Homeಮುಖಪುಟವಕ್ಫ್ ಕಾಯ್ದೆ ಬಗ್ಗೆ ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

ವಕ್ಫ್ ಕಾಯ್ದೆ ಬಗ್ಗೆ ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆಯ ಕುರಿತು ಸಂಸತ್ತಿನಲ್ಲಿ ನಡೆದ ಸುದೀರ್ಘ ಚರ್ಚೆಯ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾತನಾಡದಿದ್ದಕ್ಕಾಗಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದಲಿತರು, ಅಲ್ಪಸಂಖ್ಯಾತರ ವಿಚಾರದಲ್ಲಿ ಸಮಾನವಾಗಿ ವಿಫಲವಾಗಿದೆ ಎಂದು ಹೇಳಿದ್ದಾರೆ. ವಕ್ಫ್ ಕಾಯ್ದೆ

“ರಾಹುಲ್ ಗಾಂಧಿ ಅವರು ವಕ್ಫ್ ವಿಚಾರದಲ್ಲಿ ಮಾತನಾಡದೆ ಇರುವುದರಿಂದ ಮುಸ್ಲಿಮರು ತೀವ್ರಗಾಗಿ ಕೋಪಗೊಳ್ಳುವುದು ಮತ್ತು ಇಂಡಿಯಾ ಮೈತ್ರಿಯ ಪಕ್ಷಗಳು ಈ ವಿಷಯದ ಬಗ್ಗೆ ಆಕ್ರೋಶಗೊಳ್ಳುವುದು ಸಹಜ” ಎಂದು ಮಾಯಾವತಿ ಹೇಳಿದ್ದಾರೆ.

“ವಿರೋಧ ಪಕ್ಷಗಳು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಖಂಡಿಸಿ, ಸಿಎಎಯಂತೆ ಸಂವಿಧಾನವನ್ನು ಉಲ್ಲಂಘಿಸಿದ ಪ್ರಕರಣ ಎಂದು ಕರೆದರೂ, ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ವ್ಯಾಪಕ ಚರ್ಚೆ ನಡೆದಿದ್ದರೂ ಸಹ, ಸದನದಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ಮಾತನಾಡದಿರಲು ವಿಪಕ್ಷ ನಾಯಕ ತೆಗೆದುಕೊಂಡ ನಿರ್ಧಾರ ಸಮರ್ಥನೀಯವೇ?” ಎಂದು ಅವರು ಎಕ್ಸ್‌ನಲ್ಲಿ ಕೇಳಿದ್ದಾರೆ.

ಯಾವುದೇ ಸಂದರ್ಭ ಇರಲಿ, ಕಾಂಗ್ರೆಸ್ ಮತ್ತು ಬಿಜೆಪಿ ದಲಿತರ ಕಲ್ಯಾಣ, ಸರ್ಕಾರಿ ಉದ್ಯೋಗಗಳು, ಶಿಕ್ಷಣದಿಂದ ವಾಸ್ತವದಲ್ಲಿ ವಂಚಿತಗೊಳಿಸಿದ್ದಕ್ಕಾಗಿ ಸಮಾನವಾಗಿ ತಪ್ಪಿತಸ್ಥರು ಎಂದು ಮಾಯಾವತಿ ಹೇಳಿದ್ದಾರೆ. “ಈ ಪಕ್ಷಗಳ ವಂಚನೆಯಿಂದ ತಪ್ಪಿಸಿಕೊಳ್ಳುವ ಅಗತ್ಯವನ್ನು ಧಾರ್ಮಿಕ ಅಲ್ಪಸಂಖ್ಯಾತರು ಅರಿತುಕೊಳ್ಳುವುದು ಮುಖ್ಯ” ಎಂದು ಅವರು ಹೇಳಿದ್ದಾರೆ.

ಈ ಪಕ್ಷಗಳ ಇಂತಹ ತಂತ್ರಗಳಿಂದಾಗಿ ಬಹುಜನರು ಎಲ್ಲಾ ವಲಯದಲ್ಲೂ ಕಳಪೆ ಸಾಧನೆ ಮಾಡಿದ್ದಾರೆ ಎಂದು ಮಾಯಾವತಿ ಪ್ರತಿಪಾದಿಸಿದ್ದಾರೆ. “ಅಧಿಕಾರ ಮತ್ತು ಇತರ ಕ್ಷೇತ್ರಗಳಲ್ಲಿ ಖಾಸಗೀಕರಣದ ವಿಷಯವು ಸಹ ಆತಂಕಕಾರಿಯಾಗಿದೆ ಮತ್ತು ಸರ್ಕಾರವು ಜನರ ಕಲ್ಯಾಣದ ಕಡೆಗೆ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು” ಎಂದು ಅವರು ಹೇಳಿದ್ದಾರೆ.

ಹೊಸ ವಕ್ಫ್ ಕಾನೂನಿನಲ್ಲಿರುವ ನಿಬಂಧನೆಗಳನ್ನು ಮರುಪರಿಶೀಲಿಸುವಂತೆ ಮತ್ತು ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಬಿಎಸ್‌ಪಿಯ ಮುಖ್ಯಸ್ಥರೂ ಆಗಿರುವ ಮಾಯಾವತಿ ಅವರು ಗುರುವಾರ ಕೇಂದ್ರ ಸರ್ಕಾರವನ್ನು ಕೇಳಿದ್ದರು. ಇತ್ತೀಚೆಗೆ ಅಂಗೀಕರಿಸಲಾದ ವಕ್ಫ್ ಕಾಯ್ದೆಯಲ್ಲಿ, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಕಾಯ್ದೆಯ ನಿಬಂಧನೆಯು ಪ್ರಾಥಮಿಕ ನೋಟದಲ್ಲಿ ಉತ್ತಮವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಮಂಗಳವಾರ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅನ್ನು ಅಧಿಸೂಚನೆ ಹೊರಡಿಸಿದೆ. ಇದು ಎರಡೂ ಸದನಗಳಲ್ಲಿ ಬಿಸಿ ಚರ್ಚೆಗಳ ನಂತರ ಸಂಸತ್ತಿನಲ್ಲಿ ಅಂಗೀಕಾರವಾಗಿತ್ತು. ಅದರ ನಂತರ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆಯಿತು. ಮಸೂದೆಯನ್ನು ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರು ಮತ್ತು 232 ಸದಸ್ಯರು ವಿರೋಧಿಸಿ ಮತ ಚಲಾಯಿಸಿದರು. ವಕ್ಫ್ ಕಾಯ್ದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Man evolved and then came religion/caste/restrictions etc?
    For such evolution man/woman mating relations were necssary and essential?
    Persons of different religions mating will result in children, family etc?

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...