ಮ್‌ಗಳು 14 ದಿನಗಳ ಮುಂಚಿತವಾಗಿ ಒಪ್ಪಂದ ಬದಲಾವಣೆಗಳ ಬಗ್ಗೆ ಕಾರ್ಮಿಕರಿಗೆ ತಿಳಿಸಬೇಕಾಗಿದೆ.

ಕಾನೂನಿನ ಉಲ್ಲಂಘನೆ ನಡೆದರೆ ಮೊದಲ ಅಪರಾಧಕ್ಕೆ 5,000 ರೂ. ಮತ್ತು ನಂತರದ ಅಪರಾಧಗಳಿಗೆ 1 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಜೊತೆಗೆ ಕಲ್ಯಾಣ ಶುಲ್ಕವನ್ನು ಪಾವತಿಸದಿರುವುದು ಅಥವಾ ಇತರ ಅನುಸರಣೆಗೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ.

ಸರ್ಕಾರ ಈ ಘೋಷಣೆ ಮಾಡಿದನ ನಂತರ, NASSCOM ಮತ್ತು ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ​​ಆಫ್ ಇಂಡಿಯಾ (IAMAI) ನಂತಹ ಕಂಪೆನಿಗಳ ಸಂಘಟನೆಗಳು, ಇಂತಹ ಮಸೂದೆಯು ಇ-ಕಾಮರ್ಸ್ ಸಂಸ್ಥೆಗಳ ಮೇಲೆ, ವಿಶೇಷವಾಗಿ ಈಗಾಗಲೇ ಕಡಿಮೆ ಲಾಭ ಗಳಿಸುತ್ತಿರುವ ಸ್ಟಾರ್ಟ್‌ಅಪ್‌ ಕಂಪೆನಿಗಳ ಮೇಲೆ ಸಂಭಾವ್ಯ ಹೊರೆಯನ್ನು ಉಂಟು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿವೆ.

  ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...